ಅಮಿತ್ ಶಾ 
ದೇಶ

ಉದ್ಧವ್ ಠಾಕ್ರೆಗೆ ಪಾಠ ಕಲಿಸುವ ಅಗತ್ಯವಿದೆ: ಅಮಿತ್ ಶಾ

ಬಿಜೆಪಿಗೆ ದ್ರೋಹ ಬಗೆದಿರುವ ಶಿವಸೇನಾ ಮುಖಂಡ ಉದ್ಧವ್ ಠಾಕ್ರೆಗೆ ಪಾಠ ಕಲಿಸಬೇಕಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಮುಂಬೈ: ಬಿಜೆಪಿಗೆ ದ್ರೋಹ ಬಗೆದಿರುವ ಶಿವಸೇನಾ ಮುಖಂಡ ಉದ್ಧವ್ ಠಾಕ್ರೆಗೆ ಪಾಠ ಕಲಿಸಬೇಕಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಬಿಜೆಪಿ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ರಾಜಕೀಯದಲ್ಲಿ ನಾವು ಏನು ಬೇಕಾದರೂ ಸಹಿಸಬಹುದು ಆದರೆ ದ್ರೋಹವನ್ನು ಸಹಿಸಲು ಆಗದು ಎಂದು ಅಮಿತ್ ಶಾ ಸಭೆಯಲ್ಲಿ ಗುಡುಗಿದ್ದಾಗಿ ಮೂಲಗಳು ತಿಳಿಸಿವೆ.

ಶಿವಸೇನೆ ಇಬ್ಬಾಗಕ್ಕೆ ಉದ್ದವ್ ಠಾಕ್ರೆ ಕಾರಣ, ಅವರ ದುರಾಸೆಯಿಂದ ಸೇನೆಯ ಕೆಲ ಶಾಸಕರು ತಿರುಗಿ ಬೀಳುವ ಮೂಲಕ ಮಹಾ ವಿಕಾಸ್ ಆಘಾದಿ ಸರ್ಕಾರವನ್ನು ಪತನಗೊಳಿಸಿದ್ದಾಗಿ ಅಮಿತ್ ಶಾ ಹೇಳಿದ್ದಾರೆ. ಉದ್ದವ್ ಠಾಕ್ರೆ ಬಿಜೆಪಿಗೆ ಮಾತ್ರ ದ್ರೋಹ ಬಗೆದಿಲ್ಲ, ಸಿದ್ಧಾಂತಕ್ಕೆ ದ್ರೋಹ ಬಗೆದಿದ್ದಾರೆ ಮತ್ತು ಮಹಾರಾಷ್ಟ್ರ ಜನಾದೇಶಕ್ಕೆ ಅವಮಾನಿಸಿದ್ದಾರೆ ಎಂದು ಆರೋಪಿಸಿದರು. 

ಉದ್ದವ್ ಠಾಕ್ರೆಯ ಅಧಿಕಾರದ ದುರಾಸೆ ಯಿಂದ ಇಂದು ಅವರ ಪಕ್ಷ ಕುಗ್ಗಿದೆ. ಬಿಜೆಪಿಯಿಂದ ಅಲ್ಲ, ಉದ್ಧವ್ ಠಾಕ್ರೆಗೆ ಮುಖ್ಯಮಂತ್ರಿ ಹುದ್ದೆ ಭರವಸೆಯನ್ನು ಎಂದಿಗೂ ನಾವು ನೀಡಿರಲಿಲ್ಲ ಎಂದು ಇಂದು ನಾನು ಮತ್ತೊಮ್ಮೆ ಹೇಳಲು ಬಯಸುತ್ತೇನೆ. ನಾವು ಬಹಿರಂಗವಾಗಿ ರಾಜಕೀಯ ಮಾಡುತ್ತೀವಿ ಆದರೆ, ಬಾಗಿಲು ಹಾಕಿದ ಕೊಠಡಿಯಲ್ಲಿ ರಾಜಕೀಯ ಮಾಡಲ್ಲ ಎಂದು ಅಮಿತ್ ಶಾ ಹೇಳಿದ್ದಾರೆ.

ರಾಜಕೀಯದಲ್ಲಿ ಮೋಸ ಮಾಡುವವರಿಗೆ ಶಿಕ್ಷೆಯಾಗಬೇಕು, ಮುಂಬೈನಲ್ಲಿ ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮಿಷನ್ 150 ಗುರಿ ಸಾಧಿಸಬೇಕು ಎಂದು ಅಮಿತ್ ಶಾ ಹೇಳಿರುವುದಾಗಿ ಮೂಲಗಳು ವರದಿ ಮಾಡಿವೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

SCROLL FOR NEXT