ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿರುವ ಚಿತ್ರ 
ದೇಶ

ಬಿಹಾರ: ಬೇಗುಸರಾಯ್ ನಲ್ಲಿ ದುಷ್ಕರ್ಮಿಗಳಿಂದ ಮನಬಂದಂತೆ ಗುಂಡಿನ ದಾಳಿ; ಓರ್ವ ಸಾವು, 11 ಮಂದಿಗೆ ಗಾಯ

ಬಿಹಾರದ ಬೇಗುಸರಾಯ್ ಜಿಲ್ಲೆಯಲ್ಲಿ ಮಂಗಳವಾರ ಸಂಜೆ ಸ್ಕೂಟರ್ ನಲ್ಲಿ ಬಂದ ಇಬ್ಬರು ಬಂದೂಕುಧಾರಿಗಳು ಜನನಿಬಿಡ ಪ್ರದೇಶಗಳಲ್ಲಿ ಜನರ ಮೇಲೆ ಮನಬಂದಂತೆ ಗುಂಡಿನ ದಾಳಿ ನಡೆಸಿದ್ದು, ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, 11 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 

ಬೇಗುಸರಾಯ್: ಬಿಹಾರದ ಬೇಗುಸರಾಯ್ ಜಿಲ್ಲೆಯಲ್ಲಿ ಮಂಗಳವಾರ ಸಂಜೆ ಸ್ಕೂಟರ್ ನಲ್ಲಿ ಬಂದ ಇಬ್ಬರು ಬಂದೂಕುಧಾರಿಗಳು ಜನನಿಬಿಡ ಪ್ರದೇಶಗಳಲ್ಲಿ ಜನರ ಮೇಲೆ ಮನಬಂದಂತೆ ಗುಂಡಿನ ದಾಳಿ ನಡೆಸಿದ್ದು, ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, 11 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂದೂಕುಧಾರಿಗಳನ್ನು ಇನ್ನೂ ಗುರುತಿಸಬೇಕಾಗಿದೆ ಎಂದು ಅವರು ಹೇಳಿದರು.

ಸಂಜೆ 5 ಗಂಟೆ ಸುಮಾರಿಗೆ, ಮೋಟಾರ್ ಸೈಕಲ್ ನಲ್ಲಿ ಮಲ್ಹಿಪುರ್ ಚೌಕ್‌ಗೆ  ಬಂದ ಬಂದೂಕುಧಾರಿಗಳು ಜನನಿಬಿಡ ಪ್ರದೇಶದಲ್ಲಿನ ಅಂಗಡಿಗಳನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.ಏನಾಯಿತು ಎಂದು ತಿಳಿಯುವಲ್ಲಿ ಭಯಭೀತರಾದ ಜನರು ಪ್ರಾಣಕ್ಕಾಗಿ ಓಡಲು ಪ್ರಾರಂಭಿಸಿದರು, ಅಂಗಡಿಯವರು ತಮ್ಮ ಅಂಗಡಿಗಳನ್ನು ತೆರೆದು ಓಡಿಹೋದರು. ನಂತರ ಬಂದೂಕುಧಾರಿಗಳು ಬರೌನಿ ಥರ್ಮಲ್ ಚೌಕ್, ಬರೌನಿ, ತೆಘ್ರಾ, ಬಚ್ವಾರಾ ಮತ್ತು ರಾಜೇಂದ್ರ ಸೇತುವೆಗೆ ತೆರಳಿ ಜನರ ಮೇಲೆ ಮನಬಂದಂತೆ ಗುಂಡಿನ ದಾಳಿ ನಡೆಸಿದರು ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯಲ್ಲಿ ಚಂದನ್ ಕುಮಾರ್ ಎಂಬ 30 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದು, 11 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಯೋಗೇಂದ್ರ ಕುಮಾರ್ ಸುದ್ದಿಗಾರರಿಗೆ ತಿಳಿಸಿದ್ದಾರೆ. ಗಾಯಾಳುಗಳಲ್ಲಿ ಕೆಲವರನ್ನು ಬೇಗುಸರಾಯ್‌ನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕೆಲವರನ್ನು ಉತ್ತಮ ಚಿಕಿತ್ಸೆಗಾಗಿ ಪಾಟ್ನಾಗೆ ಕಳುಹಿಸಲಾಗಿದೆ ಎಂದರು. ಜಿಲ್ಲೆಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ಘಟನೆಯ ನಂತರ ಎಲ್ಲಾ ಪ್ರವೇಶ ಕೇಂದ್ರಗಳಲ್ಲಿ ಬ್ಯಾರಿಕೇಡ್ ಹಾಕಲಾಗಿದೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೀದಿ ಜೊತೆಗೆ ಕಾಂಗ್ರೆಸ್ ಗೂ ಶಾಕ್; TMC ಬೆಂಬಲ ಬೆನ್ನಲ್ಲೇ ನಂದಿಗ್ರಾಮ 'ಕೈ' ಅಭ್ಯರ್ಥಿ ಕೊಲೆ ಕೇಸ್`ನಲ್ಲಿ ಅರೆಸ್ಟ್!

ಸಾಕ್ಷ್ಯ ವಿಚಾರಣೆ ವೇಳೆ ದರ್ಶನ್ ಖುದ್ದು ಹಾಜರಾಗಲು ಹೈಕೋರ್ಟ್ ಒಪ್ಪಿಗೆ, ಷರತ್ತು ಅನ್ವಯ!

T20 ಕ್ರಿಕೆಟ್‌ನಲ್ಲಿ ಹೊಸ ವಿಶ್ವ ದಾಖಲೆ; 15,000 ರನ್‌ ಗಡಿ ದಾಟಿದ Jos Buttler; ಪೊಲಾರ್ಡ್ ದಾಖಲೆ ಧ್ವಂಸ!

ChatGPT ತಂದ ಸಾವು: "ಏನಾಗಲ್ಲ, ಈ ಮಿಶ್ರಣ ಸೇವಿಸು" ಎಂದಿದ್ದ OpenAI; ಮಾತು ನಂಬಿದ 19 ವರ್ಷದ ಯುವಕ ಸಾವು; ತಾಯಿಯ ರೋಧನೆ!

Friendship Cup ಜೊತೆಗೇ ಆಫ್ಘನ್ ಅಭಿಮಾನಿಗಳ ಮನ ಗೆದ್ದ ಟೀಂ ಇಂಡಿಯಾ; Sarpanch Saab ಮಾಡಿದ್ದೇನು?