1993ರ ಮುಂಬೈ ಸ್ಫೋಟದ ಮಾಸ್ಟರ್ ಮೈಂಡ್ ಹಾಗೂ ಭೂಗತ ಪಾತಗಿ ದಾವೂದ್ ಇಬ್ರಾಹಿಂ 
ದೇಶ

ದಾವೂದ್ ಇಬ್ರಾಹಿಮ್ ಕುರಿತ ಮಾಹಿತಿಗೆ 25 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ ಎನ್ಐಎ 

ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ದಾವೂದ್ ಇಬ್ರಾಹಿಮ್ ಕುರಿತು ಮಾಹಿತಿ ನೀಡಿದವರಿಗೆ 25 ಲಕ್ಷ ರೂಪಾಯಿ ಬಹುಮಾನ ಘೋಷಿಸಿದೆ. 

ನವದೆಹಲಿ: ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ದಾವೂದ್ ಇಬ್ರಾಹಿಮ್ ಕುರಿತು ಮಾಹಿತಿ ನೀಡಿದವರಿಗೆ 25 ಲಕ್ಷ ರೂಪಾಯಿ ಬಹುಮಾನ ಘೋಷಿಸಿದೆ. ದಾವೂದ್ ಇಬ್ರಾಹಿಂ 1993 ರ ಮುಂಬೈ ಸರಣಿ ಸ್ಫೋಟದ ಪ್ರಮುಖ ಆರೋಪಿಯಾಗಿದ್ದು, ಪಾಕಿಸ್ತಾನದಲ್ಲಿ ತಲೆಮರೆಸಿಕೊಂಡಿದ್ದಾನೆ.

ಇದನ್ನೂ ಓದಿ: ದಾವೂದ್ ಸಹಚರ ಸಲೀಂ ಖುರೇಷಿ ಆಗಸ್ಟ್ 17 ರವರೆಗೆ ಎನ್ ಐಎ ಕಸ್ಟಡಿಗೆ
 
ಇಬ್ರಾಹಿಂ ನ ಆಪ್ತ ಶಕೀಲ್ ಶೇಖ್ ಕುರಿತು ಮಾಹಿತಿ ನೀಡಿದವರಿಗೆ 20 ಲಕ್ಷ ರೂಪಾಯಿ ಬಹುಮಾನವನ್ನು ಹಾಗೂ ಸಹಚರರಾದ ಹಾನಿ ಅನೀಸ್ ಅಲಿಯಾಸ್ ಅನೀಸ್ ಇಬ್ರಾಹಿಂ ಶೇಖ್, ಜಾವೇದ್ ಪಟೇಲ್, ಜಾವೇದ್ ಚಿಕ್ನಾ, ಇಬ್ರಾಹಿಮ್ ಮುಸ್ತಾಕ್, ಅಬ್ದುಲ್ ರಜಾಕ್ ಮೆಮೊನ್ ಅಲಿಯಾಸ್ ಟೈಗರ್ ಮೆಮೊನ್ ಕುರಿತಾದ ಮಾಹಿತಿಗೆ 15 ಲಕ್ಷ ರೂಪಾಯಿ ಬಹುಮಾನವನ್ನು ತನಿಖಾ ಸಂಸ್ಥೆ ಘೋಷಿಸಿದೆ. ಈ ಎಲ್ಲಾ ಆರೋಪಿಗಳೂ 1993 ಮುಂಬೈ ಸರಣಿ ಸ್ಫೋಟದಲ್ಲಿ ಬೇಕಾಗಿದ್ದು, ಇವರನ್ನು ಬಂಧನಕ್ಕೊಳಪಡಿಸಲು ಇವರ ಬಗ್ಗೆ ಪೂರಕವಾಗುವ ಮಾಹಿತಿಯನ್ನು ಸಂಗ್ರಹಿಸುತ್ತಿದೆ. ಫೆಬ್ರವರಿಯಲ್ಲಿ ತನಿಖಾ ಸಂಸ್ಥೆ ಡಿ ಕಂಪನಿ ವಿರುದ್ಧ ಪ್ರಕರಣ ದಾಖಲಿಸಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT