ಕಾರ್ತಿಕ್ ಕುಮಾರ್ 
ದೇಶ

ಅಪಹರಣ ಆರೋಪ: ನೂತನ ಖಾತೆ ಹಂಚಿಕೆ ಬೆನ್ನಲ್ಲೇ ಬಿಹಾರ ಸಚಿವ ಕಾರ್ತಿಕ್ ರಾಜೀನಾಮೆ; ಮೊದಲ ವಿಕೆಟ್ ಪತನ-ಬಿಜೆಪಿ ಟೀಕೆ

2014ರ ಅಪಹರಣ ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಬಿಹಾರದ ಸಚಿವ ಕಾರ್ತಿಕ್ ಕುಮಾರ್, ವಿರೋಧ ಪಕ್ಷಗಳ ತೀವ್ರ ಒತ್ತಡದ ನಡುವೆ ಬುಧವಾರ ರಾತ್ರಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಪಾಟ್ನಾ: 2014ರ ಅಪಹರಣ ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಬಿಹಾರದ ಸಚಿವ ಕಾರ್ತಿಕ್ ಕುಮಾರ್, ವಿರೋಧ ಪಕ್ಷಗಳ ತೀವ್ರ ಒತ್ತಡದ ನಡುವೆ ಬುಧವಾರ ರಾತ್ರಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಸರ್ಕಾರದಲ್ಲಿ ಆರ್‌ಜೆಡಿ ಎಂಎಲ್‌ಸಿ ಕಾರ್ತಿಕ್ ಕುಮಾರ್ ಅವರು ಕಾನೂನು ಸಚಿವರಾಗಿದ್ದರು. ಆದರೆ ಕಬ್ಬು ಉದ್ಯಮ ಸಚಿವರಾಗಿ ಖಾತೆ ಬದಲಾಯಿಸಿದ್ದ ಕೆಲವೇ ಗಂಟೆಗಳಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಸಚಿವರ ರಾಜೀನಾಮೆ ಪತ್ರವನ್ನು ಬಿಹಾರ ರಾಜ್ಯಪಾಲರು ಅಂಗೀಕರಿಸಿದ್ದಾರೆ. ಕಂದಾಯ ಸಚಿವ ಅಲೋಕ್ ಕುಮಾರ್ ಮೆಹ್ತಾ ಅವರಿಗೆ ಕಬ್ಬು ಉದ್ಯಮ ಸಚಿವಾಲಯದ ಹೆಚ್ಚುವರಿ ಹೊಣೆ ವಹಿಸಲಾಗಿದೆ.

ಕಾರ್ತಿಕ್ ಕುಮಾರ್ ರಾಜೀನಾಮೆಯ ನಂತರ,  ನಿತೀಶ್ ಕುಮಾರ್ ವಿರುದ್ಧ ಬಿಜೆಪಿಯ ಹಿರಿಯ ನಾಯಕ ಸುಶೀಲ್ ಕುಮಾರ್ ಮೋದಿ ಹರಿಹಾಯ್ದಿದ್ದಾರೆ.  ಬಿಹಾರದಲ್ಲಿ ಮಹಾಮೈತ್ರಿಕೂಟದ ಮೇಲೆ ವಾಗ್ದಾಳಿ ನಡೆಸಿದ ಅವರು. ಮೊದಲ ವಿಕೆಟ್ ಈಗಷ್ಟೇ ಬಿದ್ದಿದೆ. ಇನ್ನು ಹಲವು ವಿಕೆಟ್‌ಗಳು ಪತನವಾಗಲಿವೆ ಎಂದು ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

Indre Nemdiyag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

SCROLL FOR NEXT