ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ 
ದೇಶ

12 ಗಂಟೆಗಳ ಕಾಲ ಉಚಿತ ವಿದ್ಯುತ್, ಸಾಲ ಮನ್ನಾ: ಗುಜರಾತ್ ಚುನಾವಣೆಗೆ ಕೇಜ್ರಿವಾಲ್ ಭರವಸೆ

“ಬಿಜೆಪಿ 277 ಶಾಸಕರನ್ನು ಖರೀದಿಸಲು 6,500 ಕೋಟಿ ರೂಪಾಯಿಗಳನ್ನು ಖರ್ಚು ಮಾಡಿದೆ. ಅಲ್ಲದೆ ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷದ(ಎಎಪಿ) ಶಾಸಕರನ್ನು ಖರೀದಿಸಲು ಯತ್ನಿಸಿದರು ದೆಹಲಿ ಮುಖ್ಯಮಂತ್ರಿ...

ಅಹಮದಾಬಾದ್: “ಬಿಜೆಪಿ 277 ಶಾಸಕರನ್ನು ಖರೀದಿಸಲು 6,500 ಕೋಟಿ ರೂಪಾಯಿಗಳನ್ನು ಖರ್ಚು ಮಾಡಿದೆ. ಅಲ್ಲದೆ ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷದ(ಎಎಪಿ) ಶಾಸಕರನ್ನು ಖರೀದಿಸಲು ಯತ್ನಿಸಿದರು ದೆಹಲಿ ಮುಖ್ಯಮಂತ್ರಿ, ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರು ಶುಕ್ರವಾರ ಆರೋಪಿಸಿದ್ದಾರೆ.

ವಿಧಾನಸಭಾ ಚುನಾವಣೆಗೆ ಪೂರ್ವಭಾವಿಯಾಗಿ ಎರಡು ದಿನಗಳ ಗುಜರಾತ್ ಪ್ರವಾಸದಲ್ಲಿರುವ ಕೇಜ್ರಿವಾಲ್ ಅವರು ಇಂದು ದೇವಭೂಮಿ ದ್ವಾರಕಾ ಜಿಲ್ಲೆಯಲ್ಲಿ ರೈತರನ್ನು ಉದ್ದೇಶಿಸಿ ಮಾತನಾಡಿದರು ಮತ್ತು ರೈತರಿಗೆ ಇನ್ನೂ ಐದು ಭರವಸೆಗಳನ್ನು ಘೋಷಿಸಿದರು.

ಬಿಜೆಪಿ ಮತ್ತು ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕೇಜ್ರಿವಾಲ್, "ನಿಮಗೆ ಉಚಿತ ವಿದ್ಯುತ್ ಮತ್ತು ಉಚಿತ ಶಿಕ್ಷಣ ಬೇಕಾದರೆ ನಮಗೆ ಮತ ನೀಡಿ. ನಿಮಗೆ ಭ್ರಷ್ಟಾಚಾರ ಮತ್ತು 'ಗುಂಡಾಗಿರಿ' ಬೇಕಾದರೆ ಅವರಿಗೆ ಮತ ನೀಡಿ" ಎಂದು ಹೇಳಿದರು.

ಗುಜರಾತ್‌ನಲ್ಲಿ ಮತ್ತೊಂದು ಚುನಾವಣಾ ಪೂರ್ವ ಭರವಸೆಯಲ್ಲಿ ಕೇಜ್ರಿವಾಲ್ ಅವರು, ರೈತರಿಗೆ 2 ಲಕ್ಷ ರೂಪಾಯಿಗಳ ಸಾಲ ಮನ್ನಾ, ಹಗಲಿನಲ್ಲಿ 12 ಗಂಟೆಗಳ ಕಾಲ ಉಚಿತ ವಿದ್ಯುತ್, ಕನಿಷ್ಠ ಬೆಂಬಲ ಬೆಲೆ(MSP) ಸೇರಿದಂತೆ ಐದು ಅಂಶಗಳ ಪ್ರಣಾಳಿಕೆಯನ್ನು ಘೋಷಿಸಿದರು. ಅಲ್ಲದೆ ಬೆಳೆ ವಿಫಲವಾದಲ್ಲಿ ಪ್ರತಿ ಎಕರೆ ಭೂಮಿಗೆ ರೂ 20,000 ಪರಿಹಾರ ನೀಡುವುದಾಗಿ ಕೇಜ್ರಿವಾಲ್ ಭರವಸೆ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT