ಕೆಕೆ ಶೈಲಜಾ 
ದೇಶ

ಕೇರಳ ಮಾಜಿ ಆರೋಗ್ಯ ಸಚಿವೆ ಕೆಕೆ ಶೈಲಜಾ ರಾಮನ್ ಮ್ಯಾಗ್ಸೆಸೆ ಪ್ರಶಸ್ತಿ ಸ್ವೀಕರಿಸಲು ಅವಕಾಶ ನಿರಾಕರಿಸಿದ ಸಿಪಿಎಂ

ಕೇರಳದ ಮಾಜಿ ಆರೋಗ್ಯ ಸಚಿವ ಮತ್ತು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ ಮಾರ್ಕ್ಸ್ವಾದಿ (ಸಿಪಿಎಂ) ನಾಯಕಿ ಕೆಕೆ ಶೈಲಜಾ ಅವರು ಪ್ರತಿಷ್ಠಿತ ರಾಮನ್ ಮ್ಯಾಗ್ಸೆಸೆ ಪ್ರಶಸ್ತಿಗೆ ಆಯ್ಕೆಯಾಗಿದ್ದರು. ಆದರೆ ಸಿಪಿಎಂನ ಕೇರಳ ಘಟಕವು ಕೆ ಕೆ ಶೈಲಜಾ ಅವರಿಗೆ ಪ್ರಶಸ್ತಿ ಸ್ವೀಕರಿಸಲು ಅವಕಾಶ ನಿರಾಕರಿಸಿದೆ.

ತಿರುವನಂತಪುರಂ: ಕೇರಳದ ಮಾಜಿ ಆರೋಗ್ಯ ಸಚಿವ ಮತ್ತು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ ಮಾರ್ಕ್ಸ್ವಾದಿ (ಸಿಪಿಎಂ) ನಾಯಕಿ ಕೆಕೆ ಶೈಲಜಾ ಅವರು ಪ್ರತಿಷ್ಠಿತ ರಾಮನ್ ಮ್ಯಾಗ್ಸೆಸೆ ಪ್ರಶಸ್ತಿಗೆ ಆಯ್ಕೆಯಾಗಿದ್ದರು. ಆದರೆ ಸಿಪಿಎಂನ ಕೇರಳ ಘಟಕವು ಕೆ ಕೆ ಶೈಲಜಾ ಅವರಿಗೆ ಪ್ರಶಸ್ತಿ ಸ್ವೀಕರಿಸಲು ಅವಕಾಶ ನಿರಾಕರಿಸಿದೆ. 

ಶೈಲಜಾ ಅವರು ಕೇರಳದ ಆರೋಗ್ಯ ಸಚಿವರಾಗಿದ್ದ ಅವಧಿಯಲ್ಲಿ, ನಿಪಾಹ್ ವೈರಸ್ ಮತ್ತು ಕೋವಿಡ್ ಸಾಂಕ್ರಾಮಿಕ ರೋಗವನ್ನು ಪರಿಣಾಮಕಾರಿಯಾಗಿ ನಿಭಾಯಿಸಿದ್ದರಿಂದ ರಾಜ್ಯವು ಜಾಗತಿಕ ಮನ್ನಣೆಯನ್ನು ಗಳಿಸಿತು. ಸಾಂಕ್ರಾಮಿಕ ರೋಗಗಳನ್ನು ನಿಭಾಯಿಸುವಲ್ಲಿ ಯಶಸ್ವಿಯಾಗಿದ್ದ ಅವರ ನಾಯಕತ್ವಕ್ಕೆ ವಿಶ್ವಾದ್ಯಂತ ಮೆಚ್ಚುಗೆ ವ್ಯಕ್ತವಾಗಿತ್ತು.

ಮಾಹಿತಿಯ ಪ್ರಕಾರ, ಶೈಲಜಾ ಅವರು ಸಾರ್ವಜನಿಕ ಆರೋಗ್ಯಕ್ಕಾಗಿ ಮಾಡಿದ ಸೇವೆಗಾಗಿ ರಾಮನ್ ಮ್ಯಾಗ್ಸೆಸೆ ಪ್ರಶಸ್ತಿ ಪ್ರತಿಷ್ಠಾನದಿಂದ 64ನೇ ಮ್ಯಾಗ್ಸೆಸೆ ಪ್ರಶಸ್ತಿಗಳಿಗೆ ಆಯ್ಕೆಯಾಗಿದ್ದರು. ಫೌಂಡೇಶನ್ 2022ರ ಜುಲೈ ಕೊನೆಯ ವಾರದಲ್ಲಿ ಶೈಲಜಾ ಅವರಿಗೆ ಇ-ಮೇಲ್ ಮೂಲಕ ತಿಳಿಸಿದ್ದು, ಅವರನ್ನು ಶಾರ್ಟ್‌ಲಿಸ್ಟ್ ಮಾಡಲಾಗಿತ್ತು. ಪ್ರಶಸ್ತಿ ಸ್ವೀಕರಿಸುವುದಕ್ಕಾಗಿ ಅವರ ದೃಢೀಕರಣವನ್ನು ಬಯಸಿತ್ತು.

