1993ರ ಮುಂಬೈ ಸ್ಫೋಟದ ಮಾಸ್ಟರ್ ಮೈಂಡ್ ಹಾಗೂ ಭೂಗತ ಪಾತಗಿ ದಾವೂದ್ ಇಬ್ರಾಹಿಂ 
ದೇಶ

ದಾವೂದ್ ಇಬ್ರಾಹಿಮ್ ಕುರಿತ ಮಾಹಿತಿಗೆ 25 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ ಎನ್ಐಎ 

ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ದಾವೂದ್ ಇಬ್ರಾಹಿಮ್ ಕುರಿತು ಮಾಹಿತಿ ನೀಡಿದವರಿಗೆ 25 ಲಕ್ಷ ರೂಪಾಯಿ ಬಹುಮಾನ ಘೋಷಿಸಿದೆ. 

ನವದೆಹಲಿ: ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ದಾವೂದ್ ಇಬ್ರಾಹಿಮ್ ಕುರಿತು ಮಾಹಿತಿ ನೀಡಿದವರಿಗೆ 25 ಲಕ್ಷ ರೂಪಾಯಿ ಬಹುಮಾನ ಘೋಷಿಸಿದೆ. ದಾವೂದ್ ಇಬ್ರಾಹಿಂ 1993 ರ ಮುಂಬೈ ಸರಣಿ ಸ್ಫೋಟದ ಪ್ರಮುಖ ಆರೋಪಿಯಾಗಿದ್ದು, ಪಾಕಿಸ್ತಾನದಲ್ಲಿ ತಲೆಮರೆಸಿಕೊಂಡಿದ್ದಾನೆ.

ಇದನ್ನೂ ಓದಿ: ದಾವೂದ್ ಸಹಚರ ಸಲೀಂ ಖುರೇಷಿ ಆಗಸ್ಟ್ 17 ರವರೆಗೆ ಎನ್ ಐಎ ಕಸ್ಟಡಿಗೆ
 
ಇಬ್ರಾಹಿಂ ನ ಆಪ್ತ ಶಕೀಲ್ ಶೇಖ್ ಕುರಿತು ಮಾಹಿತಿ ನೀಡಿದವರಿಗೆ 20 ಲಕ್ಷ ರೂಪಾಯಿ ಬಹುಮಾನವನ್ನು ಹಾಗೂ ಸಹಚರರಾದ ಹಾನಿ ಅನೀಸ್ ಅಲಿಯಾಸ್ ಅನೀಸ್ ಇಬ್ರಾಹಿಂ ಶೇಖ್, ಜಾವೇದ್ ಪಟೇಲ್, ಜಾವೇದ್ ಚಿಕ್ನಾ, ಇಬ್ರಾಹಿಮ್ ಮುಸ್ತಾಕ್, ಅಬ್ದುಲ್ ರಜಾಕ್ ಮೆಮೊನ್ ಅಲಿಯಾಸ್ ಟೈಗರ್ ಮೆಮೊನ್ ಕುರಿತಾದ ಮಾಹಿತಿಗೆ 15 ಲಕ್ಷ ರೂಪಾಯಿ ಬಹುಮಾನವನ್ನು ತನಿಖಾ ಸಂಸ್ಥೆ ಘೋಷಿಸಿದೆ. ಈ ಎಲ್ಲಾ ಆರೋಪಿಗಳೂ 1993 ಮುಂಬೈ ಸರಣಿ ಸ್ಫೋಟದಲ್ಲಿ ಬೇಕಾಗಿದ್ದು, ಇವರನ್ನು ಬಂಧನಕ್ಕೊಳಪಡಿಸಲು ಇವರ ಬಗ್ಗೆ ಪೂರಕವಾಗುವ ಮಾಹಿತಿಯನ್ನು ಸಂಗ್ರಹಿಸುತ್ತಿದೆ. ಫೆಬ್ರವರಿಯಲ್ಲಿ ತನಿಖಾ ಸಂಸ್ಥೆ ಡಿ ಕಂಪನಿ ವಿರುದ್ಧ ಪ್ರಕರಣ ದಾಖಲಿಸಿತ್ತು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಕೂಡಲೇ ಧರ್ಮೇಂದ್ರ ಪ್ರಧಾನ್`ರನ್ನು ವಜಾ ಮಾಡಿ; ಇಲ್ಲದಿದ್ದರೆ ನಿಮ್ಮ ರಾಜೀನಾಮೆಯನ್ನೂ ಕೇಳುತ್ತೇವೆ': ಪ್ರಧಾನಿ ಮೋದಿಗೆ CJP ಮುಖ್ಯಸ್ಥ Abhijeet Dipke ಎಚ್ಚರಿಕೆ

'ನೀಟ್‌ ಪರೀಕ್ಷಾ ವ್ಯವಸ್ಥೆ ಕುರಿತು ವಿದ್ಯಾರ್ಥಿಗಳ ಆತಂಕ ನಿಜವಾದದ್ದು; ಲಾಠಿ ಚಾರ್ಜ್‌ ನೋವು ತಂದಿದೆ' : Murli Manohar Joshi

ವೈಭವ್ ಸೂರ್ಯವಂಶಿ ವಿಶ್ವದಾಖಲೆ: ಸತತ 3 ಸರಣಿ ಸೋಲಿನ ಬಳಿಕ ಜಿಂಬಾಬ್ವೆ ವಿರುದ್ಧದ ಟಿ20 ಪಂದ್ಯ ಗೆದ್ದ ಭಾರತ!

'ಪ್ರಜಾಪ್ರಭುತ್ವ ಉಳಿಸಿ': CJP Protest ಬೆಂಬಲಿಸಿ ಸಂವಿಧಾನದ ಪ್ರಸ್ತಾವನೆ ಓದಿದ ಸುಪ್ರೀಂ ಕೋರ್ಟ್ ವಕೀಲರು!

ದೆಹಲಿಯಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್: ಕಣ್ಣೀರಿಟ್ಟ ರಾಖಿ ಸಾವಂತ್, ಪ್ರಧಾನಿಗೆ ತರಾಟೆ! Video, 6 ಮಿಲಿಯನ್ ಗೂ ಅಧಿಕ ವೀಕ್ಷಣೆ!