ಅಮಿತ್ ಶಾ 
ದೇಶ

ಬಿಹಾರದಲ್ಲಿ ಅಮಿತ್ ಶಾ ಗಲಭೆಯನ್ನು ಪ್ರಚೋದಿಸುತ್ತಾರೆ; ಜೆಡಿಯು 

ಕೇಂದ್ರ ಗೃಹ ಸಚಿವ ಅಮಿತ್ ಶಾ ಬಿಹಾರದಲ್ಲಿ ಗಲಭೆಯನ್ನು ಪ್ರಚೋದಿಸಲು ಯತ್ನಿಸುತ್ತಾರೆ ಎಂದು ಬಿಹಾರ ಸಿಎಂ ನಿತೀಶ್ ಕುಮಾರ್ ಆರೋಪಿಸಿದ್ದಾರೆ. 

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಬಿಹಾರದಲ್ಲಿ ಗಲಭೆಯನ್ನು ಪ್ರಚೋದಿಸಲು ಯತ್ನಿಸುತ್ತಾರೆ ಎಂದು ಬಿಹಾರ ಸಿಎಂ ನಿತೀಶ್ ಕುಮಾರ್ ಆರೋಪಿಸಿದ್ದಾರೆ. 

ಈ ತಿಂಗಳಾಂತ್ಯಕ್ಕೆ ಅಮಿತ್ ಶಾ ಬಿಹಾರಕ್ಕೆ ಭೇಟಿ ನೀಡಲಿದ್ದಾರೆ. ಅಮಿತ್ ಶಾ ಭೇಟಿಯ ಬಗ್ಗೆ ಪ್ರತಿಕ್ರಿಯೆ ನೀಡಿರುವ ಜೆಡಿಯು ರಾಷ್ಟ್ರೀಯ ಅಧ್ಯಕ್ಷ ರಾಜೀವ್ ರಂಜನ್ ಸಿಂಗ್ ಅಮಿತ್ ಶಾ ಬಿಜೆಪಿಗೆ ಲಾಭವಾಗುವಂತೆ ಮಾಡುವುದಕ್ಕೆ ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಅಮಿತ್ ಶಾ ಇಲ್ಲಿಗೆ ಭೇಟಿ ನೀಡಿದಾಗ ಅವರು ಕೋಮು ಗಲಭೆಗಳನ್ನು ಪ್ರಚೋದಿಸಲು ಯತ್ನಿಸುತ್ತಾರೆ. ಆದರೆ ಬಿಹಾರದ ಮಂದಿ ಎಚ್ಚರಿಕೆಯಿಂದ ಇರಲಿದ್ದಾರೆ. ಅಮಿತ್ ಶಾ ಕೋಮು ಧ್ರುವೀಕರಣದಲ್ಲಿ ವಿಫಲರಾಗಲಿದ್ದಾರೆ ಎಂದು ರಾಜೀವ್ ರಂಜನ್ ಸಿಂಗ್ ಹೇಳಿದ್ದಾರೆ. ಅಮಿತ್ ಶಾ ಸೆ.23-24 ರಂದು ಮುಸ್ಲಿಮರು ಹೆಚ್ಚಿರುವ ಕಿಶನ್ ಗಂಜ್, ಪುರ್ನಿಯಾಗಳಿಗೆ ಭೇಟಿ ನೀಡಲಿದ್ದಾರೆ. 

ಬಿಹಾರದಲ್ಲಿ ನಿತೀಶ್ ಕುಮಾರ್ ಏಕಾ ಏಕಿ ಎನ್ ಡಿಎಯೊಂದಿಗಿನ ಮೈತ್ರಿ ಮುರಿದು ಆರ್ ಜೆಡಿ, ಕಾಂಗ್ರೆಸ್ ಜೊತೆ ಸೇರಿ ಹೊಸ ಸಮ್ಮಿಶ್ರ ಸರ್ಕಾರ ರಚನೆ ಮಾಡಿದ್ದರು. ಇದರಿಂದ ಬಿಜೆಪಿಗೆ ತೀವ್ರ ಹಿನ್ನೆಡೆಯುಂಟಾಗಿದ್ದು, ಪಕ್ಷದಲ್ಲಿ ರಾಜಕೀಯ ತಂತ್ರಗಾರಿಕೆಗೆ ಖ್ಯಾತಿ ಪಡೆದಿರುವ ಅಮಿತ್ ಶಾ ಈಗ ಭೇಟಿ ನೀಡುತ್ತಿರುವುದು ಚುನಾವಣೆಗಳ ದೃಷ್ಟಿಯಿಂದ ಮಹತ್ವ ಪಡೆದುಕೊಂಡಿದೆ.
 
ಈ ನಡುವೆ ಬಿಹಾರ ಸಿಎಂ, ಅರವಿಂದ್ ಕೇಜ್ರಿವಾಲ್ ಮತ್ತು ರಾಹುಲ್ ಗಾಂಧಿ ಸೇರಿದಂತೆ ಹಲವು ನಾಯಕರನ್ನು ಆ.04 ರಂದು ಭೇಟಿ ಮಾಡಲಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

SCROLL FOR NEXT