ಗೋವಾ ಕರ್ಲೀಸ್ ರೆಸ್ಟೋರೆಂಟ್ 
ದೇಶ

ಸೋನಾಲಿ ಫೋಗಟ್ ಸಾವು: 'ಕರ್ಲೀಸ್' ರೆಸ್ಟೋರೆಂಟ್ ನೆಲಸಮ ಪ್ರಕ್ರಿಯೆಗೆ 'ಸುಪ್ರೀಂ' ತಡೆ

ಹರ್ಯಾಣ ಬಿಜೆಪಿ ನಾಯಕಿ ಸೋನಾಲಿ ಫೋಗಟ್ ಸಾವಿನ ನಂತರ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದ ಗೋವಾದ 'ಕರ್ಲೀಸ್' ರೆಸ್ಟೋರೆಂಟ್ ನ ತೆರವು ಕಾರ್ಯಾಚರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ತಡೆ ನೀಡಿದೆ.

ನವದೆಹಲಿ: ಹರ್ಯಾಣ ಬಿಜೆಪಿ ನಾಯಕಿ ಸೋನಾಲಿ ಫೋಗಟ್ ಸಾವಿನ ನಂತರ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದ ಗೋವಾದ 'ಕರ್ಲೀಸ್' ರೆಸ್ಟೋರೆಂಟ್ ನ ತೆರವು ಕಾರ್ಯಾಚರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ತಡೆ ನೀಡಿದೆ.

ಗೋವಾ ಸರ್ಕಾರ ಆರಂಭಿಸಿದ್ದ ತೆರವು ಕಾರ್ಯಾಚರಣೆಗೆ ಸುಪ್ರೀಂ ಕೋರ್ಟ್ ತಾತ್ಕಾಲಿಕ ತಡೆ ನೀಡಿದ್ದು, ಮಾತ್ರವಲ್ಲದೇ ವಿವಾದ ಇತ್ಯರ್ಥವಾಗುವರೆಗೂ ವಿವಾದಿತ ಜಾಗದಲ್ಲಿ ಯಾವುದೇ ರೀತಿಯ ವ್ಯವಹಾರ ನಡೆಸದಂತೆ ಆದೇಶಿಸಿ ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 16ಕ್ಕೆ ಮುಂದೂಡಿದೆ. 

ಹಸಿರು ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ರೆಸ್ಟೋರೆಂಟ್ ಅನ್ನು ಕೆಡವಲು ಆದೇಶಿಸಿದ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಅಥವಾ ಎನ್‌ಜಿಟಿಯಿಂದ ಆದೇಶ ಪಡೆಯಲು ಅದರ ಮಾಲೀಕರು ವಿಫಲವಾದ ನಂತರ ರೆಸ್ಟೋರೆಂಟ್ ಕೆಡವಲು ಗೋವಾ ಸರ್ಕಾರ ಮುಂದಾಗಿತ್ತು. ನಿನ್ನೆಯಿಂದಲೇ ಅದರ ತೆರವು ಕಾರ್ಯಾಚರಣೆ ಆರಂಭವಾಗಿತ್ತು. ಹೀಗಾಗಿ ವಿವಾದಿತ ಜಾಗದಲ್ಲಿ ಭಾರಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. 

ಕರಾವಳಿ ನಿಯಂತ್ರಣ ವಲಯ ಅಥವಾ ಸಿಆರ್‌ಝಡ್ ನಿಯಮಾವಳಿಗಳನ್ನು ಉಲ್ಲಂಘಿಸಿ 'ನೋ ಡೆವಲಪ್‌ಮೆಂಟ್ ಝೋನ್'ನಲ್ಲಿ ನಿರ್ಮಿಸಲಾಗಿದ್ದ ರೆಸ್ಟೋರೆಂಟ್ ಅನ್ನು ಕೆಡವಲು ಜಿಲ್ಲಾಡಳಿತದ ಡೆಮಾಲಿಷನ್ ಸ್ಕ್ವಾಡ್ ಪೊಲೀಸ್ ಸಿಬ್ಬಂದಿಯೊಂದಿಗೆ ಬೆಳಗ್ಗೆ 7.30ರ ಸುಮಾರಿಗೆ ಬೀಚ್‌ಗೆ ಆಗಮಿಸಿ ಕಾರ್ಯಾಚರಣೆ ಆರಂಭಿಸಿತು.

ಗೋವಾದ ಪ್ರಸಿದ್ಧ ಅಂಜುನಾ ಬೀಚ್‌ನಲ್ಲಿರುವ ಇದೇ ರೆಸ್ಟೋರೆಂಟ್ ನಲ್ಲಿ, ಬಿಜೆಪಿ ನಾಯಕಿ ಸೋನಾಲಿ ಫೋಗಟ್ ಸಾಯುವ ಕೆಲವೇ ಗಂಟೆಗಳ ಮೊದಲು ಅಲ್ಲಿ ಪಾರ್ಟಿ ಮಾಡಿದ್ದರು. ಈ ಕುರಿತ ವಿಡಿಯೋಗಳು ವ್ಯಾಪಕ ವೈರಲ್ ಆಗಿದ್ದವು.  ಪ್ರಕರಣದಲ್ಲಿ ಬಂಧಿತರಾದ ನಾಲ್ವರಲ್ಲಿ ಅದರ ಮಾಲೀಕ ಎಡ್ವಿನ್ ನ್ಯೂನ್ಸ್ ಕೂಡ ಸೇರಿದ್ದಾರೆ. ಬಳಿಕ ಅವರಿಗೆ ಜಾಮೀನು ನೀಡಲಾಗಿತ್ತು. ಪೊಲೀಸರ ಪ್ರಕಾರ, ಸೋನಾಲಿ ಫೋಗಟ್ ಸಾಯುವ ಮೊದಲು ರೆಸ್ಟೋರೆಂಟ್‌ನಲ್ಲಿ ಮಾದಕ ದ್ರವ್ಯ ಸೇವಿಸಿದ್ದರು. ಆಕೆಯ ಸಾವಿಗೆ ಗಂಟೆಗಳ ಮೊದಲು ಕರ್ಲೀಸ್ ರೆಸ್ಟೊರೆಂಟ್‌ನಲ್ಲಿ ಆಕೆಯ ಸಹಚರರು ಮನರಂಜನಾ ಔಷಧ, ಮೆಥಾಂಫೆಟಮೈನ್ ಅಥವಾ 'ಮೆಥ್' ಅನ್ನು ನೀಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. 

ಅವರು ಹೋಟೆಲ್‌ಗೆ ಹೊರಡುವ ಮೊದಲು "ಮಾದಕ ವಸ್ತು" ವನ್ನು ಕುಡಿಯಲು ಒತ್ತಾಯಿಸಲಾಯಿತು ಎಂದು ಅವರು ಹೇಳಿದರು. ಮರುದಿನ ಬೆಳಿಗ್ಗೆ, ಆಗಸ್ಟ್ 23 ರಂದು ಆಕೆಯನ್ನು ಆಸ್ಪತ್ರೆಗೆ ಕರೆತರಲಾಯಿತು. ಆರಂಭದಲ್ಲಿ ಇದು ಹೃದಯಾಘಾತದ ಪ್ರಕರಣವೆಂದು ಕಂಡುಬಂದಿತು, ಆದರೆ ಕುಟುಂಬದ ಒತ್ತಾಯದ ಮೇರೆಗೆ ಮರಣೋತ್ತರ ಪರೀಕ್ಷೆ ನಡೆಸಿದಾಗ ಅದು ಕೊಲೆ ಎಂಬ ಅನುಮಾನ ಮೂಡಿತ್ತು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT