ಸಂಜಯ್ ರಾವುತ್ 
ದೇಶ

ಹಣ ಅಕ್ರಮ ವರ್ಗಾವಣೆ ಪ್ರಕರಣ: ಸೆಪ್ಟೆಂಬರ್ 19ರವರೆಗೆ ಸಂಜಯ್ ರಾವತ್‌ಗೆ ಜೈಲೇ ಗತಿ!

ಮುಂಬೈನ ವಿಶೇಷ ನ್ಯಾಯಾಲಯವು ರಾಜ್ಯಸಭಾ ಸದಸ್ಯ ಮತ್ತು ಶಿವಸೇನೆ ನಾಯಕ ಸಂಜಯ್ ರಾವುತ್ ಅವರ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 19 ರವರೆಗೆ ವಿಸ್ತರಿಸಿದೆ.

ಮುಂಬೈ: ಇಲ್ಲಿನ ವಿಶೇಷ ನ್ಯಾಯಾಲಯವು ರಾಜ್ಯಸಭಾ ಸದಸ್ಯ ಮತ್ತು ಶಿವಸೇನೆ ನಾಯಕ ಸಂಜಯ್ ರಾವುತ್ ಅವರ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 19 ರವರೆಗೆ ವಿಸ್ತರಿಸಿದೆ. ಪತ್ರಾ ಚಾಲ್ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ)ದಿಂದ ಬಂಧನಕ್ಕೊಳಗಾಗಿರುವ ಅವರಿಗೆ ಜೈಲೇ ಗತಿ ಎನ್ನುವಂತಾಗಿದೆ.

ಸಂಜಯ್ ರಾವುತ್ ಅವರು ಇನ್ನೂ ಜಾಮೀನು ಅರ್ಜಿ ಸಲ್ಲಿಸಿಲ್ಲ ಎಂದು ಅವರ ಪರ ವಕೀಲರು ಸೋಮವಾರ ನ್ಯಾಯಾಲಯಕ್ಕೆ ತಿಳಿಸಿದರು.

ಸಂಜಯ್ ರಾವುತ್ ಅವರ ನ್ಯಾಯಾಂಗ ಬಂಧನವನ್ನು ವಿಸ್ತರಿಸುವಂತೆ ಕೋರಿ ಇ.ಡಿ ಈ ಹಿಂದೆ ಮನವಿ ಸಲ್ಲಿಸಿತ್ತು.

ಸಂಸತ್ತಿನ ಕೆಲವು ನಮೂನೆಗಳಿಗೆ ಸಹಿ ಹಾಕಲು ಮತ್ತು ನ್ಯಾಯಾಲಯ ಹಾಗ ಇ.ಡಿಗೆ ಅದರ ಪ್ರತಿಯನ್ನು ಒದಗಿಸಲು ನ್ಯಾಯಾಲಯವು ಸಂಜಯ್ ರಾವುತ್ ಅವರಿಗೆ ಅವಕಾಶ ನೀಡಿದೆ.

ಸಂಜಯ್ ರಾವುತ್ ಅವರ ಕುಟುಂಬ ಇಂದು ನ್ಯಾಯಾಲಯಕ್ಕೆ ಹಾಜರಾಗಿತ್ತು. ಅವರ ಅನೇಕ ಬೆಂಬಲಿಗರೂ ನ್ಯಾಯಾಲಯದ ಮೆಟ್ಟಿಲೇರಿದ್ದರು.

1,034 ಕೋಟಿ ರೂಪಾಯಿ ಪತ್ರಾ ಚಾಲ್ ಭೂ ಹಗರಣ ಪ್ರಕರಣದಲ್ಲಿ ಆರು ಗಂಟೆಗಳ ವಿಚಾರಣೆಯ ನಂತರ ಸಂಜಯ್ ರಾವುತ್ ಅವರನ್ನು ಆಗಸ್ಟ್ 1 ರಂದು ಇ.ಡಿ ಬಂಧಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