ದೇವೇಂದ್ರ ಫಡ್ನವೀಸ್ 
ದೇಶ

ಸೈರಸ್ ಮಿಸ್ತ್ರಿ ಅಪಘಾತ ಪ್ರಕರಣದ ಬಗ್ಗೆ ತನಿಖೆ ಆದೇಶಿಸಿದ ಡಿಸಿಎಂ ಫಡ್ನವೀಸ್ 

ಟಾಟಾ ಸನ್ಸ್ ನ ಅಧ್ಯಕ್ಷ ಸೈರಸ್ ಮಿಸ್ತ್ರಿ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ತನಿಖೆಗೆ ಆದೇಶಿಸಿದ್ದಾರೆ. 

ಮುಂಬೈ: ಟಾಟಾ ಸನ್ಸ್ ನ ಅಧ್ಯಕ್ಷ ಸೈರಸ್ ಮಿಸ್ತ್ರಿ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ತನಿಖೆಗೆ ಆದೇಶಿಸಿದ್ದಾರೆ. 

ಪಾಲ್ಘರ್ ನಲ್ಲಿ ನಡೆದ ಅಪಘಾತದಲ್ಲಿ ಸೈರಸ್ ಮಿಸ್ತ್ರಿ ಸಾವಿನ ಬಗ್ಗೆ ತಿಳಿದು ಅಘಾತ, ನೋವು ಉಂಟಾಗಿದೆ ಎಂದು ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ. ಡಿಜಿಪಿ ಜೊತೆ ಮಾತನಾಡಿದ್ದು, ಪ್ರಕರಣದ ಬಗ್ಗೆ ವಿಸ್ತೃತ ತನಿಖೆ ನಡೆಸುವಂತೆ ಸೂಚಿಸಿದ್ದೇನೆ ಎಂದು ಗೃಹ ಸಚಿವರೂ ಆಗಿರುವ ಫಡ್ನವೀಸ್ ಟ್ವೀಟ್ ನಲ್ಲಿ ತಿಳಿಸಿದ್ದಾರೆ. 

ಸೈರಸ್ ಮಿಸ್ತ್ರಿ ಕುಟುಂಬಕ್ಕೆ ದೇವೇಂದ್ರ ಫಡ್ನವೀಸ್ ಸಂತಾಪ ಸೂಚಿಸಿದ್ದಾರೆ. ಈ ನಡುವೆ ಪೊಲೀಸರು ಪ್ರಾಥಮಿಕ ವರದಿಗಳ ಆಧಾರದಲ್ಲಿ ಮಾಹಿತಿ ನೀಡಿದ್ದು, ಸೈರಸ್ ಮಿಸ್ತ್ರಿ ಇದ್ದ ಕಾರಿನ ಚಾಲಕ ಅತಿ ವೇಗವಾಗಿ ಚಾಲನೆ ಮಾಡುತ್ತಿದ್ದ ಎಂದು ಪಾಲ್ಘರ್ ಪೊಲೀಸರು ಹೇಳಿದ್ದಾರೆ. ಚಾಲಕ ಅತಿ ವೇಗವಾಗಿದ್ದರ ಪರಿಣಾಮವಾಗಿ ನಿಯಂತ್ರಣ ಕಳೆದುಕೊಂಡಿದ್ದರಿಂದ ಅಪಘಾತ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

SCROLL FOR NEXT