ಸಿಕಂದರಾಬಾದ್ ಅಗ್ನಿ ದುರಂತ 
ದೇಶ

ಸಿಕಂದರಾಬಾದ್ ಅಗ್ನಿ ದುರಂತ: ಹೊಟೆಲ್, ಇ-ಸ್ಕೂಟರ್ ಷೋರೂಂ ಮಾಲೀಕರ ವಿರುದ್ಧ ಎಫ್ಐಆರ್!

ತೆಲಂಗಾಣದ ಸಿಕಂದರಾಬಾದ್ ನಲ್ಲಿ 8 ಜನರ ಸಾವಿಗೆ ಕಾರಣವಾದ ಅಗ್ನಿ ದುರಂತಕ್ಕೆ ಸಂಬಂಧಿಸಿದಂತೆ ಪೊಲೀಸರು ಹೊಟೆಲ್ ಮತ್ತು ಇ-ಸ್ಕೂಟರ್ ಷೋರೂಂ ಮಾಲೀಕರ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.

ಸಿಕಂದರಾಬಾದ್: ತೆಲಂಗಾಣದ ಸಿಕಂದರಾಬಾದ್ ನಲ್ಲಿ 8 ಜನರ ಸಾವಿಗೆ ಕಾರಣವಾದ ಅಗ್ನಿ ದುರಂತಕ್ಕೆ ಸಂಬಂಧಿಸಿದಂತೆ ಪೊಲೀಸರು ಹೊಟೆಲ್ ಮತ್ತು ಇ-ಸ್ಕೂಟರ್ ಷೋರೂಂ ಮಾಲೀಕರ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.

ಸಿಕಂದರಾಬಾದ್‌ನ ರೂಬಿ ಪ್ರೈಡ್ ಎಂಬ ಐಷಾರಾಮಿ ಹೋಟೆಲ್ ಕಟ್ಟಡದ ನೆಲ ಮಹಡಿಯಲ್ಲಿರುವ ಇ-ಬೈಕ್ ಶೋರೂಮ್‌ನಲ್ಲಿ ಸೋಮವಾರ ರಾತ್ರಿ ಸ್ಫೋಟ ಸಂಭವಿಸಿದ ನಂತರ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಈ ವರೆಗೂ 8 ಮಂದಿ ಸಾವನ್ನಪ್ಪಿ ಹಲವರು ಗಾಯಗೊಂಡಿದ್ದರು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಕಂದರಾಬಾದ್ ಪೊಲೀಸರು ರೂಬಿ ಪ್ರೈಡ್ ಹೊಟೆಲ್ ಮತ್ತು ಲಾಡ್ಜ್  ಮತ್ತು ಇ-ಸ್ಕೂಟರ್ ಷೋರೂಂ ಮಾಲೀಕರ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.

ಘಟನೆಯಲ್ಲಿ ಆಂಧ್ರಪ್ರದೇಶ, ದೆಹಲಿ, ಚೆನ್ನೈ, ಬಿಹಾರ  ಸೇರಿದಂತೆ ಹಲವು ರಾಜ್ಯಗಳ ಜನರು ಸಾವನ್ನಪ್ಪಿದ್ದರು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ತೆಲಂಗಾಣ ಸರ್ಕಾರ ತನಿಖೆಗೆ ಆದೇಶಿಸಿತ್ತು. ಇದೀಗ ರೂಬಿ ಪ್ರೈಡ್ ಹೊಟೆಲ್ ಮತ್ತು ಇ-ಸ್ಕೂಟರ್ ಷೋರೂಂ ಮಾಲೀಕರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

ಇ- ಬೈಕ್ ಬ್ಯಾಟರ್ ಅಥವಾ ಜನರೇಟರ್ ಸ್ಫೋಟಗೊಂಡಿರುವ ಸಾಧ್ಯತೆಯಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. 

ಈ ಕುರಿತು ಮಾತನಾಡಿರುವ ತೆಲಂಗಾಣ ಗೃಹ ಸಚಿವ ಮೊಹಮ್ಮದ್ ಮಹಮೂದ್ ಅಲಿ ಅವರು, ಘಟನೆ ತುಂಬಾ ದುರದೃಷ್ಟಕರ. ಅಗ್ನಿಶಾಮಕ ದಳದ ತಂಡಗಳು ಲಾಡ್ಜ್‌ನಿಂದ ಜನರನ್ನು ರಕ್ಷಿಸಲು ಪ್ರಯತ್ನಿಸಿದವು ಆದರೆ ಭಾರೀ ಹೊಗೆಯಿಂದಾಗಿ ಕೆಲವರು ಸಾವನ್ನಪ್ಪಿದ್ದಾರೆ. ಕೆಲವರನ್ನು ಲಾಡ್ಜ್‌ನಿಂದ ರಕ್ಷಿಸಲಾಗಿದೆ. ಘಟನೆ ಹೇಗೆ ಸಂಭವಿಸಿತು ಎಂದು ನಾವು ತನಿಖೆ ನಡೆಸುತ್ತಿದ್ದೇವೆ. ಘಟನೆ ಸಂಬಂಧ ತನಿಖೆಗೆ ಆದೇಶಿಸಲಾಗಿದೆ ಎಂದು ಹೇಳಿದರು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT