ಅಮಿತ್ ಶಾ 
ದೇಶ

ಕೇಂದ್ರ ಗೃಹ ಸಚಿವ ಅಮಿತ್ ಶಾ ಮುಂಬೈ ಭೇಟಿ ವೇಳೆ ಭದ್ರತಾ ಲೋಪ, ಆಂಧ್ರ ಪ್ರದೇಶದ ಅಧಿಕಾರಿ ಬಂಧನ!

ಮುಂಬೈಗೆ ಭೇಟಿ ನೀಡಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಭದ್ರತೆಯಲ್ಲಿ ಗೃಹ ಸಚಿವಾಲಯದ ಅಧಿಕಾರಿಯಂತೆ ನಟಿಸಿದ ವ್ಯಕ್ತಿಯೊಬ್ಬ ಶಾ ಅವರ ಹತ್ತಿರ ಬಂದು ನಿರ್ಬಂಧಿತ ಪ್ರದೇಶಗಳಲ್ಲಿ ಮುಕ್ತವಾಗಿ ಸುತ್ತಾಡಿದ ನಂತರ ಸಿಕ್ಕಿಬಿದ್ದಿದ್ದಾನೆ.

ಮುಂಬೈ: ಮುಂಬೈಗೆ ಭೇಟಿ ನೀಡಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಭದ್ರತೆಯಲ್ಲಿ ಗೃಹ ಸಚಿವಾಲಯದ ಅಧಿಕಾರಿಯಂತೆ ನಟಿಸಿದ ವ್ಯಕ್ತಿಯೊಬ್ಬ ಶಾ ಅವರ ಹತ್ತಿರ ಬಂದು ನಿರ್ಬಂಧಿತ ಪ್ರದೇಶಗಳಲ್ಲಿ ಮುಕ್ತವಾಗಿ ಸುತ್ತಾಡಿದ ನಂತರ ಸಿಕ್ಕಿಬಿದ್ದಿದ್ದಾನೆ.

ಅಮಿತ್ ಶಾ ಅವರು ತಮ್ಮ ಎರಡು ದಿನಗಳ ಭೇಟಿಯನ್ನು ಮಂಗಳವಾರ ಕೊನೆಗೊಳಿಸಿದರು ಆದರೆ ಘಟನೆಯ ವರದಿಗಳು ಇಂದು ಹೊರಬಿದ್ದಿವೆ.

ಬಂಧಿತ ವ್ಯಕ್ತಿಯನ್ನು ಆಂಧ್ರ ಪ್ರದೇಶದ ಸಂಸದರೊಬ್ಬರ ಆಪ್ತ ಕಾರ್ಯದರ್ಶಿ ಹೇಮಂತ್ ಪವಾರ್ ಎಂದು ಹೇಳಲಾಗುತ್ತಿದೆ. ಅವರು ಗೃಹ ಸಚಿವಾಲಯದ ಐ-ಕಾರ್ಡ್ ಧರಿಸಿ ಅಮಿತ್ ಶಾ ಅವರ ಸುತ್ತಲೂ ಗಂಟೆಗಟ್ಟಲೆ ಸುಳಿದಾಡಿದ್ದರು.

ಭದ್ರತಾ ವ್ಯವಸ್ಥೆಗಳನ್ನು ನೋಡಿಕೊಳ್ಳುವ ಅಧಿಕಾರಿಯಂತೆ ಪೋಸ್ ನೀಡಿದ್ದರು. ಅಮಿತ್ ಶಾ ಭಾಗವಹಿಸಿದ ಎರಡು ಕಾರ್ಯಕ್ರಮಗಳಲ್ಲಿದ್ದರು ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಹಾಗೂ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರ ಮನೆಗಳ ಹೊರಗೂ ಕೂಡ ಕಾಣಿಸಿಕೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಅನುಮಾನಗೊಂಡ ಗೃಹ ಸಚಿವಾಲಯದ ಅಧಿಕಾರಿಯೊಬ್ಬರು ಮುಂಬೈ ಪೊಲೀಸರಿಗೆ ಮಾಹಿತಿ ನೀಡಿದ್ದು, ಅವರು ಪವಾರ್ ಅವರನ್ನು ಪ್ರಶ್ನಿಸಿದ್ದಾರೆ. ಬಳಿಕ ಗೃಹ ಸಚಿವರ ಭದ್ರತಾ ತಂಡದ ಪಟ್ಟಿಯಲ್ಲಿ ಅವರ ಹೆಸರಿಲ್ಲ ಎಂಬುದು ಪೊಲೀಸರಿಗೂ ತಿಳಿದಿದೆ. ಕೂಡಲೇ ಪವಾರ್ ಅವರನ್ನು ಬಂಧಿಸಲಾಗಿದೆ. ಸದ್ಯ ಅವರನ್ನು ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.

ಉದ್ಧವ್ ಠಾಕ್ರೆ ಅವರ ನೇತೃತ್ವದ ಸರ್ಕಾರವನ್ನು ಬೀಳಿಸಿ ಬಿಜೆಪಿಯೊಂದಿಗೆ ಮೈತ್ರಿ ಸರ್ಕಾರ ರಚಿಸಿಕೊಂಡು ಜುಲೈ 30 ರಂದು ಏಕನಾಥ್ ಶಿಂಧೆ ಮಹಾರಾಷ್ಟ್ರ ಮುಖ್ಯಮಂತ್ರಿಯಾದ ನಂತರ ಅಮಿತ್ ಶಾ ಇದೇ ಮೊದಲ ಬಾರಿಗೆ ಮುಂಬೈಗೆ ಭೇಟಿ ನೀಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel