ಪಿಯೂಶ್ ಜೈನ್ ನಿವಾಸದಲ್ಲಿ ಪತ್ತೆಯಾಗಿದ್ದ ಭಾರಿ ನಗದು ಮತ್ತು ಚಿನ್ನಾಭರಣ 
ದೇಶ

ಉತ್ತರ ಪ್ರದೇಶ: ಮನೆಯಲ್ಲಿ ರಾಶಿ ರಾಶಿ ಹಣದ ಕಂತೆ ಪತ್ತೆಯಾಗಿದ್ದ ಸುಗಂಧ ದ್ರವ್ಯ ಉದ್ಯಮಿ ಪಿಯೂಷ್ ಜೈನ್‌ಗೆ ಜಾಮೀನು

ಕಳೆದ ವರ್ಷ ಸುಗಂಧ ದ್ರವ್ಯ ಉದ್ಯಮಿ ಪಿಯೂಷ್ ಜೈನ್ ಅವರ ನಿವಾಸದ ಮೇಲೆ ದಾಳಿ ನಡೆಸಿ ಸುಮಾರು 200 ಕೋಟಿ ರೂಪಾಯಿ ನಗದು ಮತ್ತು 23 ಕೆ.ಜಿ ಚಿನ್ನವನ್ನು ಕೇಂದ್ರದ ತನಿಖಾ ತಂಡಗಳು ವಶಪಡಿಸಿಕೊಂಡಿದ್ದವು. ಈ ಪ್ರಕರಣದಲ್ಲಿ ಎಂಟು ತಿಂಗಳು ಜೈಲಿನಲ್ಲಿದ್ದ ನಂತರ ಉದ್ಯಮಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.

ಕಾನ್ಪುರ: ಕಳೆದ ವರ್ಷ ಸುಗಂಧ ದ್ರವ್ಯ ಉದ್ಯಮಿ ಪಿಯೂಷ್ ಜೈನ್ ಅವರ ನಿವಾಸದ ಮೇಲೆ ದಾಳಿ ನಡೆಸಿ ಸುಮಾರು 200 ಕೋಟಿ ರೂಪಾಯಿ ನಗದು ಮತ್ತು 23 ಕೆ.ಜಿ ಚಿನ್ನವನ್ನು ಕೇಂದ್ರದ ತನಿಖಾ ತಂಡಗಳು ವಶಪಡಿಸಿಕೊಂಡಿದ್ದವು. ಈ ಪ್ರಕರಣದಲ್ಲಿ ಎಂಟು ತಿಂಗಳು ಜೈಲಿನಲ್ಲಿದ್ದ ನಂತರ ಉದ್ಯಮಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಮುನ್ನ ಉದ್ಯಮಿಯನ್ನು ಬಂಧಿಸಿದ್ದು, ಗದ್ದಲಕ್ಕೆ ಕಾರಣವಾಗಿತ್ತು. ಕಾನ್ಪುರ ಮೂಲದ ಸುಗಂಧ ದ್ರವ್ಯ ವ್ಯಾಪಾರಿಯು ಸಮಾಜವಾದಿ ಪಕ್ಷದ (ಎಸ್‌ಪಿ) 'ಸ್ನೇಹಿತ' ಎಂದು ಬಿಜೆಪಿ ಆರೋಪಿಸಿತ್ತು. ಆದರೆ ಜೈನ್ ಬಿಜೆಪಿಗೆ ಸೇರಿದವರು ಎಂದು ವಿರೋಧ ಪಕ್ಷ ಆರೋಪಿಸಿತ್ತು.

ವಿಶೇಷ ನ್ಯಾಯಾಲಯದ ಮುಖ್ಯ ಮ್ಯಾಜಿಸ್ಟ್ರೇಟ್ ಜಾಮೀನು ನೀಡಿ ಹೊರಡಿಸಿದ ಆದೇಶದ ನಂತರ, ಪಿಯೂಷ್ ಜೈನ್ ಅವರನ್ನು ಜೈಲಿನಿಂದ ಬಿಡುಗಡೆ ಮಾಡಲಾಗಿದೆ ಎಂದು ಕಾನ್ಪುರ ಜೈಲು ಅಧೀಕ್ಷಕ ಬಿಧು ದತ್ ಪಾಂಡೆ ಗುರುವಾರ ತಿಳಿಸಿದ್ದಾರೆ.

ಕಳೆದ ವಾರ ಅಲಹಾಬಾದ್ ಹೈಕೋರ್ಟ್ ಜೈನ್ ಅವರ ಜಾಮೀನು ಅರ್ಜಿಯನ್ನು ಅಂಗೀಕರಿಸಿದ ನಂತರ ಜಾಮೀನು ನೀಡಿರುವ ವಿಶೇಷ ಸಿಜೆಎಂ, ಜೈನ್ ಅವರ ಕುಟುಂಬ ಸದಸ್ಯರಿಬ್ಬರು ತಲಾ 10 ಲಕ್ಷ ರೂಪಾಯಿಯ ಶ್ಯೂರಿಟಿ ಸಲ್ಲಿಸುವಂತೆ ಸೂಚಿಸಿದ್ದಾರೆ.

ಡಿಸೆಂಬರ್ 26 ರಂದು ಜೈನ್ ಅವರ ನಿವಾಸದ ಮೇಲೆ ನಡೆದ ದಾಳಿಯಲ್ಲಿ ಜಿಎಸ್‌ಟಿ ಗುಪ್ತಚರ ನಿರ್ದೇಶನಾಲಯ (ಡಿಜಿಜಿಐ) ಭಾರಿ ನಗದು ಮತ್ತು ಇತರ ಬೆಲೆಬಾಳುವ ವಸ್ತುಗಳನ್ನು ವಶಪಡಿಸಿಕೊಂಡಿತ್ತು. ನಂತರ ಜೈನ್ ಅವರನ್ನು ಬಂಧಿಸಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT