ಸಂಜಯ್ ರಾವುತ್ 
ದೇಶ

ಹಣ ಅಕ್ರಮ ವರ್ಗಾವಣೆ ಪ್ರಕರಣ: ಸೆಪ್ಟೆಂಬರ್ 19ರವರೆಗೆ ಸಂಜಯ್ ರಾವತ್‌ಗೆ ಜೈಲೇ ಗತಿ!

ಮುಂಬೈನ ವಿಶೇಷ ನ್ಯಾಯಾಲಯವು ರಾಜ್ಯಸಭಾ ಸದಸ್ಯ ಮತ್ತು ಶಿವಸೇನೆ ನಾಯಕ ಸಂಜಯ್ ರಾವುತ್ ಅವರ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 19 ರವರೆಗೆ ವಿಸ್ತರಿಸಿದೆ.

ಮುಂಬೈ: ಇಲ್ಲಿನ ವಿಶೇಷ ನ್ಯಾಯಾಲಯವು ರಾಜ್ಯಸಭಾ ಸದಸ್ಯ ಮತ್ತು ಶಿವಸೇನೆ ನಾಯಕ ಸಂಜಯ್ ರಾವುತ್ ಅವರ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 19 ರವರೆಗೆ ವಿಸ್ತರಿಸಿದೆ. ಪತ್ರಾ ಚಾಲ್ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ)ದಿಂದ ಬಂಧನಕ್ಕೊಳಗಾಗಿರುವ ಅವರಿಗೆ ಜೈಲೇ ಗತಿ ಎನ್ನುವಂತಾಗಿದೆ.

ಸಂಜಯ್ ರಾವುತ್ ಅವರು ಇನ್ನೂ ಜಾಮೀನು ಅರ್ಜಿ ಸಲ್ಲಿಸಿಲ್ಲ ಎಂದು ಅವರ ಪರ ವಕೀಲರು ಸೋಮವಾರ ನ್ಯಾಯಾಲಯಕ್ಕೆ ತಿಳಿಸಿದರು.

ಸಂಜಯ್ ರಾವುತ್ ಅವರ ನ್ಯಾಯಾಂಗ ಬಂಧನವನ್ನು ವಿಸ್ತರಿಸುವಂತೆ ಕೋರಿ ಇ.ಡಿ ಈ ಹಿಂದೆ ಮನವಿ ಸಲ್ಲಿಸಿತ್ತು.

ಸಂಸತ್ತಿನ ಕೆಲವು ನಮೂನೆಗಳಿಗೆ ಸಹಿ ಹಾಕಲು ಮತ್ತು ನ್ಯಾಯಾಲಯ ಹಾಗ ಇ.ಡಿಗೆ ಅದರ ಪ್ರತಿಯನ್ನು ಒದಗಿಸಲು ನ್ಯಾಯಾಲಯವು ಸಂಜಯ್ ರಾವುತ್ ಅವರಿಗೆ ಅವಕಾಶ ನೀಡಿದೆ.

ಸಂಜಯ್ ರಾವುತ್ ಅವರ ಕುಟುಂಬ ಇಂದು ನ್ಯಾಯಾಲಯಕ್ಕೆ ಹಾಜರಾಗಿತ್ತು. ಅವರ ಅನೇಕ ಬೆಂಬಲಿಗರೂ ನ್ಯಾಯಾಲಯದ ಮೆಟ್ಟಿಲೇರಿದ್ದರು.

1,034 ಕೋಟಿ ರೂಪಾಯಿ ಪತ್ರಾ ಚಾಲ್ ಭೂ ಹಗರಣ ಪ್ರಕರಣದಲ್ಲಿ ಆರು ಗಂಟೆಗಳ ವಿಚಾರಣೆಯ ನಂತರ ಸಂಜಯ್ ರಾವುತ್ ಅವರನ್ನು ಆಗಸ್ಟ್ 1 ರಂದು ಇ.ಡಿ ಬಂಧಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT