ಕಾರ್ತಿಕ್ ಕುಮಾರ್ 
ದೇಶ

ಅಪಹರಣ ಆರೋಪ: ನೂತನ ಖಾತೆ ಹಂಚಿಕೆ ಬೆನ್ನಲ್ಲೇ ಬಿಹಾರ ಸಚಿವ ಕಾರ್ತಿಕ್ ರಾಜೀನಾಮೆ; ಮೊದಲ ವಿಕೆಟ್ ಪತನ-ಬಿಜೆಪಿ ಟೀಕೆ

2014ರ ಅಪಹರಣ ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಬಿಹಾರದ ಸಚಿವ ಕಾರ್ತಿಕ್ ಕುಮಾರ್, ವಿರೋಧ ಪಕ್ಷಗಳ ತೀವ್ರ ಒತ್ತಡದ ನಡುವೆ ಬುಧವಾರ ರಾತ್ರಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಪಾಟ್ನಾ: 2014ರ ಅಪಹರಣ ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಬಿಹಾರದ ಸಚಿವ ಕಾರ್ತಿಕ್ ಕುಮಾರ್, ವಿರೋಧ ಪಕ್ಷಗಳ ತೀವ್ರ ಒತ್ತಡದ ನಡುವೆ ಬುಧವಾರ ರಾತ್ರಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಸರ್ಕಾರದಲ್ಲಿ ಆರ್‌ಜೆಡಿ ಎಂಎಲ್‌ಸಿ ಕಾರ್ತಿಕ್ ಕುಮಾರ್ ಅವರು ಕಾನೂನು ಸಚಿವರಾಗಿದ್ದರು. ಆದರೆ ಕಬ್ಬು ಉದ್ಯಮ ಸಚಿವರಾಗಿ ಖಾತೆ ಬದಲಾಯಿಸಿದ್ದ ಕೆಲವೇ ಗಂಟೆಗಳಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಸಚಿವರ ರಾಜೀನಾಮೆ ಪತ್ರವನ್ನು ಬಿಹಾರ ರಾಜ್ಯಪಾಲರು ಅಂಗೀಕರಿಸಿದ್ದಾರೆ. ಕಂದಾಯ ಸಚಿವ ಅಲೋಕ್ ಕುಮಾರ್ ಮೆಹ್ತಾ ಅವರಿಗೆ ಕಬ್ಬು ಉದ್ಯಮ ಸಚಿವಾಲಯದ ಹೆಚ್ಚುವರಿ ಹೊಣೆ ವಹಿಸಲಾಗಿದೆ.

ಕಾರ್ತಿಕ್ ಕುಮಾರ್ ರಾಜೀನಾಮೆಯ ನಂತರ,  ನಿತೀಶ್ ಕುಮಾರ್ ವಿರುದ್ಧ ಬಿಜೆಪಿಯ ಹಿರಿಯ ನಾಯಕ ಸುಶೀಲ್ ಕುಮಾರ್ ಮೋದಿ ಹರಿಹಾಯ್ದಿದ್ದಾರೆ.  ಬಿಹಾರದಲ್ಲಿ ಮಹಾಮೈತ್ರಿಕೂಟದ ಮೇಲೆ ವಾಗ್ದಾಳಿ ನಡೆಸಿದ ಅವರು. ಮೊದಲ ವಿಕೆಟ್ ಈಗಷ್ಟೇ ಬಿದ್ದಿದೆ. ಇನ್ನು ಹಲವು ವಿಕೆಟ್‌ಗಳು ಪತನವಾಗಲಿವೆ ಎಂದು ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

ಅಭಿಷೇಕ್ ಶರ್ಮಾನನ್ನು ಮೂರೇ ಎಸೆತಗಳಲ್ಲಿ ಔಟ್ ಮಾಡುತ್ತೇನೆ: ಪಾಕ್ ನ 152.65 kmph ವೇಗಿಯ ಉದ್ಧಟತನದ ಮಾತು

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

SCROLL FOR NEXT