ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ 
ದೇಶ

12 ಗಂಟೆಗಳ ಕಾಲ ಉಚಿತ ವಿದ್ಯುತ್, ಸಾಲ ಮನ್ನಾ: ಗುಜರಾತ್ ಚುನಾವಣೆಗೆ ಕೇಜ್ರಿವಾಲ್ ಭರವಸೆ

“ಬಿಜೆಪಿ 277 ಶಾಸಕರನ್ನು ಖರೀದಿಸಲು 6,500 ಕೋಟಿ ರೂಪಾಯಿಗಳನ್ನು ಖರ್ಚು ಮಾಡಿದೆ. ಅಲ್ಲದೆ ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷದ(ಎಎಪಿ) ಶಾಸಕರನ್ನು ಖರೀದಿಸಲು ಯತ್ನಿಸಿದರು ದೆಹಲಿ ಮುಖ್ಯಮಂತ್ರಿ...

ಅಹಮದಾಬಾದ್: “ಬಿಜೆಪಿ 277 ಶಾಸಕರನ್ನು ಖರೀದಿಸಲು 6,500 ಕೋಟಿ ರೂಪಾಯಿಗಳನ್ನು ಖರ್ಚು ಮಾಡಿದೆ. ಅಲ್ಲದೆ ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷದ(ಎಎಪಿ) ಶಾಸಕರನ್ನು ಖರೀದಿಸಲು ಯತ್ನಿಸಿದರು ದೆಹಲಿ ಮುಖ್ಯಮಂತ್ರಿ, ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರು ಶುಕ್ರವಾರ ಆರೋಪಿಸಿದ್ದಾರೆ.

ವಿಧಾನಸಭಾ ಚುನಾವಣೆಗೆ ಪೂರ್ವಭಾವಿಯಾಗಿ ಎರಡು ದಿನಗಳ ಗುಜರಾತ್ ಪ್ರವಾಸದಲ್ಲಿರುವ ಕೇಜ್ರಿವಾಲ್ ಅವರು ಇಂದು ದೇವಭೂಮಿ ದ್ವಾರಕಾ ಜಿಲ್ಲೆಯಲ್ಲಿ ರೈತರನ್ನು ಉದ್ದೇಶಿಸಿ ಮಾತನಾಡಿದರು ಮತ್ತು ರೈತರಿಗೆ ಇನ್ನೂ ಐದು ಭರವಸೆಗಳನ್ನು ಘೋಷಿಸಿದರು.

ಬಿಜೆಪಿ ಮತ್ತು ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕೇಜ್ರಿವಾಲ್, "ನಿಮಗೆ ಉಚಿತ ವಿದ್ಯುತ್ ಮತ್ತು ಉಚಿತ ಶಿಕ್ಷಣ ಬೇಕಾದರೆ ನಮಗೆ ಮತ ನೀಡಿ. ನಿಮಗೆ ಭ್ರಷ್ಟಾಚಾರ ಮತ್ತು 'ಗುಂಡಾಗಿರಿ' ಬೇಕಾದರೆ ಅವರಿಗೆ ಮತ ನೀಡಿ" ಎಂದು ಹೇಳಿದರು.

ಗುಜರಾತ್‌ನಲ್ಲಿ ಮತ್ತೊಂದು ಚುನಾವಣಾ ಪೂರ್ವ ಭರವಸೆಯಲ್ಲಿ ಕೇಜ್ರಿವಾಲ್ ಅವರು, ರೈತರಿಗೆ 2 ಲಕ್ಷ ರೂಪಾಯಿಗಳ ಸಾಲ ಮನ್ನಾ, ಹಗಲಿನಲ್ಲಿ 12 ಗಂಟೆಗಳ ಕಾಲ ಉಚಿತ ವಿದ್ಯುತ್, ಕನಿಷ್ಠ ಬೆಂಬಲ ಬೆಲೆ(MSP) ಸೇರಿದಂತೆ ಐದು ಅಂಶಗಳ ಪ್ರಣಾಳಿಕೆಯನ್ನು ಘೋಷಿಸಿದರು. ಅಲ್ಲದೆ ಬೆಳೆ ವಿಫಲವಾದಲ್ಲಿ ಪ್ರತಿ ಎಕರೆ ಭೂಮಿಗೆ ರೂ 20,000 ಪರಿಹಾರ ನೀಡುವುದಾಗಿ ಕೇಜ್ರಿವಾಲ್ ಭರವಸೆ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

T20 World Cup 2026: ಅಭಿಷೇಕ್, ಹಾರ್ದಿಕ್ ಅಬ್ಬರ; ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT