ಸಾಂದರ್ಭಿಕ ಚಿತ್ರ 
ದೇಶ

ಉತ್ತರ ಪ್ರದೇಶ: ಐಎಎಸ್ ಅಧಿಕಾರಿ ಸಹಿ ನಕಲಿ ಮಾಡಿ ಸಾಲ ಪಡೆದಿದ್ದ ಬಿಜೆಪಿ ಮುಖಂಡನ ಬಂಧನ

ಉತ್ತರ ಪ್ರದೇಶದ ಪ್ರತಾಪ್‌ಗಢದಲ್ಲಿ ಐಎಎಸ್ ಅಧಿಕಾರಿಯಾಗಿರುವ ತನ್ನ ಸೋದರಳಿಯನ ನಕಲಿ ಸಹಿ ಮಾಡಿ ಬರೋಬ್ಬರಿ 1.62 ಕೋಟಿ ರೂಪಾಯಿ ಸಾಲ ಪಡೆದ ಆರೋಪದ ಮೇಲೆ ಬಿಜೆಪಿ ನಾಯಕರೊಬ್ಬರನ್ನು ಬಂಧಿಸಲಾಗಿದೆ...

ಲಖನೌ: ಉತ್ತರ ಪ್ರದೇಶದ ಪ್ರತಾಪ್‌ಗಢದಲ್ಲಿ ಐಎಎಸ್ ಅಧಿಕಾರಿಯಾಗಿರುವ ತನ್ನ ಸೋದರಳಿಯನ ನಕಲಿ ಸಹಿ ಮಾಡಿ ಬರೋಬ್ಬರಿ 1.62 ಕೋಟಿ ರೂಪಾಯಿ ಸಾಲ ಪಡೆದ ಆರೋಪದ ಮೇಲೆ ಬಿಜೆಪಿ ನಾಯಕರೊಬ್ಬರನ್ನು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.

ಆರೋಪಿ ಬಿಜೆಪಿ ನಾಯಕನನ್ನು ರವಿ ಪ್ರತಾಪ್ ಸಿಂಗ್ ಎಂದು ಗುರುತಿಸಲಾಗಿದ್ದು, ಸೋಮವಾರ ಸಂಜೆ ಬಂಧಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಸತ್ಪಾಲ್ ಅಂಟಿಲ್ ಹೇಳಿದ್ದಾರೆ.

ಐಎಎಸ್ ಅಧಿಕಾರಿ ಅಭಯ್ ಸಿಂಗ್ ಅವರು 2020ರಲ್ಲಿ ತನ್ನ ಸೋದರಮಾವ ರವಿ ಪ್ರತಾಪ್ ಸಿಂಗ್ ವಿರುದ್ಧ ವಂಚನೆ ದೂರು ದಾಖಲಿಸಿದ್ದರು.

ತನ್ನ ಸೋದರಮಾವ ತನ್ನ ಸಹಿಯನ್ನು ನಕಲಿ ಮಾಡಿ ದಿ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್‌ನಿಂದ ಸಾಲ ಪಡೆದಿದ್ದಾರೆ ಎಂದು ಅಭಯ್ ಸಿಂಗ್ ದೂರಿನಲ್ಲಿ ಆರೋಪಿಸಿದ್ದರು.

ತನಿಖೆಯ ಸಂದರ್ಭದಲ್ಲಿ ಈ ಸಹಿಗಳು ನಕಲಿ ಎಂದು ಕಂಡುಬಂದಿದೆ ಎಂದು ಸಲ್ಪಾಲ್ ಅಂಟಿಲ್ ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT