ಅಸಾದುದ್ದೀನ್ ಓವೈಸಿ 
ದೇಶ

ದೇಶಕ್ಕೆ ದುರ್ಬಲ ಪ್ರಧಾನಿ, ಕಿಚಡಿ ಸರ್ಕಾರದ ಅಗತ್ಯವಿದೆ- ಅಸಾದುದ್ದೀನ್ ಓವೈಸಿ

ಮುಂದಿನ ಲೋಕಸಭಾ ಚುನಾವಣೆ ನಂತರ ದೇಶಕ್ಕೆ ದುರ್ಬಲ ಪ್ರಧಾನಿ ಮತ್ತು ಕಿಚಡಿ ಅಥವಾ ಬಹು ಪಕ್ಷ ಸರ್ಕಾರದ ಅಗತ್ಯವಿದೆ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಶನಿವಾರ ಹೇಳಿದ್ದಾರೆ.

ಅಹಮದಾಬಾದ್: ಮುಂದಿನ ಲೋಕಸಭಾ ಚುನಾವಣೆ ನಂತರ ದೇಶಕ್ಕೆ ದುರ್ಬಲ ಪ್ರಧಾನಿ ಮತ್ತು ಕಿಚಡಿ ಅಥವಾ ಬಹು ಪಕ್ಷ ಸರ್ಕಾರದ ಅಗತ್ಯವಿದೆ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಶನಿವಾರ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಓವೈಸಿ, ಪ್ರಬಲ ಪ್ರಧಾನ ಮಂತ್ರಿ ಕೇವಲ ಪ್ರಬಲ ಜನರಿಗೆ ಮಾತ್ರ ಸಹಾಯ ಮಾಡುತ್ತಾರೆ, ದುರ್ಬಲ ವರ್ಗದವರು ಪ್ರಧಾನಿಯಾದರೆ, ಆ ವರ್ಗದವರಿಗೆ ಅನುಕೂಲವಾಗಲಿದೆ ಎಂದರು.

ಬಿಲ್ಕಿಸ್ ಬಾನೊ ಪ್ರಕರಣದ ಆರೋಪಿಗಳ ಬಿಡುಗಡೆ ವಿಚಾರದಲ್ಲಿ ಮೌನವಾಗಿದ್ದ ಆಮ್ ಆದ್ಮಿ ಪಕ್ಷ ಗುಜರಾತ್ ನಲ್ಲಿನ ಆಡಳಿತಾರೂಢ ಬಿಜೆಪಿ ಪಕ್ಷಕ್ಕಿಂತ ಭಿನ್ನವಾಗಿಲ್ಲ ಎಂದು ವಾಗ್ದಾಳಿ ನಡೆಸಿದರು. ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಎಐಎಂಐಎಂ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆಎಂದು ಅವರು ಮಾಹಿತಿ ನೀಡಿದರು.

ಜವಹರ್ ಲಾಲ್ ನೆಹರು ನಂತರ ಹೆಚ್ಚಿನ ಪ್ರಬಲರಾದ ಪ್ರಧಾನಿ, ನಿರುದ್ಯೋಗ, ಹಣದುಬ್ಬರ, ಚೀನಾದ ಆಕ್ರಮಣ, ಉದ್ಯಮಿಗಳಿಗೆ ಬ್ಯಾಂಕ್ ಸಾಲ ಮನ್ನಾ ಬಗ್ಗೆ ಪ್ರಶ್ನಿಸಿದಾಗ ವ್ಯವಸ್ಥೆಯನ್ನು ದೂರುತ್ತಾರೆ. ಪ್ರಬಲ ಪ್ರಧಾನಿ ಏನು ಅಂತಾ ನೋಡಿದ್ದೇವೆ. ಈಗ ದೇಶಕ್ಕೆ ದುರ್ಬಲ ಪ್ರಧಾನಿ ಅಗತ್ಯವಿದೆ. ಇದರಿಂದ ದುರ್ಬಲ ಜನರಿಗೆ ಅನುಕೂಲವಾಗಲಿದೆ. ಅಂತೆಯೇ ದೇಶಕ್ಕೆ ಬಹು ಪಕ್ಷಗಳ ಕಿಚಡಿ ಸರ್ಕಾರದ ಅಗತ್ಯವಿದೆ. ಇದಕ್ಕಾಗಿ ಮುಂಬರುವ ಚುನಾವಣೆಯಲ್ಲಿ ಪ್ರಯತ್ನಿಸಬೇಕಾಗಿದೆ ಎಂದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

ಶಿವಮೊಗ್ಗ: 10 ಕಿಲೋ ವ್ಯಾಟ್ FM ಟ್ರಾನ್ಸ್ಮಿಟರ್ ಕೇಂದ್ರ ಉದ್ಘಾಟನೆ! ಆಕಾಶವಾಣಿ, ದೂರದರ್ಶನ ಅಭಿವೃದ್ದಿಗೆ 2,500 ಕೋಟಿ ಹಣ ವೆಚ್ಚ- ಡಾ. ಎಲ್ ಮುರುಗನ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

SCROLL FOR NEXT