ರಾಹುಲ್ ಗಾಂಧಿ 
ದೇಶ

'ಯೇಸು ನಿಜವಾದ ದೇವರು' ರಾಹುಲ್ ಭೇಟಿ ವೇಳೆ ಪಾದ್ರಿ ಹೇಳಿಕೆ, ಕಾಂಗ್ರೆಸ್- ಬಿಜೆಪಿ ನಡುವೆ ಮಾತಿನ ಚಕಮಕಿ

ರಾಹುಲ್ ಗಾಂಧಿ ಜೊತೆಗೆ ಕ್ರಿಶ್ಚಿಯನ್ ಪಾದ್ರಿಯೊಬ್ಬರು ಸಂವಾದ ನಡೆಸುತ್ತಿರುವ ವೇಳೆ ಹಿಂದೂ ಶಕ್ತಿ ದೇವತೆ ಬಗ್ಗೆ ಪ್ರಸ್ತಾಪಿಸಿದ ವಿಡಿಯೋವೊಂದನ್ನು ಶನಿವಾರ ಉಲ್ಲೇಖಿಸಿರುವ ಬಿಜೆಪಿ, ಇದು ವಿರೋಧ ಪಕ್ಷದ ಹಿಂದೂ ವಿರೋಧಿ ಮುಖವನ್ನು ತೋರಿಸುತ್ತದೆ ಎಂದು ಆರೋಪಿಸಿದೆ.

ನವದೆಹಲಿ: ರಾಹುಲ್ ಗಾಂಧಿ ಜೊತೆಗೆ ಕ್ರಿಶ್ಚಿಯನ್ ಪಾದ್ರಿಯೊಬ್ಬರು ಸಂವಾದ ನಡೆಸುತ್ತಿರುವ ವೇಳೆ ಹಿಂದೂ ಶಕ್ತಿ ದೇವತೆ ಬಗ್ಗೆ ಪ್ರಸ್ತಾಪಿಸಿದ ವಿಡಿಯೋವೊಂದನ್ನು ಶನಿವಾರ ಉಲ್ಲೇಖಿಸಿರುವ ಬಿಜೆಪಿ, ಇದು ವಿರೋಧ ಪಕ್ಷದ ಹಿಂದೂ ವಿರೋಧಿ ಮುಖವನ್ನು ತೋರಿಸುತ್ತದೆ ಎಂದು ಆರೋಪಿಸಿದೆ.

ಇದಕ್ಕೆ ಕಾಂಗ್ರೆಸ್ ತೀಕ್ಷ್ಣವಾದ ಪ್ರತಿಕ್ರಿಯೆಯನ್ನು ನೀಡಿರುವ ಕಾಂಗ್ರೆಸ್,  ಬಿಜೆಪಿ ತನ್ನ ದ್ವೇಷದ ಕಾರ್ಖಾನೆ  ಮೂಲಕ ಕಿಡಿಗೇಡಿತನವನ್ನು ಹರಡುತ್ತಿದೆ ಎಂದು ಆರೋಪಿಸಿದೆ ಮತ್ತು 'ಭಾರತ್ ಜೋಡೋ ಯಾತ್ರೆ'ಯನ್ನು ಯಶಸ್ವಿಯಾಗಿ ಪ್ರಾರಂಭಿಸಿದ ನಂತರ ಆಡಳಿತ ಪಕ್ಷವು ಹೆಚ್ಚು ಹತಾಶವಾಗಿದೆ ಎಂದು ಟೀಕಿಸಿದೆ. 

ಹಲವಾರು ಬಿಜೆಪಿ ನಾಯಕರು ಹಂಚಿಕೊಂಡಿರುವ ವೀಡಿಯೊದಲ್ಲಿ, ಜಾರ್ಜ್ ಪೊನ್ನಯ್ಯ ಎಂದು ಗುರುತಿಸಲ್ಪಟ್ಟ ಪಾದ್ರಿಯು, ಜೀಸಸ್ ಕ್ರಿಸ್ತ ನಿಜವಾದ ದೇವರು, ಶಕ್ತಿ ದೇವತೆಯಂತೆ ಅಲ್ಲ ಎಂದು ರಾಹುಲ್ ಗಾಂಧಿಗೆ ಹೇಳುವಂತೆ ಕೇಳಿಸುತ್ತದೆ. ಯೇಸುವನ್ನು ದೇವರೆಂದು ಪರಿಗಣಿಸಲಾಗುತ್ತದೋ ಇಲ್ಲವೋ ಎಂಬ ಕಾಂಗ್ರೆಸ್ ಮುಖಂಡರ ಪ್ರಶ್ನೆಗೆ ಅವರು ಪ್ರತಿಕ್ರಿಯಿಸಿದ್ದಾರೆ. 

 'ಭಾರತ್ ಜೋಡೋ ಯಾತ್ರೆ'ಯ ನೈಜತೆಯನ್ನು ಈ ವೀಡಿಯೊ ಬಹಿರಂಗಪಡಿಸಿದೆ ಎಂದು ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ ಹೇಳಿದ್ದಾರೆ. ನವರಾತ್ರಿ ಆರಂಭಕ್ಕೂ ಮುನ್ನ ಶಕ್ತಿ ದೇವತೆಯನ್ನು ಅವಮಾನಿಸಲಾಗಿದೆ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು. ರಾಮನ ಅಸ್ತಿತ್ವವನ್ನು ಕಾಂಗ್ರೆಸ್ ಪಕ್ಷವು ಈ ಹಿಂದೆಯೇ ಪ್ರಶ್ನಿಸಿದ್ದರಿಂದ ಇಂತಹ ಘಟನೆಗಳಲ್ಲಿ ಭಾಗಿಯಾಗಿರುವುದು ಇದೇ ಮೊದಲಲ್ಲ ಎಂದು ಅವರು ಹೇಳಿದರು.

ಚುನಾವಣೆಯ ಸಮಯದಲ್ಲಿ, ಗಾಂಧಿ ದೇವಸ್ಥಾನಗಳಿಗೆ ಹೋಗುವಂತೆ ನಟಿಸುತ್ತಾರೆ ಆದರೆ ಚುನಾವಣೆ ಮುಗಿದ ನಂತರ  ಹಿಂದೂ ವಿರೋಧಿ ಮುಖವು ಮುನ್ನೆಲೆಗೆ ಬರುತ್ತದೆ ಎಂದು ಅವರು ಆರೋಪಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT