ಅಜಿತ್ ಪವಾರ್ 
ದೇಶ

ಎನ್ ಸಿಪಿ ರಾಷ್ಟ್ರೀಯ ಸಮಾವೇಶ ಸಭೆಯಿಂದ ಏಕಾಏಕಿ ಹೊರನಡೆದ ಅಜಿತ್ ಪವಾರ್; ಪಕ್ಷದಲ್ಲಿ ಬಂಡಾಯದ ಊಹಾಪೋಹ!

ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ಅಜಿತ್ ಪವಾರ್ ಭಾನುವಾರ ನಡೆದ ಎನ್ ಸಿಪಿ ರಾಷ್ಟ್ರೀಯ ಸಮಾವೇಶದ ಸಭೆಯಿಂದ ಹೊರನಡೆದಿದ್ದು ಪಕ್ಷದಲ್ಲಿ ಎಲ್ಲವೂ ಸರಿ ಇಲ್ಲ ಎಂಬ ಸಂದೇಶ ರವಾನೆಯಾಗಿದೆ. 

ಮುಂಬೈ: ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ಅಜಿತ್ ಪವಾರ್ ಭಾನುವಾರ ನಡೆದ ಎನ್ ಸಿಪಿ ರಾಷ್ಟ್ರೀಯ ಸಮಾವೇಶದ ಸಭೆಯಿಂದ ಹೊರನಡೆದಿದ್ದು ಪಕ್ಷದಲ್ಲಿ ಎಲ್ಲವೂ ಸರಿ ಇಲ್ಲ ಎಂಬ ಸಂದೇಶ ರವಾನೆಯಾಗಿದೆ. 

ಪಕ್ಷದ ಹಿರಿಯ ಮುಖಂಡನಾಗಿದ್ದರೂ ಎನ್ ಸಿಪಿಯ ವರಿಷ್ಠ ಶರದ್ ಪವಾರ್ ಎದುರೇ ಅಜಿತ್ ಪವಾರ್ ಏಕಾ ಏಕಿ ವೇದಿಕೆಯಿಂದ ಹೊರನಡೆದಿರುವುದು ಅಚ್ಚರಿ ಮೂಡಿಸಿದೆ. 

ಪಕ್ಷದ ಮತ್ತೋರ್ವ ನಾಯಕ ಜಯಂತ್ ಪಾಟೀಲ್ ಗೆ ತಮಗೂ ಮುನ್ನ ಮಾತನಾಡುವುದಕ್ಕೆ ಅವಕಾಶ ನೀಡಿದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡು ಅಜಿತ್ ಪವಾರ್ ಈ ರೀತಿ ನಡೆದುಕೊಂಡಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದ್ದು, ಆಂತರಿಕ ಭಿನ್ನಮತದ ಊಹಾಪೋಹಗಳು ಎದುರಾಗಿದೆ.

ಆದರೆ ಈ ಬಳಿಕ ಅಜಿತ್ ಪವಾರ್ ಸ್ಪಷ್ಟನೆ ನೀಡಿದ್ದು, ಅದು ರಾಷ್ಟ್ರೀಯ ಸಮಾವೇಶವಾಗಿದ್ದರಿಂದ ನಾನು ಮಾತನಾಡಲಿಲ್ಲ ಎಂದು ಹೇಳಿದ್ದಾರೆ. ಎನ್ ಸಿಪಿ ಸಂಸದ ಪ್ರಫುಲ್ ಪಟೇಲ್ ಅಜಿತ್ ಪವಾರ್ ಅವರು ಶರದ್ ಪವಾರ್ ಅವರ ಸಮಾರೋಪ ಸಂದೇಶಕ್ಕಿಂತಲೂ ಮುನ್ನ ಮಾತನಾಡಲಿದ್ದಾರೆ ಎಂದು ಘೋಷಿಸಿದ್ದರು. ಆದರೆ ಶರದ್ ಪವಾರ್ ಮಾತನಾಡುವ ವೇಳೆಗೆ ಆಗಲೇ ಅಜಿತ್ ಪವಾರ್ ವೇದಿಕೆಯಿಂದ ನಿರ್ಗಮಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಪ್ರತಿಯೊಬ್ಬರಿಗೂ ಕಾರು, ತಿಂಗಳಿಗೆ ₹1 ಲಕ್ಷ ಭತ್ಯೆ': ರಾಜ್ಯದ 234 ಶಾಸಕರಿಗೆ ಭರ್ಜರಿ ಕೊಡುಗೆ ಘೋಷಿಸಿದ ತಮಿಳುನಾಡು CM ವಿಜಯ್!

'BJPಯವನಾದ ಮಾತ್ರಕ್ಕೆ ಮಾಲೀಕರು ಉಚಿತವಾಗಿ ಮನೆ ನೀಡಲಾರರು'; ನಾನು 'leta' or 'beta' ವರ್ಗಕ್ಕೆ ಸೇರಿದವನಲ್ಲ: ಶೆಹಜಾದ್ ಪೂನಾವಾಲಾ

ರಹಸ್ಯವಾಗಿ ಎಂಗೇಜ್ಮೆಂಟ್ ಮಾಡಿಕೊಂಡ್ರಾ ‘ಧುರಂಧರ್’ ನಟಿ? ಡೈಮಂಡ್ ರಿಂಗ್ ಪ್ರದರ್ಶಿಸಿದ ಆಯೇಷಾ; ಫೋಟೋ ವೈರಲ್

"ವಾವ್!! ನನ್ನ ಮಟ್ಟಿಗೆ ಅವರು ಚೆನ್ನಾಗಿ ವಿವರಿಸಿದ್ದಾರೆ": 'ನಾನು ಹೆಮ್ಮೆಯ ಅಂಧಭಕ್ತೆ' ಎಂದ ಬಾಲಿವುಡ್ ನಟಿ ಇಶಾ ಕೊಪ್ಪಿಕರ್'ಗೆ ಕಂಗನಾ ಬೆಂಬಲ

ಬಾಗಲಕೋಟೆ ಬಳಿ ಭೀಕರ ಅಪಘಾತ: ಬೈಕ್‌ಗೆ ಡಿಕ್ಕಿ ಹೊಡೆದು ಖಾಸಗಿ ಬಸ್ ಪಲ್ಟಿ; ಸ್ಥಳದಲ್ಲೇ ಇಬ್ಬರು ಸಾವು