ಠಾಕ್ರೆ ಬೆಂಬಲಿಗರಿಂದ ಗೋಮೂತ್ರ ಸಿಂಪಡಣೆ 
ದೇಶ

ಸೇನೆ Vs ಸೇನೆ: ಮಹಾ ಸಿಎಂ ಶಿಂಧೆ ಕಾರ್ಯಕ್ರಮದ ನಂತರ ಠಾಕ್ರೆ ಬೆಂಬಲಿಗರಿಂದ ಗೋಮೂತ್ರ ಸಿಂಪಡಣೆ

ಮಹಾರಾಷ್ಟ್ರದಲ್ಲಿ ಶಿವಸೇನೆ ವರ್ಸಸ್ ಶವಸೇನೆ ಸಮರ ದಿನೇ ದಿನೇ ಜೋರಾಗ್ತಿದೆ.  ಶಿವಸೇನೆಯಲ್ಲಿನ ಬಣ ರಾಜಕೀಯ ಘರ್ಷಣೆಯ ರೂಪ ಪಡೆಯುತ್ತಿದೆ. ಮಹಾರಾಷ್ಟ್ರ ಮಾಜಿ ಸಿಎಂ ಉದ್ಧವ್ ಠಾಕ್ರೆ ಬೆಂಬಲಿಗರು ಮಂಗಳವಾರ ಮಹಾರಾಷ್ಟ್ರದ...

ಮುಂಬೈ: ಮಹಾರಾಷ್ಟ್ರದಲ್ಲಿ ಶಿವಸೇನೆ ವರ್ಸಸ್ ಶವಸೇನೆ ಸಮರ ದಿನೇ ದಿನೇ ಜೋರಾಗ್ತಿದೆ.  ಶಿವಸೇನೆಯಲ್ಲಿನ ಬಣ ರಾಜಕೀಯ ಘರ್ಷಣೆಯ ರೂಪ ಪಡೆಯುತ್ತಿದೆ. ಮಹಾರಾಷ್ಟ್ರ ಮಾಜಿ ಸಿಎಂ ಉದ್ಧವ್ ಠಾಕ್ರೆ ಬೆಂಬಲಿಗರು ಮಂಗಳವಾರ ಮಹಾರಾಷ್ಟ್ರದ ಔರಂಗಾಬಾದ್‌ನಲ್ಲಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಕಾರ್ಯಕ್ರಮದ ಆ ಸ್ಥಳದಲ್ಲಿ ಗೋಮೂತ್ರ ಸಿಂಪಡಿಸಿ ಪ್ರದಕ್ಷಿಣೆ ಹಾಕಿದ್ದಾರೆ.

ಬಿಡ್ಕಿನ್ ನಲ್ಲಿ ನಡೆದಿರೋ ಈ ಘಟನೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ನಿಂಬೆ ಎಲೆಗಳನ್ನು ಬಳಸಿ ಪುರುಷರ ಗುಂಪು ಗೋಮೂತ್ರ ಸಿಂಪಡಿಸಿದೆ.  “50 ಖೋಖೆ, ಏಕ್ ದಮ್ ಓಕೆ” ಎಂಬ ಘೋಷಣೆಯನ್ನು ಕೂಗಿದ ಅವರು ಶಿಂಧೆ ಪಾಳಯದಲ್ಲಿರುವ ಶಾಸಕರು ತಲಾ  50 ಕೋಟಿ ರೂ. ಆಫರ್ ಪಡೆದ ನಂತರ ಪಕ್ಷದ ನಾಯಕತ್ವದ ವಿರುದ್ಧ ಬಂಡಾಯವೆದ್ದರು ಎಂದು ಠಾಕ್ರೆ ಬೆಂಬಲಿಗರು ಆರೋಪಿಸಿದ್ದಾರೆ. ಆದರೆ ಈ ಪ್ರತಿಭಟನೆಗೆ ಶಿಂಧೆ ಪಾಳಯ ಇನ್ನೂ ಸ್ಪಂದಿಸಿಲ್ಲ.

ಸೇನೆಯ ಎರಡು ಬಣಗಳ ನಡುವೆ ಆಗಾಗ್ಗೆ ಘರ್ಷಣೆಗಳು ನಡೆಯುತ್ತಿದ್ದು, ಇತ್ತೀಚಿಗೆ ಗಣೇಶ ಮೂರ್ತಿ ವಿಸರ್ಜನೆ ಘರ್ಷಣೆ ಬಳಿಕ ಈ ಪ್ರಕರಣ ಜರುಗಿದೆ. ಶಿಂಧೆ ನೇತೃತ್ವದ ಬಂಡಾಯವು ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ, ಶರದ್ ಪವಾರ್ ಅವರ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ ಮತ್ತು ಕಾಂಗ್ರೆಸ್ ಮೈತ್ರಿ ಸರ್ಕಾರ ಉರುಳಿಸಿದಾಗಿನಿಂದ ಶಿವಸೇನೆ ಬಣ ರಾಜಕೀಯ ತೀವ್ರಗೊಂಡಿದೆ.

ಮುಂಬೈನ ದಾದರ್‌ನಲ್ಲಿ ಶನಿವಾರ ರಾತ್ರಿ ಗಣೇಶ ಮೂರ್ತಿ ವಿಸರ್ಜನೆ ವೇಳೆ ಎರಡು ಬಣಗಳ ಬೆಂಬಲಿಗರ ನಡುವೆ ಘರ್ಷಣೆ ನಡೆದಿತ್ತು. ಎರಡೂ ಕಡೆಯವರು ಪರಸ್ಪರ ಆರೋಪ-ಪ್ರತ್ಯಾರೋಪ ಮಾಡಿಕೊಂಡರು. ಎರಡು ಕಡೆಯವರು ಮೊದಲು ಪ್ರಭಾದೇವಿಯಲ್ಲಿ ಮತ್ತು ನಂತರ ದಾದರ್ ಪೊಲೀಸ್ ಠಾಣೆಯ ಹೊರಗೆ ಘರ್ಷಣೆ ನಡೆಸಿದರು. ದಾದರ್‌ನಲ್ಲಿ ನಡೆದ ಘರ್ಷಣೆಯಲ್ಲಿ ಶಿಂಧೆ ಪಾಳೆಯದ ಶಿವಸೇನಾ ಶಾಸಕ ಸದಾ ಸರ್ವಾಂಕರ್ ಗುಂಡು ಹಾರಿಸಿದ ಆರೋಪ ಹೊರಿಸಲಾಗಿದೆ. ಘರ್ಷಣೆಗೆ ಸಂಬಂಧಿಸಿದಂತೆ ಠಾಕ್ರೆ ಶಿಬಿರದ ಐವರು ಸೇನಾ ಕಾರ್ಯಕರ್ತರನ್ನು ಬಂಧಿಸಲಾಯಿತು. ಆದರೆ ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಯಿತು.

ಎರಡೂ ಕಡೆಯ ಕನಿಷ್ಠ 10 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT