ಜೆ.ಪಿ ನಡ್ಡಾ 
ದೇಶ

ಸಿಎಂ, ಕೇಂದ್ರ ಸಚಿವ ಸ್ಥಾನದಿಂದ ಕೈಬಿಟ್ಟವರಿಗೆ ಪಕ್ಷದ ಜವಾಬ್ದಾರಿ ನೀಡಿದ ಬಿಜೆಪಿ

ರಾಜ್ಯ ವಿಧಾನಸಭೆ ಚುನಾವಣೆಗಳು ಮತ್ತು 2024 ರ ಲೋಕಸಭೆ ಚುನಾವಣೆಯ ಮೇಲೆ ಕೇಂದ್ರೀಕರಿಸಿದ ಬಿಜೆಪಿ ಶುಕ್ರವಾರ ಮುಖ್ಯಮಂತ್ರಿ ಸ್ಥಾನ ಮತ್ತು ಕೇಂದ್ರ ಸಚಿವ ಸ್ಥಾನದಿಂದ ವಜಾಗೊಂಡ ನಾಯಕರಿಗೆ ಹೊಸ ಜವಾಬ್ದಾರಿಗಳನ್ನು

ನವದೆಹಲಿ: ರಾಜ್ಯ ವಿಧಾನಸಭೆ ಚುನಾವಣೆಗಳು ಮತ್ತು 2024 ರ ಲೋಕಸಭೆ ಚುನಾವಣೆಯ ಮೇಲೆ ಕೇಂದ್ರೀಕರಿಸಿದ ಬಿಜೆಪಿ ಶುಕ್ರವಾರ ಮುಖ್ಯಮಂತ್ರಿ ಸ್ಥಾನ ಮತ್ತು ಕೇಂದ್ರ ಸಚಿವ ಸ್ಥಾನದಿಂದ ವಜಾಗೊಂಡ ನಾಯಕರಿಗೆ ಹೊಸ ಜವಾಬ್ದಾರಿಗಳನ್ನು ಪ್ರಕಟಿಸಿದೆ. 

ಗುಜರಾತ್‌ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ, ತ್ರಿಪುರಾ ಮಾಜಿ ಮುಖ್ಯಮಂತ್ರಿ ಬಿಪ್ಲಬ್ ಕುಮಾರ್ ದೇಬ್ ಮತ್ತು ಮಾಜಿ ಕೇಂದ್ರ ಸಚಿವರಾದ ಪ್ರಕಾಶ್ ಜಾವಡೇಕರ್ ಹಾಗೂ ಮಹೇಶ್ ಶರ್ಮಾ ಅವರಿಗೆ ರಾಜ್ಯಗಳ ಉಸ್ತುವಾರಿ ನೀಡಲಾಗಿದೆ.

ವಿಜಯ್ ರೂಪಾನಿ ಅವರಿಗೆ ಪಂಜಾಬ್ ಉಸ್ತುವಾರಿ ನೀಡಲಾಗಿದ್ದು, ಬಿಪ್ಲಬ್ ದೇಬ್ ಅವರಿಗೆ ಹರಿಯಾಣದ ಉಸ್ತುವಾರಿ, ಪ್ರಕಾಶ್ ಜಾವಡೇಕರ್ ಅವರಿಗೆ ಕೇರಳ ಉಸ್ತುವಾರಿ ಜವಾಬ್ದಾರಿ ನೀಡಲಾಗಿದೆ. ಈ ಹಿಂದೆ ಹರಿಯಾಣದ ಉಸ್ತುವಾರಿ ವಹಿಸಿಸಿಕೊಂಡಿದ್ದ ಪಕ್ಷದ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಅವರಿಗೆ ಈಗ ಬಿಹಾರ ಜವಾಬ್ದಾರಿ ನೀಡಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ಆಪ್ತ ಎಂದು ಪರಿಗಣಿಸಲಾದ ಹಿರಿಯ ನಾಯಕ ಓಂ ಮಾಥುರ್ ಅವರ ಮೇಲೆ ಬಿಜೆಪಿ ನಾಯಕತ್ವದ ನಂಬಿಕೆ ಹಾಗೇ ಉಳಿದಿದೆ. ಇತ್ತೀಚೆಗೆ ಪ್ರಬಲ ಕೇಂದ್ರ ಚುನಾವಣಾ ಸಮಿತಿಗೆ ನೇಮಕಗೊಂಡಿರುವ ಮಾಥುರ್ ಅವರು ಮುಂದಿನ ವರ್ಷ ಚುನಾವಣೆ ನಡೆಯಲಿರುವ ಛತ್ತೀಸ್‌ಗಢದ ಉಸ್ತುವಾರಿ ವಹಿಸಿಕೊಳ್ಳಲಿದ್ದಾರೆ.

ಬಿಹಾರದ ಮಾಜಿ ಸಚಿವ ಮಂಗಲ್ ಪಾಂಡೆ ಅವರಿಗೆ ಪಶ್ಚಿಮ ಬಂಗಾಳದ ಉಸ್ತುವಾರಿ ನೀಡಲಾಗಿದೆ. 

ರಾಜಸ್ಥಾನದಲ್ಲಿ ಅರುಣ್ ಸಿಂಗ್ ಮತ್ತು ಮಧ್ಯಪ್ರದೇಶದಲ್ಲಿ ಮುರಳೀಧರ್ ರಾವ್ ಅವರಂತಹ ಕೆಲವು ಉಸ್ತುವಾರಿಗಳನ್ನು ಉಳಿಸಿಕೊಳ್ಳಲಾಗಿದೆ. ಲಕ್ಷ್ಮೀಕಾಂತ್ ವಾಜಪೇಯಿ ಅವರು ಜಾರ್ಖಂಡ್ ಉಸ್ತುವಾರಿ ವಹಿಸಿಕೊಳ್ಳಲಿದ್ದಾರೆ. ತ್ರಿಪುರವನ್ನು ಮಹೇಶ್ ಶರ್ಮಾ ನೋಡಿಕೊಳ್ಳಲಿದ್ದಾರೆ. ಬಿಜೆಪಿಯ ಪ್ರಮುಖ ನಾಯಕ ಸಂಬಿತ್ ಪಾತ್ರ ಅವರು ಈಶಾನ್ಯ ರಾಜ್ಯಗಳ ಸಂಯೋಜಕರಾಗಿರುತ್ತಾರೆ. ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ರಿತುರಾಜ್ ಸಿನ್ಹಾ ಜಂಟಿ ಸಂಯೋಜಕರಾಗಿರುತ್ತಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel