ಸಾಂದರ್ಭಿಕ ಚಿತ್ರ 
ದೇಶ

ವ್ಯಕ್ತಿಗೆ ಗುಂಪು ಥಳಿತ: ಬಿಜೆಪಿ ನಾಯಕ ಸೇರಿ 22 ಮಂದಿ ವಿರುದ್ಧ ಎಫ್ಐಆರ್

ವ್ಯಕ್ತಿಯೋರ್ವ ಗುಂಪು ಥಳಿತಕ್ಕೆ ಒಳಗಾದ ಪ್ರಕರಣದಲ್ಲಿ ಬಿಜೆಪಿ ನಾಯಕ ಆತನ ಬೆಂಬಲಿಗರು ಸೇರಿ 22 ಮಂದಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. 

ಲಖನೌ: ವ್ಯಕ್ತಿಯೋರ್ವ ಗುಂಪು ಥಳಿತಕ್ಕೆ ಒಳಗಾದ ಪ್ರಕರಣದಲ್ಲಿ ಬಿಜೆಪಿ ನಾಯಕ ಆತನ ಬೆಂಬಲಿಗರು ಸೇರಿ 22 ಮಂದಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. 

ಉತ್ತರ ಪ್ರದೇಶದ ಭಾದೋಹಿ'ಯಲ್ಲಿ ಈ ಘಟನೆ ವರದಿಯಾಗಿದೆ. ಪೊಲೀಸರು ನೀಡಿರುವ ಮಾಹಿತಿಯ ಪ್ರಕಾರ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 7 ಮಂದಿಯನ್ನು ಬಂಧಿಸಲಾಗಿದ್ದು  ಅಹಿತಕರ ಘಟನೆಗಳನ್ನು ತಡೆಯುವುದಕ್ಕಾಗಿ ಹೆಚ್ಚುವರಿ ಪಡೆಗಳನ್ನು ನಿಯೋಜಿಸಲಾಗಿದೆ. 

ಬಿಜೆಪಿ ನಾಯಕ ಹಾಗೂ ನಗರ ಪಾಲಿಕೆಯ ಅಧ್ಯಕ್ಷ ಅಶೋಕ್ ಕುಮಾರ್ ಜೈಸ್ವಾಲ್ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಪೊಲೀಸರು ನೀಡಿರುವ ಮಾಹಿತಿಯ ಪ್ರಕಾರ ಕ್ಷುಲ್ಲಕ ವಿಚಾರಕ್ಕಾಗಿ ವಾಗ್ವಾದ ಪ್ರಾರಂಭವಾಗಿ ಅದು ಗುಂಪು ಹಲ್ಲೆಗೆ ತಿರುಗಿದೆ. 

ಹೆಚ್ಚುವರಿ ಎಸ್ ಪಿ ರಾಜೇಶ್ ಭಾರ್ತಿ ಮಾತನಾಡಿ, ಮುಸ್ತಕ್ವೀಮ್ ನ ಆಡು ಪಕ್ಕದಲ್ಲಿದ್ದ ಸಂದೀಪ್ ಎಂಬುವವರ ಮನೆಗೆ ದಾರಿ ತಪ್ಪಿ ಬಂದಿದ್ದ ಹಿನ್ನೆಲೆಯಲ್ಲಿ ವಾಗ್ವಾದ ಪ್ರಾರಂಭವಾಗಿತ್ತು. ಈ ಘಟನೆ ನಡೆದ ರಾತ್ರಿ ಜೈಸ್ವಾಲ್ ಹಾಗೂ ಇತರರು ಮುಸ್ತಕ್ವೀಮ್ ಮನೆಗೆ ನುಗ್ಗಿ ಥಳಿಸತೊಡಗಿದರು ಎಂದು ಹೇಳಿದ್ದಾರೆ.
 
ಥಳಿತದ ತೀವ್ರತೆಗೆ ಮುಸ್ತಕ್ವೀಮ್ ತೀವ್ರವಾದ ಆಂತರಿಕ ಗಾಯಗಳಿಂದಾಗಿ ಮೃತಪಟ್ಟಿದ್ದಾರೆ ಮುಸ್ತಕ್ವೀಮ್ ನ ಮಕ್ಕಳಾದ ಶೀಬಾ ಹಾಗೂ ಶಬ್ನಮ್ ತೀವ್ರವಾಗಿ ಗಾಯಗೊಂಡಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!