ಸಿಪಿಎಂನ ಕೇಂದ್ರ ಸಮಿತಿಯ ಸದಸ್ಯರಾಗಿರುವ ಕೆಕೆ ಶೈಲಜಾ ಅವರು ಈ ಬಗ್ಗೆ ಪಕ್ಷದ ನಾಯಕತ್ವಕ್ಕೆ ಮಾಹಿತಿ ನೀಡಿದರು. ವಿವರವಾದ ಚರ್ಚೆಯ ನಂತರ ಸಿಪಿಎಂ ಪ್ರಶಸ್ತಿ ಸ್ವೀಕರಿಸುವುದನ್ನು ವಿರೋಧಿಸಿತು. ಹಿರಿಯ ಸಿಪಿಎಂ ನಾಯಕರ ಪ್ರಕಾರ, ಶೈಲಜಾ ಅವರು ಪಕ್ಷದಿಂದ ನಿಯೋಜಿಸಲಾದ ಕರ್ತವ್ಯವನ್ನು ಮಾತ್ರ ನಿರ್ವಹಿಸಿದ್ದಾರೆ. ಇದು ವಿಶೇಷವೇನೂ ಅಲ್ಲ ಎಂದು ಪಕ್ಷವು ಅಭಿಪ್ರಾಯಪಟ್ಟಿದೆ.

ನಿಪಾಹ್ ಮತ್ತು ಕೋವಿಡ್ -19 ವಿರುದ್ಧದ ಹೋರಾಟವು ಜಂಟಿ ಪ್ರಯತ್ನವಾಗಿದೆ ಎಂದು ಪಕ್ಷವು ನಂಬುತ್ತದೆ. ಇದು ವೈಯಕ್ತಿಕ ಪ್ರಯತ್ನವಲ್ಲ, ಆದ್ದರಿಂದ ಅವರು ಪ್ರಶಸ್ತಿಯನ್ನು ಸ್ವೀಕರಿಸಬಾರದು. ಸಿಪಿಎಂನ ಈ ನಿರ್ಧಾರದಿಂದ ಕೆಲ ಮುಖಂಡರು ಸಿಟ್ಟಿಗೆದ್ದಿದ್ದಾರೆ. ಸಿಪಿಐ-ಎಂ ಮುಖಂಡ ಸಂಜೀವ್ ಥಾಮಸ್ ಮಾತನಾಡಿ, 'ಪಿಣರಾಯಿ ವಿಜಯನ್ ಅವರು ಶೈಲಜಾ ಅವರಿಗೆ ನೀಡಲಾಗಿದ್ದ ಶಿಕ್ಷಕಿ ಪ್ರಶಸ್ತಿಯನ್ನು ಮೊದಲು ರದ್ದುಗೊಳಿಸಿದ್ದರು. ತನ್ನನ್ನು ಬಿಟ್ಟು ಬೇರೆ ಯಾರನ್ನೂ ಸುದ್ದಿಯಲ್ಲಿರಲು ಬಯಸುವುದಿಲ್ಲ. ಭವಿಷ್ಯದಲ್ಲಿ ಈ ಬಗ್ಗೆ ಪಕ್ಷ ಪಶ್ಚಾತ್ತಾಪ ಪಡಲಿದೆ ಎಂದಿದ್ದಾರೆ.

ರಾಮನ್ ಮ್ಯಾಗ್ಸೆಸೆ ಪ್ರಶಸ್ತಿಯನ್ನು ಏಷ್ಯನ್ ನೊಬೆಲ್ ಪ್ರಶಸ್ತಿ ಎಂದು ಪರಿಗಣಿಸಲಾಗಿದೆ. ಅದನ್ನು ಸ್ವೀಕರಿಸಿದ್ದರೆ, ಪ್ರತಿಷ್ಠಿತ ಪ್ರಶಸ್ತಿಯನ್ನು ಗೆದ್ದ ಮೊದಲ ಕೇರಳ ಮಹಿಳೆಯಾಗುತ್ತಿದ್ದರು ಎಂದು ಅವರು ಹೇಳಿದರು. ಕೃಷಿ ವಿಜ್ಞಾನಿ ಡಾ.ಎಂ.ಎಸ್. ಸ್ವಾಮಿನಾಥನ್, ಪತ್ರಕರ್ತ ಸಂಪಾದಕ ಬಿ.ಜಿ. ವರ್ಗೀಸ್ ಮತ್ತು ಭಾರತದ ಪ್ರಸಿದ್ಧ ಚುನಾವಣಾ ಆಯುಕ್ತ ಟಿ.ಎನ್. ಶೇಷನ್ ಪ್ರತಿಷ್ಠಿತ ಪ್ರಶಸ್ತಿಗೆ ಭಾಜನರಾದ ಕೇರಳಿಗರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

SCROLL FOR NEXT