ಎಂ. ನಾಗೇಶ್ವರ್‌ ರಾವ್‌ 
ದೇಶ

ಟ್ವಿಟರ್ ಬ್ಲೂ-ಟಿಕ್ ಪ್ರಕರಣ: ಬೇಷರತ್ ಕ್ಷಮೆಯಾಚಿಸಿದ ಸಿಬಿಐ ಮಾಜಿ ನಿರ್ದೇಶಕ, ದಂಡ ಮನ್ನಾ ಮಾಡಿದ ಕೋರ್ಟ್

ನಾಗೇಶ್ವರ್‌ ರಾವ್‌ ಅವರು ಏಪ್ರಿಲ್‌ 7 ರಂದು ಇದೇ ರೀತಿಯ ಅರ್ಜಿ ಸಲ್ಲಿಸಿದ್ದರು. ಈ ವಿಚಾರದಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿದ್ದ ಹೈಕೋರ್ಟ್‌ ಟ್ವಿಟರ್‌ ಸಂಸ್ಥೆಯನ್ನು ಸಂಪರ್ಕಿಸುವಂತೆ ಸೂಚಿಸಿತ್ತು. ಆದರೆ, ಈ ವರೆಗೆ ಟ್ವಿಟರ್‌ ಬ್ಲೂ ಟಿಕ್‌ ಸಿಕ್ಕಿಲ್ಲ ಎಂದು ಅವರು ಮರು ಅರ್ಜಿ ಸಲ್ಲಿಸಿದ್ದರು.

ನವದೆಹಲಿ: ತಮ್ಮ ಟ್ವಿಟರ್‌ ಖಾತೆಯ ‘ಬ್ಲೂ ಟಿಕ್‌’ (ಅಧಿಕೃತ ಮುದ್ರೆ) ಮರುಸ್ಥಾಪನೆ ಕೋರಿ ಸಿಬಿಐನ ಮಾಜಿ ನಿರ್ದೇಶಕ ಎಂ. ನಾಗೇಶ್ವರ್‌ ರಾವ್‌ ಅವರು ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದ ಸಂದರ್ಭದಲ್ಲಿ ವಿಧಿಸಿದ್ದ ₹ 25,000 ದಂಡವನ್ನು ಪಾವತಿಸದಂತೆ ದೆಹಲಿ ಹೈಕೋರ್ಟ್‌ ಇಂದು ಮನ್ನಿಸಿದೆ.

ಈ ವೇಳೆ ನಿವೃತ್ತ ಐಪಿಎಸ್ ಅಧಿಕಾರಿ ನ್ಯಾಯಾಲಯಕ್ಕೆ ಬೇಷರತ್ ಕ್ಷಮೆಯಾಚಿಸಿದರು ಮತ್ತು ತಾನು ಪಿಂಚಣಿದಾರನಾಗಿದ್ದು, 'ತನ್ನ ಗುರುತನ್ನು ಸುರಕ್ಷಿತವಾಗಿರಿಸಲು ಕೇಳಿದ್ದೆ' ಎಂದು ಹೇಳಿದರು.

ಅವರಿಗೆ ವಿಧಿಸಿದ್ದ ದಂಡವನ್ನು ಮನ್ನಾ ಮಾಡಿದ ನ್ಯಾಯಮೂರ್ತಿ ಯಶವಂತ್ ವರ್ಮಾ, 'ಅರ್ಜಿದಾರರು ಕೇಳಿರುವ ಬೇಷರತ್ ಕ್ಷಮೆಯನ್ನು ಗಮನದಲ್ಲಿಟ್ಟುಕೊಂಡು, 2022ರ ಮೇ 17ರಂದು ನೀಡಿದ್ದ ಆದೇಶದ ಪ್ರಕಾರ ದಂಡವನ್ನು ಅಳಿಸಲಾಗುತ್ತದೆ' ಎಂದು ಆದೇಶಿಸಿದರು.

ಟ್ವಿಟರ್‌ನಲ್ಲಿನ ಅವರ ಖಾತೆಯು ಬ್ಲೂ ಟಿಕ್ ಅನ್ನು ಹೊಂದಿತ್ತು. ಆದರೆ, ಅದನ್ನು ಮಾರ್ಚ್ 2022 ರಲ್ಲಿ ತೆಗೆದುಹಾಕಲಾಗಿದೆ ಎಂದು ನಾಗೇಶ್ವರ್‌ ರಾವ್‌ ತಮ್ಮ ಅರ್ಜಿಯಲ್ಲಿ ಹೇಳಿದ್ದರು. ಈ ಅರ್ಜಿಯನ್ನು ಮೇ ತಿಂಗಳಲ್ಲಿ ನ್ಯಾಯಾಲಯ ವಜಾಗೊಳಿಸಿತ್ತು.

