ನೇತಾಜಿ ಪ್ರತಿಮೆ 
ದೇಶ

ನೇತಾಜಿ ಪ್ರತಿಮೆ ಅನಾವರಣಕ್ಕೆ ಪುತ್ರಿ ಗೈರು ಸಾಧ್ಯತೆ, ಆದರೆ ಬೋಸ್ ಅಸ್ಥಿಯನ್ನು ಭಾರತಕ್ಕೆ ತನ್ನಿ ಎಂದ ಅನಿತಾ ಬೋಸ್

ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಇಂಡಿಯಾ ಗೇಟ್‌ನಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಪ್ರತಿಮೆಯನ್ನು ಅನಾವರಣಗೊಳಿಸುತ್ತಿದ್ದು, ನೇತಾಜಿ ಅವರ ಪುತ್ರಿ ಅನಿತಾ ಬೋಸ್ ಅವರು ಈ ಕಾರ್ಯಕ್ರಮವನ್ನು ತಪ್ಪಿಸಿಕೊಳ್ಳುವ...

ಕೋಲ್ಕತ್ತಾ: ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಇಂಡಿಯಾ ಗೇಟ್‌ನಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಪ್ರತಿಮೆಯನ್ನು ಅನಾವರಣಗೊಳಿಸುತ್ತಿದ್ದು, ನೇತಾಜಿ ಅವರ ಪುತ್ರಿ ಅನಿತಾ ಬೋಸ್ ಅವರು ಈ ಕಾರ್ಯಕ್ರಮವನ್ನು ತಪ್ಪಿಸಿಕೊಳ್ಳುವ ಸಾಧ್ಯತೆ ಇದೆ. ಆದರೆ ತಮ್ಮ ತಂದೆ ಸುಭಾಷ್ ಚಂದ್ರ ಬೋಸ್ ಅವರ ಅಸ್ಥಿಯನ್ನು ಭಾರತಕ್ಕೆ ಮರಳಿ ತರಲು ಇರುವ "ಷರತ್ತುಗಳು ಮತ್ತು ಕಾರ್ಯವಿಧಾನಗಳ" ಕುರಿತು ಚರ್ಚಿಸಲು ಪ್ರಧಾನಿ ಮೋದಿಯನ್ನು ಭೇಟಿ ಮಾಡಲು ಬಯಸಿದ್ದಾರೆ.

ಈಗ ಜಪಾನ್‌ನ ರೆಂಕೋಜಿ ದೇವಸ್ಥಾನದಲ್ಲಿ ಇರಿಸಲಾಗಿರುವ ನೇತಾಜಿ ಅವರ ಅವಶೇಷಗಳನ್ನು ಗೌರವಯುತವಾಗಿ ಮರಳಿ ಭಾರತಕ್ಕೆ ತರಬೇಕು ಎಂದು ಸುಮಾರು 80 ವರ್ಷ ವಯಸ್ಸಿನ ಅನಿತಾ ಬೋಸ್ ಪ್ಫಾಫ್ ಅವರು ಪಿಟಿಐಗೆ ತಿಳಿಸಿದ್ದಾರೆ.

"ನನ್ನ ತಂದೆಯ ಅವಶೇಷಗಳನ್ನು ಹಿಂದಿರುಗಿಸುವ ಷರತ್ತುಗಳು ಮತ್ತು ಕಾರ್ಯವಿಧಾನಗಳ ಬಗ್ಗೆ ನಾನು ಪ್ರಧಾನಿ ಅವರೊಂದಿಗೆ ಚರ್ಚಿಸಲು ಬಯಸುತ್ತೇನೆ" ಎಂದು ವೃತ್ತಿಯಲ್ಲಿ ಅರ್ಥಶಾಸ್ತ್ರಜ್ಞರಾದ ಅನಿತಾ ಬೋಸ್ ಅವರು ದೂರವಾಣಿ ಮೂಲಕ ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

ನೇತಾಜಿ ಅವರ ಪ್ರತಿಮೆಯ ಅನಾವರಣ ಕಾರ್ಯಕ್ರಮಕ್ಕೆ ನನಗೆ ಆಹ್ವಾನವಿದ್ದರೂ, ಕಡಿಮೆ ಸಮಯದಿಂದಾಗಿ ತಾನು ವಾಸಿಸುವ ಜರ್ಮನಿಯಿಂದ ದೆಹಲಿಗೆ ಪ್ರಯಾಣ ಕೈಗೊಳ್ಳಲು ಕಷ್ಟವಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಸ್ವಾತಂತ್ರ್ಯ ಸೇನಾನಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರು ಸ್ವಾತಂತ್ರ್ಯ ಚಳುವಳಿಗೆ ನೀಡಿದ ಕೊಡುಗೆಗಳನ್ನು ಗೌರವಿಸುವ ಸಲುವಾಗಿ ಅವರ ಭವ್ಯ ಪ್ರತಿಮೆಯನ್ನು ಇಂಡಿಯಾ ಗೇಟ್ ನಲ್ಲಿ ಭವ್ಯ ಮೇಲಾವರಣದ ಅಡಿಯಲ್ಲಿ ಸ್ಥಾಪನೆ ಮಾಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT