ಪ್ರಾತಿನಿಧಿಕ ಚಿತ್ರ 
ದೇಶ

ಕೇರಳ: ಹಾಲು ಖರೀದಿಸಲು ಹೋಗುತ್ತಿದ್ದ 12 ವರ್ಷದ ಬಾಲಕಿ ಮೇಲೆ ಬೀದಿ ನಾಯಿಗಳ ದಾಳಿ, ಸಾವು

ಕೇರಳದಲ್ಲಿ ಈ ವರ್ಷ ಈವರೆಗೆ ಒಟ್ಟು 20 ಮಂದಿ ರೇಬೀಸ್‌ ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್ ಮಾಹಿತಿ ನೀಡಿದ್ದಾರೆ.

ಪತ್ತನಂತಿಟ್ಟ: ಬೀದಿ ನಾಯಿ ಕಡಿತದಿಂದ ಚಿಕಿತ್ಸೆ ಪಡೆಯುತ್ತಿದ್ದ 12 ವರ್ಷದ ಬಾಲಕಿ ಸೋಮವಾರ ಕೊಟ್ಟಾಯಂ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ.

ಪತ್ತನಂತಿಟ್ಟ ಜಿಲ್ಲೆಯ ರಾನ್ನಿ ಮೂಲದ ಅಭಿರಾಮಿ ಮೃತ ದುರ್ದೈವಿ. ಅಭಿರಾಮಿ ಹಾಲು ಖರೀದಿಸಲು ಹೋಗುತ್ತಿದ್ದಾಗ ಬೀದಿ ನಾಯಿಗಳು ಆಕೆಯ ಕಾಲುಗಳು, ಕೈಗಳು ಮತ್ತು ಕಣ್ಣುಗಳ ಬಳಿ ಏಳು ಸ್ಥಳಗಳಲ್ಲಿ ಕಡಿದಿದ್ದವು.

ಆಕೆಯನ್ನು ಕೂಡಲೇ ಪತ್ತನಂತಿಟ್ಟ ಜನರಲ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಆಕೆಯ ಸ್ಥಿತಿ ಗಂಭೀರವಾದ ನಂತರ ಆಕೆಗೆ ಮೂರು ಆ್ಯಂಟಿ-ರೇಬಿಸ್ ಲಸಿಕೆಗಳನ್ನು ನೀಡಲಾಯಿತು.

ನಂತರ ಆಕೆಯನ್ನು ಕೊಟ್ಟಾಯಂ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಆಕೆಯ ಪ್ರಾಣ ಉಳಿಸಲಾಗಲಿಲ್ಲ. ಸಂತ್ರಸ್ತೆಯನ್ನು ವೆಂಟಿಲೇಟರ್‌ ಬೆಂಬಲದಲ್ಲಿಡಲಾಗಿತ್ತು.

ಆ್ಯಂಟಿ-ರೇಬಿಸ್ ಲಸಿಕೆಗಳ ಗುಣಮಟ್ಟವನ್ನು ಅಧ್ಯಯನ ಮಾಡಲು ವಿವಿಧ ಇಲಾಖೆಗಳ ತಜ್ಞರನ್ನು ಒಗ್ಗೂಡಿಸಿ ಮಂಡಳಿಯನ್ನು ಸ್ಥಾಪಿಸುವಂತೆ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಈ ಹಿಂದೆ ವೈದ್ಯಕೀಯ ಶಿಕ್ಷಣ ನಿರ್ದೇಶಕರಿಗೆ ನಿರ್ದೇಶನ ನೀಡಿದ್ದರು.

ಪ್ರತಿಪಕ್ಷದ ನಾಯಕ ವಿ.ಡಿ. ಸತೀಶನ್ ಅವರು ಬಾಲಕಿಗೆ ಉತ್ತಮ ಚಿಕಿತ್ಸೆ ನೀಡಲು ಮತ್ತು ಚಿಕಿತ್ಸೆಯ ವೆಚ್ಚವನ್ನು ಭರಿಸಬೇಕೆಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದರು.

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಇತ್ತೀಚೆಗೆ ರಾಜ್ಯ ವಿಧಾನಸಭೆಗೆ ಮಾಹಿತಿ ನೀಡಿದ್ದು, ರಾಜ್ಯದ ಆಸ್ಪತ್ರೆಗಳಲ್ಲಿ ನೀಡಲಾಗುತ್ತಿರುವ ಆ್ಯಂಟಿ ರೇಬಿಸ್ ಲಸಿಕೆ ಗುಣಮಟ್ಟವನ್ನು ಪರಿಶೀಲಿಸಲು ಸರ್ಕಾರವು ತಜ್ಞರ ಸಮಿತಿಯನ್ನು ರಚಿಸಲಿದೆ ಎಂದಿದ್ದರು.

ಕೇರಳದಲ್ಲಿ ಈ ವರ್ಷ ಈವರೆಗೆ ಒಟ್ಟು 20 ಮಂದಿ ರೇಬೀಸ್‌ ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್ ಮಾಹಿತಿ ನೀಡಿದ್ದಾರೆ.

ಚುಚ್ಚುಮದ್ದಿನ ಹೊರತಾಗಿಯೂ ಸಾವು ಏಕೆ ಸಂಭವಿಸಿತು ಎಂಬ ಸಾಮಾನ್ಯ ಜನರ ಪ್ರಮುಖ ಕಳವಳವನ್ನು ಗಮನಿಸಿದ ಆರೋಗ್ಯ ಸಚಿವರು ವೈದ್ಯಕೀಯ ವರದಿಗಳ ಪ್ರಕಾರ ಅವರೆಲ್ಲರಿಗೂ ಮುಖ, ಬೆರಳುಗಳು ಮುಂತಾದ ರೋಗ ಹರಡುವ ನಿರ್ಣಾಯಕ ದೇಹದ ಭಾಗಗಳಿಗೆ ನಾಯಿ ಕಡಿದಿತ್ತು ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT