ಕಮಾಲ್ ಖಾನ್ 
ದೇಶ

ವಿವಾದಾತ್ಮಕ ಟ್ವೀಟ್: ಕಮಾಲ್ ಖಾನ್ ಗೆ ಜಾಮೀನು

ನಟ ಅಕ್ಷಯ್ ಕುಮಾರ್ ಹಾಗೂ ಸಿನಿಮಾ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಬಗ್ಗೆ ವಿವಾದಾತ್ಮಕ ಟ್ವೀಟ್ ಮಾಡಿದ್ದ ಪ್ರಕರಣದಲ್ಲಿ ನಟ ಕಮಾಲ್ ಆರ್ ಖಾನ್ ಗೆ ಮುಂಬೈ ಕೋರ್ಟ್ ಜಾಮೀನು ಮಂಜೂರು ಮಾಡಿದೆ. 

ಮುಂಬೈ: ನಟ ಅಕ್ಷಯ್ ಕುಮಾರ್ ಹಾಗೂ ಸಿನಿಮಾ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಬಗ್ಗೆ ವಿವಾದಾತ್ಮಕ ಟ್ವೀಟ್ ಮಾಡಿದ್ದ ಪ್ರಕರಣದಲ್ಲಿ ನಟ ಕಮಾಲ್ ಆರ್ ಖಾನ್ ಗೆ ಮುಂಬೈ ಕೋರ್ಟ್ ಜಾಮೀನು ಮಂಜೂರು ಮಾಡಿದೆ. 

ಇದಕ್ಕೂ ಮುನ್ನ ಕಮಾಲ್ ಖಾನ್ ವಿರುದ್ಧ 2021 ರಲ್ಲಿ  ದಾಖಲಾಗಿದ್ದ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಮುಂಬೈ ನ ಮತ್ತೊಂದು ಕೋರ್ಟ್ ಮಂಗಳವಾರದಂದು (ಸೆ.06) ರಂದು ಜಾಮೀನು ಮಂಜೂರು ಮಾಡಿತ್ತು. 

ವಿವಾದಾತ್ಮಕ ಟ್ವೀಟ್ ಪ್ರಕರಣದಲ್ಲಿ ಕಳೆದ ವಾರ ಖಾನ್ ಅವರನ್ನು ಮುಂಬೈ ವಿಮಾನ ನಿಲ್ದಾಣದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದರು. 

ಗುರುವಾರ ಬೆಳಿಗ್ಗೆ ಖಾನ್ ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ. ಖಾನ್ ಅವರ ಸಾಮಾಜಿಕ ಜಾಲತಾಣದ ಬರಹಗಳು ಕೋಮು ಪ್ರಚೋದಕನಾರಿಯಾಗಿತ್ತು ಹಾಗೂ ಅವರು ಬಾಲಿವುಡ್ ನ ತಾರೆಯರನ್ನು ಟಾರ್ಗೆಟ್ ಮಾಡಿದ್ದರು ಎಂದು ಪೊಲೀಸರು ಹೇಳಿದ್ದಾರೆ. 

ಆದರೆ ಖಾನ್ ಪರ ವಾದ ಮಂಡಿಸಿದ ವಕೀಲರು, ಪ್ರಶ್ನೆಗೆ ಗುರಿಯಾಗಿರುವ ಖಾನ್ ಅವರ ಟ್ವೀಟ್ ಗಳು ಲಕ್ಷ್ಮಿ ಬಾಂಬ್ ಸಿನಿಮಾ (ಬಿಡುಗಡೆಯಾಗಿದ್ದು ಲಕ್ಷ್ಮಿ ಎಂಬ ಶೀರ್ಷಿಕೆಯಡಿ) ಕುರಿತಾಗಿತ್ತು ಹಾಗೂ ಪೊಲೀಸರು ಹೇಳಿರುವಂತೆ ಯಾವುದೇ ಅಪರಾಧವೂ ಸಂಭವಿಸಿಲ್ಲ, ಖಾನ್ ಸಿನಿಮಾ ಕ್ಷೇತ್ರದಲ್ಲಿ ವಿಮರ್ಶಕರಾಗಿಯೂ ಇದ್ದಾರೆ ಎಂದು ಜಾಮೀನು ಅರ್ಜಿ ವಾದದಲ್ಲಿ ವಕೀಲರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT