ಅರವಿಂದ್ ಕೇಜ್ರಿವಾಲ್, ಬಿಟಿಪಿಯ ಚೋಟು ವಾಸವಾ 
ದೇಶ

ಗುಜರಾತ್: ಎಎಪಿ ಜೊತೆಗಿನ ಚುನಾವಣಾ ಪೂರ್ವ ಮೈತ್ರಿ ಮುರಿದುಕೊಂಡ ಬಿಟಿಪಿ!

ಚೋಟು ವಾಸವಾ ಅವರ ಭಾರತೀಯ ಟ್ರೈಬಲ್ ಪಾರ್ಟಿ ಆಮ್ ಆದ್ಮಿ ಪಕ್ಷದೊಂದಿಗಿನ ತನ್ನ ನಾಲ್ಕು ತಿಂಗಳ ಚುನಾವಣಾ ಪೂರ್ವ ಮೈತ್ರಿಯನ್ನು ಮುರಿದುಕೊಂಡಿದೆ ಮತ್ತು ಬಿಟಿಪಿಯನ್ನು ಸೋಲಿಸಲು ಭಾರತೀಯ ಜನತಾ ಪಕ್ಷವು ಅರವಿಂದ್ ಕೇಜ್ರಿವಾಲ್ ಅವರನ್ನು ಕಳುಹಿಸಿದೆ ಎಂದು ಆರೋಪಿಸಿದೆ.

ಭರೂಚ್: ಚೋಟು ವಾಸವಾ ಅವರ ಭಾರತೀಯ ಟ್ರೈಬಲ್ ಪಾರ್ಟಿ ಆಮ್ ಆದ್ಮಿ ಪಕ್ಷದೊಂದಿಗಿನ ತನ್ನ ನಾಲ್ಕು ತಿಂಗಳ ಚುನಾವಣಾ ಪೂರ್ವ ಮೈತ್ರಿಯನ್ನು ಮುರಿದುಕೊಂಡಿದೆ ಮತ್ತು ಬಿಟಿಪಿಯನ್ನು ಸೋಲಿಸಲು ಭಾರತೀಯ ಜನತಾ ಪಕ್ಷವು ಅರವಿಂದ್ ಕೇಜ್ರಿವಾಲ್ ಅವರನ್ನು ಕಳುಹಿಸಿದೆ ಎಂದು ಆರೋಪಿಸಿದೆ.

ಚಾಂದೇರಿಯಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಾಸವಾ, ಮೇ ತಿಂಗಳಲ್ಲಿ ರ್‍ಯಾಲಿಯೊಂದರಲ್ಲಿ ಆಮ್ ಆದ್ಮಿ ಪಕ್ಷ ಹಾಗೂ ಬಿಟಿಪಿ ಚುನಾವಣಾ ಪೂರ್ವ ಮೈತ್ರಿಯನ್ನು ಮಾಡಿಕೊಂಡಿದ್ದವು. ಎಎಪಿ ಜೊತೆಗಿನ ಮೈತ್ರಿಯನ್ನು ಕಡಿದುಕೊಂಡಿದ್ದೇವೆ. ನಮ್ಮನ್ನು ಸೋಲಿಸಲು ಬಿಜೆಪಿ ಅರವಿಂದ್ ಕೇಜ್ರಿವಾಲ್ ಅವರನ್ನು ಕಳುಹಿಸಿದೆ. ಚುನಾವಣೆಯಲ್ಲಿ ನೇರವಾಗಿ ಗೆಲ್ಲಲು ಸಾಧ್ಯವಿಲ್ಲ ಎಂಬುದು ಬಿಜೆಪಿ ಮತ್ತು ಅಮಿತ್ ಶಾ ಅವರಿಗೆ ಗೊತ್ತಿದೆ. ಆದ್ದರಿಂದ ಕೇಜ್ರಿವಾಲ್ ಅವರನ್ನು ಕಳುಹಿಸಿದ್ದಾರೆ ಎಂದರು.

ಶಾ ವಿರೋಧಿಗಳನ್ನು ಅಂತ್ಯಗೊಳಿಸುತ್ತಾರೆ ಆದರೆ ಕೇಜ್ರಿವಾಲ್ ವಿಚಾರದಲ್ಲಿ ಹಾಗೆ ಇಲ್ಲ. ಅವರು ಪ್ರತಿವಾರ ಇಲ್ಲಿಗೆ ಬರುತ್ತಾರೆ. ಎರಡು ಅಥವಾ ಮೂರು ದಿನ ಇಲ್ಲಿಯೇ ಉಳಿಯುತ್ತಾರೆಯ ಆದಾಗ್ಯೂ. ಅವರ ವಿರುದ್ದ ಕೇಂದ್ರ ಸರ್ಕಾರ ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂದು ಅವರು ತಿಳಿಸಿದರು. 

182 ಸದಸ್ಯ ಬಲದ ಗುಜರಾತ್ ವಿಧಾನಸಭೆಯಲ್ಲಿ ಬಿಟಿಪಿ ಇಬ್ಬರು ಶಾಸಕರನ್ನು ಹೊಂದಿದೆ. ರಾಜ್ಯದಲ್ಲಿ ಆದಿವಾಸಿಗಳ ನಡುವೆ ಪಕ್ಷಕ್ಕೆ ಹಿಡಿತವಿದೆ. ಎಎಪಿಯೊಂದಿಗೆ ಬಿಟಿಪಿಯನ್ನು ವಿಲೀನಗೊಳಿಸಬೇಕೆಂದು ಕೇಜ್ರಿವಾಲ್ ಬಯಸಿದ್ದರು ಎಂದು ವಾಸವಾ ಆರೋಪಿಸಿದ್ದಾರೆ.

ಮೈತ್ರಿಯ ಸಮಯದಲ್ಲಿ, ಕೇಜ್ರಿವಾಲ್ ಅವರು ನಮ್ಮ ಪಕ್ಷವನ್ನು ಅವರೊಂದಿಗೆ ವಿಲೀನಗೊಳಿಸಬೇಕು ಎಂದು ಒತ್ತಾಯಿಸಿದ್ದರು. ಆದರೆ, ವಿಲೀನ ಸಾಧ್ಯವಿಲ್ಲ ಮತ್ತು ನಾವು ಸ್ವತಂತ್ರ ಪಕ್ಷವಾಗಿ ಉಳಿಯುತ್ತೇವೆ ಎಂದು ನಾನು ಅವರಿಗೆ ಹೇಳಿದ್ದೆ ಎಂದು ಬುಡಕಟ್ಟು ನಾಯಕ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT