ಗಣೇಶ ವಿಸರ್ಜನೆ (ಸಂಗ್ರಹ ಚಿತ್ರ) 
ದೇಶ

ಮಹಾರಾಷ್ಟ್ರ: ಗಣೇಶ ವಿಸರ್ಜನೆ ವೇಳೆ 19 ಮಂದಿ ಸಾವು, ಶಿವಸೇನೆ ಬಣಗಳ ನಡುವೆ ಭುಗಿಲೆದ್ದ ಸಂಘರ್ಷ

ಮಹಾರಾಷ್ಟ್ರದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಎರಡು ಪ್ರತ್ಯೇಕ ಘಟನೆಗಳಲ್ಲಿ 19 ಮಂದಿ ಸಾವನ್ನಪ್ಪಿದ್ದಾರೆ. ಈ ಪೈಕಿ 14 ಮಂದಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ಮುಂಬೈ: ಮಹಾರಾಷ್ಟ್ರದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಎರಡು ಪ್ರತ್ಯೇಕ ಘಟನೆಗಳಲ್ಲಿ 19 ಮಂದಿ ಸಾವನ್ನಪ್ಪಿದ್ದಾರೆ. ಈ ಪೈಕಿ 14 ಮಂದಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
 
ಇನ್ನು ಮತ್ತೊಂದು ಘಟನೆಯಲ್ಲಿ ಶಿವಸೇನೆಯ ಎರಡು ಬಣಗಳು ಕೈ-ಕೈ ಮಿಲಾಯಿಸುವ ಹಂತದ ಸಂಘರ್ಷಕ್ಕೆ ಇಳಿದಿದ್ದವು.  ಆ.31 ರಂದು ಪ್ರಾರಂಭವಾದ ಗಣೇಶ ಹಬ್ಬದ ಉತ್ಸವ ಸೆ.09 ರಂದು ಅಂತ್ಯಗೊಂಡಿತು. ವಾರ್ಧ ಜಿಲ್ಲೆಯಲ್ಲಿ ಮೂವರು ಸಾವಂಗಿಯಲ್ಲಿ ಮುಳುಗಿ ಸಾವನ್ನಪ್ಪಿದರೆ, ಮತ್ತೋರ್ವ ದೇವ್ಲಿಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. 

ಯಾವತ್ಮಲ್ ಜಿಲ್ಲೆಯಲ್ಲಿ ಇಬ್ಬರು ವ್ಯಕ್ತಿಗಳು ಮುಳುಗಿದರೆ, ವಿಸರ್ಜನೆ ವೇಳೆ ಆರತಿ ಮಾಡುತ್ತಿದ್ದಾಗ ಪೆಂಡಾಲ್ ಮೇಲೆ ಬೃಹತ್ ಮರ ಬಿದ್ದು, ಅವಘಡ ನಡೆದಿರುವ ಬಗ್ಗೆಯೂ ವರದಿಯಾಗಿದೆ. ಘಟನೆಯಲ್ಲಿ ರಾಜಶ್ರೀ ಎಂಬ ಮಹಿಳೆಗೆ ತೀವ್ರವಾಗಿ ಗಾಯಗೊಂಡಿದೆ. 

ಇನ್ನು ಅಹ್ಮದ್ ನಗರ ಜಿಲ್ಲೆಯಲ್ಲಿ ಉದ್ಧವ್ ಠಾಕ್ರೆ ಹಾಗೂ ಏಕನಾಥ್ ಶಿಂಧೆ ಬಣದ ಬೆಂಬಲಿಗರ ನಡುವೆ ಘರ್ಷಣೆ ಉಂಟಾಗಿದ್ದು, ಕೈ-ಕೈ ಮಿಲಾಯಿಸುವ ಹಂತಕ್ಕೆ ಹೋಗಿದೆ. ಮೇಯರ್ಸ್ ಬಂಗಲೆಯ ಬಳಿ ಗಣೇಶ ವಿಸರ್ಜನೆ ಮೆರವಣಿಗೆ ಮೇಲೆ ಕಲ್ಲು ತೂರಾಟ ನಡೆದಿದ್ದು ಎರಡು ಗುಂಪುಗಳ ನಡುವೆ ಘರ್ಷಣೆ ಉಂಟಾಗಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT