ನಿತೀಶ್ ಕುಮಾರ್ 
ದೇಶ

ಬಿಹಾರ ಸಿಎಂ ನಿತೀಶ್ ಕುಮಾರ್​​​ಗೆ ಭಾರೀ ಹಿನ್ನಡೆ: ಮಣಿಪುರದ ಐವರು ಜೆಡಿಯು ಶಾಸಕರು ಬಿಜೆಪಿ ತೆಕ್ಕೆಗೆ!

ಮಣಿಪುರದ ಐವರು ಜೆಡಿಯು ಶಾಸಕರು ಶುಕ್ರವಾರ ಬಿಜೆಪಿಗೆ ಸೇರ್ಪಡೆಯಾಗಿದ್ದು, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ಬಹುದೊಡ್ಡ ಆಘಾತ ನೀಡಿದ್ದಾರೆ.

ಇಂಫಾಲ(ಮಣಿಪುರ): ಶುಕ್ರವಾರ ರಾತ್ರಿ ನಡೆದ ದಿಢೀರ್ ಬೆಳವಣಿಗೆಯಲ್ಲಿ ಮಣಿಪುರದ ಐವರು ಜೆಡಿಯು ಶಾಸಕರು ಬಿಜೆಪಿಗೆ ಸೇರ್ಪಡೆಯಾಗಿದ್ದು, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ಬಹುದೊಡ್ಡ ಆಘಾತ ನೀಡಿದ್ದಾರೆ.

ಈ ಕುರಿತು ಮಣಿಪುರ ವಿಧಾನಸಭೆಯ ಕಾರ್ಯದರ್ಶಿ ಕೆ.ಮೇಘಜಿತ್‌ ಸಿಂಗ್‌ ಅವರು ಹೇಳಿಕೆ ಬಿಡುಗಡೆ ಮಾಡಿದ್ದು, ‘ಐವರು ಜೆಡಿಯು ಶಾಸಕರು ಬಿಜೆಪಿ ಸೇರ್ಪಡೆಯಾಗಿದ್ದನ್ನು ಸ್ಪೀಕರ್‌ ಅವರು ಅನುಮೋದಿಸಿದ್ದಾರೆ’ ಎಂದು ತಿಳಿಸಿದ್ದಾರೆ.

ಕಳೆದ ಕೆಲ ದಿನಗಳ ಹಿಂದೆ ಬಿಜೆಪಿ ಜೊತೆಗಿನ ಮೈತ್ರಿ ಮುರಿದುಕೊಂಡು ಆರ್​ಜೆಡಿ ಮತ್ತು ಕಾಂಗ್ರೆಸ್ ಜೊತೆ ಕೈಜೋಡಿಸಿರುವ ನಿತೀಶ್​​ ಕುಮಾರ್​ ಬಿಹಾರದಲ್ಲಿ ಹೊಸ ಸರ್ಕಾರ ರಚನೆ ಮಾಡಿದ್ದಾರೆ. ಇದರ ಮಧ್ಯೆ ಮಣಿಪುರದಲ್ಲಿ ಐವರು ಜೆಡಿಯು ಶಾಸಕರು ಬಿಜೆಪಿ ಸೇರ್ಪಡೆಗೊಂಡಿದ್ದಾರೆ.

ಕಳೆದ ಮಾರ್ಚ್​ ತಿಂಗಳಲ್ಲಿ ನಡೆದ ಮಣಿಪುರ ವಿಧಾಸಭೆ ಚುನಾವಣೆಯಲ್ಲಿ ಜೆಡಿಯು 7 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು. 60 ಸದಸ್ಯ ಬಲದ ವಿಧಾನಸಭೆಯಲ್ಲಿ ಬಿಜೆಪಿ 32 ಸ್ಥಾನಗಳಲ್ಲಿ ಗೆಲುವು ದಾಖಲಿಸಿ, ಅಧಿಕಾರ ಉಳಿಸಿಕೊಂಡಿದೆ. ಈ ವೇಳೆ, ಜೆಡಿಯು ಶಾಸಕರು ಬಿಜೆಪಿಗೆ ಬೆಂಬಲ ವ್ಯಕ್ತಪಡಿಸಿದ್ದರು.

ಕೆ.ಎಚ್. ಜೋಯ್ಕಿಶನ್, ಎನ್.ಸನತೆ, ಎಂಡಿ ಅಚಾಬ್ ಉದ್ದೀನ್, ಮಾಜಿ ಡಿಜಿಪಿ ಎಲ್ ಎಂ ಖೌಟೆ ಮತ್ತು ತಂಗಜಮ್ ಅರುಣ್​ಕುಮಾರ್ ಬಿಜೆಪಿ ಸೇರ್ಪಡೆಯಾಗಿರುವ ಶಾಸಕರಾಗಿದ್ದಾರೆ. ಇನ್ನು, ಬಿಹಾರದಲ್ಲಿ ಬಿಜೆಪಿ ಮತ್ತು ಜೆಡಿಯು ಮೈತ್ರಿ ಮುರಿದು ಬಿದ್ದ ಬೆನ್ನಲ್ಲೇ ಮಣಿಪುರದಲ್ಲೂ ಜೆಡಿಯು ಶಾಸಕರು ಬಿಜೆಪಿಗೆ ನೀಡಿದ್ದ ಬೆಂಬಲ ವಾಪಸ್​ ಪಡೆದುಕೊಳ್ಳುತ್ತಾರೆಂಬ ಮಾತು ಕೇಳಿ ಬರಲು ಶುರುವಾಗಿತ್ತು. ಆದರೆ, ಬಿಹಾರ ಮುಖ್ಯಮಂತ್ರಿ ನಿತೀಶ್​ ಕುಮಾರ್​ ಅವರಿಗೆ ಶಾಕ್​ ನೀಡಿರುವ ಶಾಸಕರು, ಬಿಜೆಪಿ ಸೇರ್ಪಡೆಯಾಗಿದ್ದಾರೆ. ಮಣಿಪುರದಲ್ಲಿ ಸದ್ಯ ಬಿರೇನ್ ಸಿಂಗ್ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರ ನಡೆಸುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಜಿತ್ ಪವಾರ್ ದುರ್ಮರಣದಲ್ಲಿ 'ಪಿತೂರಿ' ನಡೆದಿದೆಯೇ? ಶರದ್ ಪವಾರ್ ಮೊದಲ ಪ್ರತಿಕ್ರಿಯೆ...

4ನೇ ಟಿ20: ದುಬೆ ಅರ್ಧಶತಕ ವ್ಯರ್ಥ; ನ್ಯೂಜಿಲ್ಯಾಂಡ್ ವಿರುದ್ಧ 50 ರನ್‌ನಿಂದ ಸೋತ ಭಾರತ!

ಸರ್... ಹಾವಾಡಿಗರಿಗೆ ನಿಮ್ಮ ದೇಶಪ್ರೇಮ ಸಾಬೀತು ಮಾಡುವ ಅಗತ್ಯ ಇಲ್ಲ: ನಟ ಕಿಶೋರ್

ಚಿಕ್ಕಮಗಳೂರು: ಹೋಂ ಸ್ಟೇನಲ್ಲಿ ವಿಧವೆ ಜೊತೆ ರೆಡ್​ಹ್ಯಾಂಡ್ ಆಗಿ ಸಿಕ್ಕಿಬಿದ್ದ ಸಿಟಿ ರವಿ ಆಪ್ತನ ಮೇಲೆ ಹಲ್ಲೆ, Video Viral

'ಮಹಾ' ಡಿಸಿಎಂ ಅಜಿತ್ ಪವಾರ್ ದುರಂತ ಸಾವು ಬೆನ್ನಲ್ಲೇ ಬಾರಾಮತಿಯಲ್ಲಿ ತುರ್ತು ATC ತಂಡ ನಿಯೋಜಿಸಿದ IAF

SCROLL FOR NEXT