ಸಾಂದರ್ಭಿಕ ಚಿತ್ರ 
ದೇಶ

ರಾಜಸ್ಥಾನದಲ್ಲಿ ಭಾರೀ ಮಳೆ: ಸಿಡಿಲಿಗೆ 7 ಮಂದಿ ಬಲಿ, ನಾಲ್ವರಿಗೆ ಗಾಯ

ರಾಜಸ್ಥಾನದ ಜಲಾವರ್ ಮತ್ತು ಉದಯಪುರ ಜಿಲ್ಲೆಗಳಲ್ಲಿ ಸಿಡಿಲು ಬಡಿದು ಏಳು ಜನರು ಸಾವನ್ನಪ್ಪಿದ್ದಾರೆ ಮತ್ತು ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜೈಪುರ: ರಾಜಸ್ಥಾನದ ಜಲಾವರ್ ಮತ್ತು ಉದಯಪುರ ಜಿಲ್ಲೆಗಳಲ್ಲಿ ಸಿಡಿಲು ಬಡಿದು ಏಳು ಜನರು ಸಾವನ್ನಪ್ಪಿದ್ದಾರೆ ಮತ್ತು ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭಾನುವಾರ ಬೆಳಗ್ಗೆಯಿಂದ ಸಂಜೆ 5.30ರವರೆಗೆ ಶ್ರೀಗಂಗಾನಗರದಲ್ಲಿ 34, ಬಾರ್ಮರ್‌ನಲ್ಲಿ 30.6, ದುಗರ್‌ಪುರದಲ್ಲಿ 13, ಬೂಂದಿಯಲ್ಲಿ 11ಮಿಮೀ ಮಳೆಯಾಗಿದೆ ಎಂದು ಹವಾಮಾನ ಇಲಾಖೆ  ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಜಿಲ್ಲೆಯ ಅಸ್ನಾವರ್, ಖಾನ್‌ಪುರ, ಮಂದಾವರ್ ಮತ್ತು ಡಾಂಗಿಪುರದಲ್ಲಿ ಶನಿವಾರ ಸಿಡಿಲು ಬಡಿದ ಸಾವುಗಳು ವರದಿಯಾಗಿವೆ ಎಂದು ಅವರು ತಿಳಿಸಿದ್ದಾರೆ. ಭಾನುವಾರ ಸಂಜೆ ಜಬ್ಲಾ ಗ್ರಾಮದಲ್ಲಿ ಸಿಡಿಲು ಬಡಿದು ಮನೀಶ್, ಮನೀಶಾ ಮತ್ತು ಬಾಲಕಿ ಹಾಕಾ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ ಎಂದು ಉದಯಪುರ ಜಿಲ್ಲೆಯ ತಿಡಿ ಎಸ್‌ಎಚ್‌ಒ ಗೋಪಾಲ್ ಕೃಷ್ಣ ತಿಳಿಸಿದ್ದಾರೆ.

ಹವಾಮಾನ ಇಲಾಖೆಯ ಪ್ರಕಾರ, ಈ ಅವಧಿಯಲ್ಲಿ ಬನ್ಸ್ವಾರದ ಜಗಪುರದಲ್ಲಿ 8 ಸೆಂ.ಮೀ, ಕೋಟಾದ ಸಂಗೋಡ್‌ನಲ್ಲಿ 5 ಸೆಂ.ಮೀ., ಜಲಾವರದ ಅಕ್ಲೇರಾದಲ್ಲಿ 5 ಸೆಂ.ಮೀ. ಡುಂಗರಪುರದ ನಿತುವದಲ್ಲಿ 5 ಸೆಂ.ಮೀ. ಡುಂಗರಪುರದ ವೆಜಾದಲ್ಲಿ 4 ಸೆಂ.ಮೀ ಮಳೆ ದಾಖಲಾಗಿದೆ. ಪ್ರತಾಪಗಢದ ಪೀಪಲ್‌ಖಂಟ್‌ನಲ್ಲಿ 4 ಸೆಂ.ಮೀ. ಮಳೆಯಾಗಿದೆ ಎಂದು ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯದಲ್ಲಿ ಮಳೆ ಅಭಾವ, ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ: 27 ಕೋಟಿ ರೂ. ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಭಾರತದಲ್ಲಿ ಫುಡ್‌ ಕಂಪನಿಗಳ ಲಾಬಿ: ಚಿಪ್ಸ್ ಮತ್ತು ಕೂಲ್ ಡ್ರಿಂಕ್ಸ್ ಮೇಲೆ ‘ರೆಡ್‌ ಅಲರ್ಟ್’ ಪ್ರಸ್ತಾವ ಕೈಬಿಟ್ಟ FSSAI, ಆಗಿದ್ದೇನು?

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!