ಪ್ರಿಯಾಂಕಾ ಗಾಂಧಿ ವಾದ್ರಾ 
ದೇಶ

ನೇಮಕಾತಿ ಹಗರಣ: ಉತ್ತರಾಖಂಡ ಸರ್ಕಾರದ ವಿರುದ್ಧ ಪ್ರಿಯಾಂಕಾ ಗಾಂಧಿ ವಾಗ್ದಾಳಿ; ಬಿಜೆಪಿ ಶಾಸಕರಿಂದಲೂ ಅಸಮಾಧಾನ 

ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಉತ್ತರಾಖಂಡ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ತೀವ್ರ ವಾಗ್ದಾಳಿ ನಡೆಸಿದ್ದು, ಇದು ನಿರುದ್ಯೋಗಿಗಳಿಗೆ ಮಾಡಿದ ವಂಚನೆ ಎಂದಿದ್ದಾರೆ.

ಡೆಹ್ರಾಡೂನ್: ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಉತ್ತರಾಖಂಡ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ತೀವ್ರ ವಾಗ್ದಾಳಿ ನಡೆಸಿದ್ದು, ಇದು ನಿರುದ್ಯೋಗಿಗಳಿಗೆ ಮಾಡಿದ ವಂಚನೆ ಎಂದಿದ್ದಾರೆ.

ಅಲ್ಲದೆ ಆಡಳಿತ ಪಕ್ಷದ ಬಿಜೆಪಿ ಶಾಸಕ ಮಹಂತ್ ದಿಲೀಪ್ ರಾವತ್ ಅವರು ತಮ್ಮದೇ ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಸಾರ್ವಜನಿಕ ಪ್ರತಿನಿಧಿಗಳ ನಡವಳಿಕೆಯು "ಜನರ ಸೇವೆಗಾಗಿ ಇರಬೇಕು. ಅವರನ್ನು ಲೂಟಿ ಮಾಡಬಾರದು" ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಧಾಮಿ ಸರ್ಕಾರವು ನೇಮಕಾತಿಗಳಲ್ಲಿ ವ್ಯಾಪಕ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಪ್ರಿಯಾಂಕಾ ಗಾಂಧಿ ಆರೋಪಿಸಿದ್ದಾರೆ. "ರಾಜ್ಯ ಸರ್ಕಾರವು ನಿರುದ್ಯೋಗಿಗಳ ಭಾವನೆಗಳೊಂದಿಗೆ ಆಟವಾಡುವ ಮೂಲಕ ವಂಚನೆ ಮಾಡುತ್ತಿದೆ" ಎಂದು ಪ್ರಿಯಾಂಕಾ ಟ್ವೀಟ್ ಮಾಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ತಮ್ಮ ಕಳವಳವನ್ನು ಹಂಚಿಕೊಂಡಿರುವ ಪ್ರಿಯಾಂಕಾ, "ಸರ್ಕಾರಿ ನೇಮಕಾತಿಗಳಲ್ಲಿ ಇಂತಹ ಅತಿರೇಕದ ಭ್ರಷ್ಟಾಚಾರವು ಉತ್ತರಾಖಂಡ, ಉತ್ತರ ಪ್ರದೇಶ ಅಥವಾ ಕೇಂದ್ರ ಸರ್ಕಾರ ದೇಶಾದ್ಯಂತ ಯುವಕರ ಭವಿಷ್ಯದ ಜೊತೆ ಆಟವಾಡುತ್ತಿದೆ ಎಂದು ಸಾಬೀತುಪಡಿಸಿದೆ. ಹಗರಣಗಳು ಅರ್ಹ ಮತ್ತು ವಿದ್ಯಾವಂತ ಯುವಕರ ಭವಿಷ್ಯವನ್ನು ಕತ್ತಲಲ್ಲಿ ಇಟ್ಟಿವೆ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT