ಇಂಡಿಯಾ ಗೇಟ್‌ನಲ್ಲಿ ನೇತಾಜಿ ಪ್ರತಿಮೆ ಅನಾವರಣ 
ದೇಶ

ಇಂಡಿಯಾ ಗೇಟ್‌ನಲ್ಲಿ ನೇತಾಜಿ ಪ್ರತಿಮೆ ಅನಾವರಣಗೊಳಿಸಿ, ಕರ್ತವ್ಯ ಪಥ್ ಉದ್ಘಾಟಿಸಿದ ಪ್ರಧಾನಿ ಮೋದಿ 

ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಇಂಡಿಯಾ ಗೇಟ್‌ನಲ್ಲಿ ಸ್ಥಾಪಿಸಲಾದ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 28 ಅಡಿ ಎತ್ತರದ ಪ್ರತಿಮೆಯನ್ನು ಅನಾವರಣಗೊಳಿಸಿದರು.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಇಂಡಿಯಾ ಗೇಟ್‌ನಲ್ಲಿ ಸ್ಥಾಪಿಸಲಾದ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 28 ಅಡಿ ಎತ್ತರದ ಪ್ರತಿಮೆಯನ್ನು ಅನಾವರಣಗೊಳಿಸಿದರು.

ಈ ಪ್ರತಿಮೆಯು ಕೇಂದ್ರ ಸರ್ಕಾರದ 13,450-ಕೋಟಿ ರೂಪಾಯಿ ಮೌಲ್ಯದ ಸೆಂಟ್ರಲ್ ವಿಸ್ತಾ ಯೋಜನೆಯ ಭಾಗವಾಗಿದೆ. ಇದು ಹೊಸ ಸಂಸತ್ತಿನ ಕಟ್ಟಡ, ಹೊಸ ಕಚೇರಿ ಮತ್ತು ಪ್ರಧಾನಿ ಹಾಗೂ ಉಪ ರಾಷ್ಟ್ರಪತಿಗಳ ನಿವಾಸ, ಹೊಸ ಸಚಿವಾಲಯದ ಕಟ್ಟಡಗಳನ್ನು ಹೊಂದಿರುತ್ತದೆ.

ನೇತಾಜಿ ಅವರ ಪ್ರತಿಮೆಯನ್ನು 280 ಮೆಟ್ರಿಕ್ ಟನ್ ತೂಕದ ಬೃಹತ್ ಗ್ರಾನೈಟ್ ಏಕಶಿಲೆಯ ಮೇಲೆ ಕೆತ್ತಲಾಗಿದೆ.

ಬಳಿಕ ಪ್ರಧಾನಿ ಮೋದಿ ಅವರು ದೆಹಲಿಯ ಹೃದಯಭಾಗದಲ್ಲಿರುವ ಇಂಡಿಯಾ ಗೇಟ್ ಬಳಿಯ ಕರ್ತವ್ಯ ಪಥ್ ಮಾರ್ಗವನ್ನು ಉದ್ಘಾಟಿಸಿದರು. ಕೇಂದ್ರ ಸರ್ಕಾರ ರಾಜ್ ಪಥ್ ಮತ್ತು ಸೆಂಟ್ರಲ್ ವಿಸ್ತಾ ಲಾನ್ಸ್ ಅನ್ನು ಕರ್ತವ್ಯ ಪಥ್ ಎಂದು ಮರುನಾಮಕರಣ ಮಾಡಿದೆ.

ಕೇಂದ್ರ ಸರ್ಕಾರ ರಾಜ್ ಪಥ್ ಮಾರ್ಗವನ್ನು ಸೆಂಟ್ರಲ್ ವಿಸ್ತಾ ಲಾನ್ಸ್ ಯೋಜನೆ ಅಡಿ ಅಭಿವೃದ್ಧಿಗೊಳಿಸಿ ಅದಕ್ಕೆ ಕರ್ತವ್ಯ ಪಥ್ ಎಂದು ಮರುನಾಮಕರಣ ಮಾಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT