ಎಂ. ನಾಗೇಶ್ವರ್‌ ರಾವ್‌ 
ದೇಶ

ಟ್ವಿಟರ್ ಬ್ಲೂ-ಟಿಕ್ ಪ್ರಕರಣ: ಬೇಷರತ್ ಕ್ಷಮೆಯಾಚಿಸಿದ ಸಿಬಿಐ ಮಾಜಿ ನಿರ್ದೇಶಕ, ದಂಡ ಮನ್ನಾ ಮಾಡಿದ ಕೋರ್ಟ್

ನಾಗೇಶ್ವರ್‌ ರಾವ್‌ ಅವರು ಏಪ್ರಿಲ್‌ 7 ರಂದು ಇದೇ ರೀತಿಯ ಅರ್ಜಿ ಸಲ್ಲಿಸಿದ್ದರು. ಈ ವಿಚಾರದಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿದ್ದ ಹೈಕೋರ್ಟ್‌ ಟ್ವಿಟರ್‌ ಸಂಸ್ಥೆಯನ್ನು ಸಂಪರ್ಕಿಸುವಂತೆ ಸೂಚಿಸಿತ್ತು. ಆದರೆ, ಈ ವರೆಗೆ ಟ್ವಿಟರ್‌ ಬ್ಲೂ ಟಿಕ್‌ ಸಿಕ್ಕಿಲ್ಲ ಎಂದು ಅವರು ಮರು ಅರ್ಜಿ ಸಲ್ಲಿಸಿದ್ದರು.

ನವದೆಹಲಿ: ತಮ್ಮ ಟ್ವಿಟರ್‌ ಖಾತೆಯ ‘ಬ್ಲೂ ಟಿಕ್‌’ (ಅಧಿಕೃತ ಮುದ್ರೆ) ಮರುಸ್ಥಾಪನೆ ಕೋರಿ ಸಿಬಿಐನ ಮಾಜಿ ನಿರ್ದೇಶಕ ಎಂ. ನಾಗೇಶ್ವರ್‌ ರಾವ್‌ ಅವರು ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದ ಸಂದರ್ಭದಲ್ಲಿ ವಿಧಿಸಿದ್ದ ₹ 25,000 ದಂಡವನ್ನು ಪಾವತಿಸದಂತೆ ದೆಹಲಿ ಹೈಕೋರ್ಟ್‌ ಇಂದು ಮನ್ನಿಸಿದೆ.

ಈ ವೇಳೆ ನಿವೃತ್ತ ಐಪಿಎಸ್ ಅಧಿಕಾರಿ ನ್ಯಾಯಾಲಯಕ್ಕೆ ಬೇಷರತ್ ಕ್ಷಮೆಯಾಚಿಸಿದರು ಮತ್ತು ತಾನು ಪಿಂಚಣಿದಾರನಾಗಿದ್ದು, 'ತನ್ನ ಗುರುತನ್ನು ಸುರಕ್ಷಿತವಾಗಿರಿಸಲು ಕೇಳಿದ್ದೆ' ಎಂದು ಹೇಳಿದರು.

ಅವರಿಗೆ ವಿಧಿಸಿದ್ದ ದಂಡವನ್ನು ಮನ್ನಾ ಮಾಡಿದ ನ್ಯಾಯಮೂರ್ತಿ ಯಶವಂತ್ ವರ್ಮಾ, 'ಅರ್ಜಿದಾರರು ಕೇಳಿರುವ ಬೇಷರತ್ ಕ್ಷಮೆಯನ್ನು ಗಮನದಲ್ಲಿಟ್ಟುಕೊಂಡು, 2022ರ ಮೇ 17ರಂದು ನೀಡಿದ್ದ ಆದೇಶದ ಪ್ರಕಾರ ದಂಡವನ್ನು ಅಳಿಸಲಾಗುತ್ತದೆ' ಎಂದು ಆದೇಶಿಸಿದರು.

ಟ್ವಿಟರ್‌ನಲ್ಲಿನ ಅವರ ಖಾತೆಯು ಬ್ಲೂ ಟಿಕ್ ಅನ್ನು ಹೊಂದಿತ್ತು. ಆದರೆ, ಅದನ್ನು ಮಾರ್ಚ್ 2022 ರಲ್ಲಿ ತೆಗೆದುಹಾಕಲಾಗಿದೆ ಎಂದು ನಾಗೇಶ್ವರ್‌ ರಾವ್‌ ತಮ್ಮ ಅರ್ಜಿಯಲ್ಲಿ ಹೇಳಿದ್ದರು. ಈ ಅರ್ಜಿಯನ್ನು ಮೇ ತಿಂಗಳಲ್ಲಿ ನ್ಯಾಯಾಲಯ ವಜಾಗೊಳಿಸಿತ್ತು.

ನಾಗೇಶ್ವರ್‌ ರಾವ್‌ ಅವರು ಏಪ್ರಿಲ್‌ 7 ರಂದು ಇದೇ ರೀತಿಯ ಅರ್ಜಿ ಸಲ್ಲಿಸಿದ್ದರು. ಈ ವಿಚಾರದಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿದ್ದ ಹೈಕೋರ್ಟ್‌ ಟ್ವಿಟರ್‌ ಸಂಸ್ಥೆಯನ್ನು ಸಂಪರ್ಕಿಸುವಂತೆ ಸೂಚಿಸಿತ್ತು. ಆದರೆ, ಈ ವರೆಗೆ ಟ್ವಿಟರ್‌ ಬ್ಲೂ ಟಿಕ್‌ ಸಿಕ್ಕಿಲ್ಲ ಎಂದು ಅವರು ಮರು ಅರ್ಜಿ ಸಲ್ಲಿಸಿದ್ದರು.

ಟ್ವಿಟರ್, ಫೇಸ್‌ಬುಕ್‌, ಇನ್‌ಸ್ಟಾಗ್ರಾಮ್ ಮುಂತಾದ ಸಾಮಾಜಿಕ ಮಾಧ್ಯಮಗಳ ಬಳಕೆದಾರರ ಕುಂದುಕೊರತೆಗಳು ಅಥವಾ ಬ್ಲೂಟಿಕ್‌ಗೆ ಸಂಬಂಧಿಸಿದ ದೂರುಗಳತ್ತ ಗಮನಹರಿಸಲು ಕೇಂದ್ರದ ಸಂಬಂಧಿತ ಸಚಿವಾಲಯದಲ್ಲಿ ಅಧಿಕಾರಿಗಳನ್ನು ನಿಯೋಜಿಸಲು ಕೇಂದ್ರಕ್ಕೆ ನಿರ್ದೇಶನ ನೀಡಬೇಕೆಂದು ನಾಗೇಶ್ವರ್‌ ರಾವ್ ತಮ್ಮ ಅರ್ಜಿಯಲ್ಲಿ ಕೋರಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT