ದೋಣಿಯಲ್ಲಿ ಹುಕ್ಕಾ ಸೇವನೆ- ಮಾಂಸಾಹಾರ ಸೇವನೆ 
ದೇಶ

ಪವಿತ್ರ ಗಂಗಾ ನದಿ ಮೇಲೆ ದೋಣಿಯಲ್ಲಿ ಹುಕ್ಕಾ, ಮಾಂಸಾಹಾರ ಸೇವನೆ: ಪ್ರಕರಣ ದಾಖಲು

ಹಿಂದೂಗಳ ಪವಿತ್ರ ನದಿ ಎಂದೇ ಕರೆಯಲಾಗುವ ಗಂಗಾ ನದಿ ಮೇಲೆ ದೋಣಿಯಲ್ಲಿ ಹುಕ್ಕಾ, ಮಾಂಸಾಹಾರ ಸೇವನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಲಾಗಿದೆ.

ಪ್ರಯಾಗ್ ರಾಜ್: ಹಿಂದೂಗಳ ಪವಿತ್ರ ನದಿ ಎಂದೇ ಕರೆಯಲಾಗುವ ಗಂಗಾ ನದಿ ಮೇಲೆ ದೋಣಿಯಲ್ಲಿ ಹುಕ್ಕಾ, ಮಾಂಸಾಹಾರ ಸೇವನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಲಾಗಿದೆ.

ಪವಿತ್ರ ಸಂಗಮದ ಬಳಿ ಗಂಗಾನದಿಯಲ್ಲಿ ಆರು ಮಂದಿ ದೋಣಿ ವಿಹಾರಿಗರು ತಮ್ಮ ದೋಣಿಯಲ್ಲೇ ಮಾಂಸಾಹಾರ ಅಡುಗೆ ಮಾಡಿ ಹುಕ್ಕಾ ಸೇದುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗಿತ್ತು. ಇದೀಗ ಇದೇ ವಿಚಾರವಾಗಿ ಪ್ರಯಾಗ್ ರಾಜ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಆರು ಜನರ ಪೈಕಿ ಇಬ್ಬರನ್ನು ಗುರುತಿಸಲಾಗಿದ್ದು, ಆದರೆ ಅವರು ತಲೆಮರೆಸಿಕೊಂಡಿದ್ದಾರೆ. ವೀಡಿಯೊದಲ್ಲಿ ಕಂಡುಬರುವ ಇಬ್ಬರನ್ನು ಅಜಾಫ್ ಮತ್ತು ಹಾಸನ ಎಂದು ಗುರುತಿಸಲಾಗಿದ್ದು, ಅವರ ವಿರುದ್ಧ ಐಪಿಸಿಯ ಸೆಕ್ಷನ್ 153 ಎ (ಧರ್ಮ, ಜನಾಂಗದ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಮತ್ತು 295 (ಆರಾಧನಾ ಸ್ಥಳವನ್ನು ಅಪವಿತ್ರಗೊಳಿಸುವುದು) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಇವರಿಬ್ಬರು ದರಗಂಜ್‌ನ ಬಕ್ಷಿ ಖುರ್ದ್ ನಿವಾಸಿಗಳಾಗಿದ್ದಾರೆ. ಅವರು ತಲೆಮರೆಸಿಕೊಂಡಿದ್ದು, ಉಳಿದ ನಾಲ್ವರನ್ನು ಗುರುತಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬುಧವಾರ ದಾಖಲಾದ ಎಫ್‌ಐಆರ್‌ನಲ್ಲಿ, ಆರು ಮಂದಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಮತ್ತು ಪೂಜಾ ಸ್ಥಳವನ್ನು ಅಪವಿತ್ರಗೊಳಿಸಿದ್ದಾರೆ ಎಂದು ಆರೋಪಿಸಲಾಗಿದೆ. 30 ಸೆಕೆಂಡುಗಳ ವೀಡಿಯೊವು ಪ್ರಯಾಗ್‌ರಾಜ್‌ನ ದಾರಗಂಜ್‌ಗೆ ಸಮೀಪದ ಗಂಗಾನದಿಯ ಸಂಗಮದಲ್ಲಿ ಚಲಿಸುವ ದೋಣಿಯಲ್ಲಿ ಕೆಲ ಪುರುಷರು ಮಾಂಸಾಹಾರ ಆಡುಗೆ ತಯಾರಿಯಲ್ಲಿ ತೊಡಗಿದ್ದರೆ, ಇನ್ನೂ ಕೆಲವರು ಹುಕ್ಕಾ ಸೇವನೆ ಮಾಡುತ್ತಿರುವ ದೃಶ್ಯವನ್ನು ಸೆರೆಯಾಗಿತ್ತು. 

ಈ ಸಂಬಂಧ ಮಾಹಿತಿ ನೀಡಿರುವ ಸರ್ಕಲ್ ಆಫೀಸರ್ ಆಸ್ತಾ ಜೈಸ್ವಾಲ್ ಅವರು, ದಾರಗಂಜ್ ಯಾತ್ರಾ ಕ್ಷೇತ್ರವಾಗಿದ್ದು, ಭಕ್ತರ ಭಾವನೆಗಳಿಗೆ ಧಕ್ಕೆ ತರುವಂತಹ ಯಾವುದನ್ನೂ ಮಾಡಬಾರದು ಎಂದು ಜನರು ನಿರೀಕ್ಷಿಸುತ್ತಾರೆ. ಗಂಗಾ ನದಿಯಲ್ಲಿ ದೋಣಿಯಲ್ಲಿ ಮಾಂಸವನ್ನು ಬೇಯಿಸುವುದು ಇಲ್ಲಿಗೆ ಬರುವ ಜನರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುತ್ತದೆ" ಎಂದು ಹೇಳಿದ್ದಾರೆ.

ಮಂಗಳವಾರ ವಿಡಿಯೋ ಹೊರಬಿದ್ದ ನಂತರ ಬಕ್ಷಿ ಹೊರಠಾಣೆ ಉಸ್ತುವಾರಿ ದಿವಾಕರ್ ಸಿಂಗ್ ಅವರ ದೂರಿನ ಮೇರೆಗೆ ಇಬ್ಬರು ಹೆಸರಿನ ಮತ್ತು ನಾಲ್ಕು ಅಪರಿಚಿತರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

'ಕೆಲವು ಸಚಿವರು ಕೈಗೂ ಸಿಗಲ್ಲ, ಫೋನಿಗೂ ಸಿಗಲ್ಲ: ದೇವಲೋಕದಿಂದ ಬಂದಂತೆ ಆಡ್ತಾರೆ; ಅಂತವರನ್ನು ಬದಲಾಯಿಸಿ ಹೊಸಬರಿಗೆ ಅವಕಾಶ ನೀಡಿ'

'ಅಲ್ಪಸಂಖ್ಯಾತರ ಚಾಂಪಿಯನ್‌ ಎನಿಸಿಕೊಂಡವರ ಡಬಲ್‌ ಗೇಮ್‌: ದಾವಣಗೆರೆಯಲ್ಲಿ ನಮ್ಮ ಅಭ್ಯರ್ಥಿಯನ್ನೇ ಸೋಲಿಸಲು ಯತ್ನ'

ಗ್ರಾಮೀಣ ಪ್ರದೇಶಗಳಿಗೆ ಅಗ್ಗದ ದರದಲ್ಲಿ ಔಷಧಿ: ಇಂಡಿಯಾ ಪೋಸ್ಟ್‌ ಮೂಲಕ ಜನೌಷಧಿ ಸೇವೆ ವಿಸ್ತರಿಸಲು ಕೇಂದ್ರ ಸರ್ಕಾರ ಚಿಂತನೆ..!

SCROLL FOR NEXT