ಅರವಿಂದ್ ಕೇಜ್ರಿವಾಲ್ 
ದೇಶ

ಸಿಸೋಡಿಯಾ ಮೇಲೆ ಸಿಬಿಐ ದಾಳಿ ನಂತರ ಗುಜರಾತ್‌ನಲ್ಲಿ ಎಎಪಿ ಮತಗಳು ಶೇ. 4 ರಷ್ಟು ಹೆಚ್ಚಾಗಿದೆ: ಕೇಜ್ರಿವಾಲ್

ಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ನಿವಾಸದ ಮೇಲೆ ಸಿಬಿಐ ದಾಳಿ ನಡೆಸಿದ ನಂತರ ಗುಜರಾತ್ ನಲ್ಲಿ ಆಮ್ ಆದ್ಮಿ ಪಕ್ಷದ ಮತ ಗಳಿಕೆಯ ಪ್ರಮಾಣ ಶೇ. 4 ರಷ್ಟು ಹೆಚ್ಚಳವಾಗಿದೆ...

ನವದೆಹಲಿ: ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ನಿವಾಸದ ಮೇಲೆ ಸಿಬಿಐ ದಾಳಿ ನಡೆಸಿದ ನಂತರ ಗುಜರಾತ್ ನಲ್ಲಿ ಆಮ್ ಆದ್ಮಿ ಪಕ್ಷದ ಮತ ಗಳಿಕೆಯ ಪ್ರಮಾಣ ಶೇ. 4 ರಷ್ಟು ಹೆಚ್ಚಳವಾಗಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಗುರುವಾರ ಹೇಳಿದ್ದಾರೆ.

ಇಂದು ದೆಹಲಿ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆ ನಿರ್ಣಯದ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಎಎಪಿ ರಾಷ್ಟ್ರೀಯ ಸಂಚಾಲಕರು ಆಗಿರುವ ಕೇಜ್ರಿವಾಲ್ ಅವರು, ಸಿಸೋಡಿಯಾ ಅವರನ್ನು ಬಂಧಿಸಿದರೆ ಗುಜರಾತ್ ನಲ್ಲಿ ಪಕ್ಷದ ಮತಗಳ ಪ್ರಮಾಣ ಶೇ.6ರಷ್ಟು ಹೆಚ್ಚಾಗಲಿದೆ ಎಂದಿದ್ದಾರೆ.

"ಸಿಬಿಐ ಸಿಸೋಡಿಯಾ ಮೇಲೆ ದಾಳಿ ನಡೆಸಿತು, ಅವರ ಗ್ರಾಮಕ್ಕೆ ಹೋಗಿ ಅವರ ಬ್ಯಾಂಕ್ ಲಾಕರ್ ಅನ್ನು ಪರಿಶೀಲಿಸಿತು. ಆದರೆ ಸಿಸೋಡಿಯಾ ಅವರ ವಿರುದ್ಧ ಯಾವುದೇ ಅಕ್ರಮ ಕಂಡುಬಂದಿಲ್ಲ ಎಂದು ಸಿಬಿಐನವರು ಹೇಳಿದ್ದಾರೆ. ಆದರೂ ಸಿಸೋಡಿಯಾ ಅವರನ್ನು ಬಂಧಿಸಲು ಅವರಿಗೆ ಒತ್ತಡವಿದೆ" ಎಂದು ಕೇಜ್ರಿವಾಲ್ ಹೇಳಿದ್ದಾರೆ. 

"ಸಿಸೋಡಿಯಾ ವಿರುದ್ಧ ಸಿಬಿಐ ದಾಳಿ ನಡೆಸಿದ ನಂತರ ಗುಜರಾತ್‌ನಲ್ಲಿ ಎಎಪಿಯ ಮತಗಳ ಪ್ರಮಾಣವು ಶೇಕಡಾ 4 ರಷ್ಟು ಹೆಚ್ಚಾಗಿದೆ. ಅವರನ್ನು ಬಂಧಿಸಿದರೆ ಅದು ಶೇಕಡಾ 6 ರಷ್ಟು ಹೆಚ್ಚಾಗುತ್ತದೆ" ಎಂದು ದೆಹಲಿ ಮುಖ್ಯಮಂತ್ರಿ ತಿಳಿಸಿದ್ದಾರೆ.

ಇದೇ ವೇಳೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಆಪ್ ನಾಯಕ, ಕೇಸರಿ ಪಕ್ಷದ ನಾಯಕರು ಎಎಪಿ ಶಾಸಕರನ್ನು ಖರೀದಿಸಲು ಪ್ರಯತ್ನಿಸಿದರು. ಆದರೆ ನಮ್ಮ ಪಕ್ಷದ ಯಾವುದೇ ಶಾಸಕರು ಅವರ ಪ್ರಸ್ತಾಪವನ್ನು ಸ್ವೀಕರಿಸಲಿಲ್ಲ ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT