ಮೊರ್ಬಿ ಸೇತುವೆ ಕುಸಿತ 
ದೇಶ

ಮೊರ್ಬಿ ದುರಂತ: ನರಹತ್ಯೆಗೆ ಯತ್ನ, ಸೇತುವೆ ನಿರ್ವಹಣಾ ಏಜೆನ್ಸಿ ವಿರುದ್ಧ ಎಫ್ ಐಆರ್ ದಾಖಲು

ಗುಜರಾತ್​ನ ಮೊರ್ಬಿಯ ನವೀಕರಣಗೊಂಡ ಶತಮಾನಗಳಷ್ಟು ಹಳೆಯದಾದ ಸೇತುವೆ ಕುಸಿದು ಕುಸಿತ ಘಟನೆಗೆ ಸಂಬಂಧಿಸಿದಂತೆ ಸೇತುವೆಯನ್ನು ನಿರ್ವಹಣೆ ಮಾಡುತ್ತಿದ್ದ ಏಜೆನ್ಸಿ ವಿರುದ್ಧ ನರಹತ್ಯೆಗೆ ಯತ್ನ ಆರೋಪದಲ್ಲಿ ಗುಜುರಾತ್ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ.

ಮೊರ್ಬಿ: ಗುಜರಾತ್​ನ ಮೊರ್ಬಿಯ ನವೀಕರಣಗೊಂಡ ಶತಮಾನಗಳಷ್ಟು ಹಳೆಯದಾದ ಸೇತುವೆ ಕುಸಿದು ಕುಸಿತ ಘಟನೆಗೆ ಸಂಬಂಧಿಸಿದಂತೆ ಸೇತುವೆಯನ್ನು ನಿರ್ವಹಣೆ ಮಾಡುತ್ತಿದ್ದ ಏಜೆನ್ಸಿ ವಿರುದ್ಧ ನರಹತ್ಯೆಗೆ ಯತ್ನ ಆರೋಪದಲ್ಲಿ ಗುಜುರಾತ್ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ.

ಮೊರ್ಬಿ ಸೇತುವೆ ನಿರ್ವಹಣೆ ಮಾಡುತ್ತಿದ್ದ ಏಜೆನ್ಸಿ ವಿರುದ್ಧ  ಐಪಿಸಿ ಸೆಕ್ಷನ್ 308( ನರಹತ್ಯೆಗೆ ಪ್ರಯತ್ನ) 304 ಮತ್ತು 114ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಮೊರ್ಬಿ ವಿಭಾಗದ ಪೊಲೀಸ್ ಇನ್ಸ್ ಪೆಕ್ಟರ್ ಪ್ರಕಾಶ್ ಬಾಯಿ ದೇಕವಾಡಿಯಾ ತಿಳಿಸಿದ್ದಾರೆ.

ಏಜೆನ್ಸಿ ಸೇತುವೆ ಬಗ್ಗೆ ನಿಗಾ ವಹಿಸಿರಲಿಲ್ಲ. ಅದರ ಗುಣಮಟ್ಟವನ್ನು ಪರೀಕ್ಷಿಸದೆ ಅಕ್ಟೋಬರ್ 26 ರಂದು ಸಾರ್ವಜನಿಕರಿಗೆ ಮುಕ್ತಗೊಳಿಸಲಾಗಿತ್ತು. ನಿರ್ವಹಣೆಯಲ್ಲಿ ತೀವ್ರ ನಿರ್ಲಕ್ಷ್ಯ ಕಂಡುಬಂದಿದೆ. ವರದಿಗಳ ಪ್ರಕಾರ  ನವೀಕರಣಕ್ಕಾಗಿ 8 ತಿಂಗಳ ಕಾಲ ಸೇತುವೆಯನ್ನು ಮುಚ್ಚಲಾಗಿತ್ತು. ಖಾಸಗಿ ಏಜೆನ್ಸಿಯಿಂದ ನವೀಕರಣ ಮಾಡಲಾಗಿತ್ತು ಎಂದು ಅವರು ಮಾಹಿತಿ ನೀಡಿದ್ದಾರೆ.

ಸರಿಯಾದ ರೀತಿಯಲ್ಲಿ ನವೀಕರಣ, ನಿರ್ವಹಣೆ ಮಾಡದೆ, ತೀವ್ರ ನಿರ್ಲಕ್ಷ್ಯದಿಂದ ಕೇಬಲ್ ಸೇತುವೆಯನ್ನು ಸಾರ್ವಜನಿಕ ಬಳಕೆಗೆ ಮುಕ್ತಗೊಳಿಸಲಾಗಿತ್ತು. ಹೀಗಾಗಿ ವಿವಿಧ ಸೆಕ್ಷನ್ ಗಳಡಿ  ನಿರ್ವಹಣಾ ಏಜೆನ್ಸಿ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ ಎಂದು ಪೊಲೀಸ್ ಇನ್ಸ್ ಪೆಕ್ಟರ್ ದೇಕವಾಡಿಯಾ ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ವಿದೇಶದಲ್ಲೂ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ಅಮೆರಿಕಾ ಸೇರಿದಂತೆ ಮೂರು ರಾಷ್ಟ್ರಗಳಿಗೆ ರಫ್ತು..!

CLP ಸಭೆಯಲ್ಲಿ ಸರ್ವಾನುಮತದಿಂದ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿತ್ತು, 50:50 ಒಪ್ಪಂದವಾಗಿಲ್ಲ: ಕೆ.ಜೆ. ಜಾರ್ಜ್ ಸ್ಪಷ್ಟನೆ

SCROLL FOR NEXT