ನಾಗೇಶ್ವರ್‌ ರಾವ್‌ ಅವರು ಏಪ್ರಿಲ್‌ 7 ರಂದು ಇದೇ ರೀತಿಯ ಅರ್ಜಿ ಸಲ್ಲಿಸಿದ್ದರು. ಈ ವಿಚಾರದಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿದ್ದ ಹೈಕೋರ್ಟ್‌ ಟ್ವಿಟರ್‌ ಸಂಸ್ಥೆಯನ್ನು ಸಂಪರ್ಕಿಸುವಂತೆ ಸೂಚಿಸಿತ್ತು. ಆದರೆ, ಈ ವರೆಗೆ ಟ್ವಿಟರ್‌ ಬ್ಲೂ ಟಿಕ್‌ ಸಿಕ್ಕಿಲ್ಲ ಎಂದು ಅವರು ಮರು ಅರ್ಜಿ ಸಲ್ಲಿಸಿದ್ದರು.

ಟ್ವಿಟರ್, ಫೇಸ್‌ಬುಕ್‌, ಇನ್‌ಸ್ಟಾಗ್ರಾಮ್ ಮುಂತಾದ ಸಾಮಾಜಿಕ ಮಾಧ್ಯಮಗಳ ಬಳಕೆದಾರರ ಕುಂದುಕೊರತೆಗಳು ಅಥವಾ ಬ್ಲೂಟಿಕ್‌ಗೆ ಸಂಬಂಧಿಸಿದ ದೂರುಗಳತ್ತ ಗಮನಹರಿಸಲು ಕೇಂದ್ರದ ಸಂಬಂಧಿತ ಸಚಿವಾಲಯದಲ್ಲಿ ಅಧಿಕಾರಿಗಳನ್ನು ನಿಯೋಜಿಸಲು ಕೇಂದ್ರಕ್ಕೆ ನಿರ್ದೇಶನ ನೀಡಬೇಕೆಂದು ನಾಗೇಶ್ವರ್‌ ರಾವ್ ತಮ್ಮ ಅರ್ಜಿಯಲ್ಲಿ ಕೋರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್​​ಗೆ ED ಶಾಕ್​: ಮನೆ, ಕಚೇರಿ ಸೇರಿದಂತೆ 13ಕ್ಕೂ ಹೆಚ್ಚು ಕಡೆ ದಾಳಿ

Toxic: ಟಾಕ್ಸಿಕ್ ಬಿಡುಗಡೆಗೂ ಮುನ್ನವೇ ತಿರುಪತಿ ತಿಮ್ಮಪ್ಪನಿಗೆ ಮುಡಿ ಕೊಟ್ರಾ ನಯನತಾರಾ? ಫೋಟೋ ವೈರಲ್!

ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾದ 'ಮಂಕಿಮ್ಯಾನ್'; ಜ್ಯೋತಿರಾಜ್ ಕೈ ಹಿಡಿಯುತ್ತಿರುವ ಯುವತಿ ಯಾರು ಗೊತ್ತಾ?

‘Dimagi Naxal’ ವಿವಾದ: ‘ಕಾಂಗ್ರೆಸ್‌ ಮಾವೋವಾದಿ ಪಕ್ಷವಾಗಿ ಬದಲಾಗುತ್ತಿದೆ’: ಕಿರಣ್‌ ರಿಜಿಜು ವಾಗ್ದಾಳಿ

‘ಅಲ್ಲಿ ಪ್ರತಿ ಮತದಾರನಿಗೂ photo ID’ಯಿದೆ: ಭಾರತದ ಚುನಾವಣಾ ವ್ಯವಸ್ಥೆ ಕೊಂಡಾಡಿದ ಟ್ರಂಪ್, ಅಮೆರಿಕಾ ಮತದಾನ ವ್ಯವಸ್ಥೆ ಬದಲಾವಣೆಗೆ ಪಟ್ಟು, SAVE America Act ಜಾರಿಗೆ ಆಗ್ರಹ..!