ಕಾರ್ತಿಕ್ ಕುಮಾರ್ 
ದೇಶ

ಅಪಹರಣ ಆರೋಪ: ನೂತನ ಖಾತೆ ಹಂಚಿಕೆ ಬೆನ್ನಲ್ಲೇ ಬಿಹಾರ ಸಚಿವ ಕಾರ್ತಿಕ್ ರಾಜೀನಾಮೆ; ಮೊದಲ ವಿಕೆಟ್ ಪತನ-ಬಿಜೆಪಿ ಟೀಕೆ

2014ರ ಅಪಹರಣ ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಬಿಹಾರದ ಸಚಿವ ಕಾರ್ತಿಕ್ ಕುಮಾರ್, ವಿರೋಧ ಪಕ್ಷಗಳ ತೀವ್ರ ಒತ್ತಡದ ನಡುವೆ ಬುಧವಾರ ರಾತ್ರಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಪಾಟ್ನಾ: 2014ರ ಅಪಹರಣ ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಬಿಹಾರದ ಸಚಿವ ಕಾರ್ತಿಕ್ ಕುಮಾರ್, ವಿರೋಧ ಪಕ್ಷಗಳ ತೀವ್ರ ಒತ್ತಡದ ನಡುವೆ ಬುಧವಾರ ರಾತ್ರಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಸರ್ಕಾರದಲ್ಲಿ ಆರ್‌ಜೆಡಿ ಎಂಎಲ್‌ಸಿ ಕಾರ್ತಿಕ್ ಕುಮಾರ್ ಅವರು ಕಾನೂನು ಸಚಿವರಾಗಿದ್ದರು. ಆದರೆ ಕಬ್ಬು ಉದ್ಯಮ ಸಚಿವರಾಗಿ ಖಾತೆ ಬದಲಾಯಿಸಿದ್ದ ಕೆಲವೇ ಗಂಟೆಗಳಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಸಚಿವರ ರಾಜೀನಾಮೆ ಪತ್ರವನ್ನು ಬಿಹಾರ ರಾಜ್ಯಪಾಲರು ಅಂಗೀಕರಿಸಿದ್ದಾರೆ. ಕಂದಾಯ ಸಚಿವ ಅಲೋಕ್ ಕುಮಾರ್ ಮೆಹ್ತಾ ಅವರಿಗೆ ಕಬ್ಬು ಉದ್ಯಮ ಸಚಿವಾಲಯದ ಹೆಚ್ಚುವರಿ ಹೊಣೆ ವಹಿಸಲಾಗಿದೆ.

ಕಾರ್ತಿಕ್ ಕುಮಾರ್ ರಾಜೀನಾಮೆಯ ನಂತರ,  ನಿತೀಶ್ ಕುಮಾರ್ ವಿರುದ್ಧ ಬಿಜೆಪಿಯ ಹಿರಿಯ ನಾಯಕ ಸುಶೀಲ್ ಕುಮಾರ್ ಮೋದಿ ಹರಿಹಾಯ್ದಿದ್ದಾರೆ.  ಬಿಹಾರದಲ್ಲಿ ಮಹಾಮೈತ್ರಿಕೂಟದ ಮೇಲೆ ವಾಗ್ದಾಳಿ ನಡೆಸಿದ ಅವರು. ಮೊದಲ ವಿಕೆಟ್ ಈಗಷ್ಟೇ ಬಿದ್ದಿದೆ. ಇನ್ನು ಹಲವು ವಿಕೆಟ್‌ಗಳು ಪತನವಾಗಲಿವೆ ಎಂದು ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

9 ದಿನಗಳಿಂದ ಉಪವಾಸ: ದೇವೇಂದ್ರ ಮಹ್ತೊ ಆಸ್ಪತ್ರೆಗೆ ದಾಖಲು; ಪೊಲೀಸರ ಲಾಠಿಚಾರ್ಚ್ ಖಂಡಿಸಿ ನಾಳೆ ಬಂದ್ ಗೆ BJP ಕರೆ!

ಶಾರುಖ್ ನಟನೆಯ 'ಕಭಿ ಅಲ್ವಿದಾ ನಾ ಕೆಹನಾ' ಚಿತ್ರ ಅಕ್ರಮ ಸಂಬಂಧ ಬೆಂಬಲಿಸಿಲ್ಲ: ಕರಣ್ ಜೋಹರ್ ಪೋಸ್ಟ್ ವೈರಲ್!

ಖಾತೆ ಹಂಚಿಕೆ ಕಸರತ್ತು: ವರಿಷ್ಠರಿಗೆ ಪಟ್ಟಿ ನೀಡಿ ಬೆಂಗಳೂರಿಗೆ CM ಡಿ.ಕೆ ಶಿವಕುಮಾರ್ ವಾಪಸ್; ಹೇಳಿದ್ದೇನು?

ನಾವು ಹಿಂಸಾಚಾರನ ಬೆಂಬಲಿಸಲ್ಲ; ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್‌ ಸರಿಯಲ್ಲ: ಜಾರ್ಖಂಡ್ ನಡೆ ಖಂಡಿಸಿದ ರಾಹುಲ್!

ಕೊಲಂಬಿಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಕನಿಷ್ಠ 47 ಮಂದಿ ಸಾವು, ಡಜನ್ಗಟ್ಟಲೆ ಕಟ್ಟಡಗಳು ಕುಸಿತ!