ಸುವೇಂದು ಅಧಿಕಾರಿ ಸೇರಿ ಹಲವು ನಾಯಕರು ಪೊಲೀಸ್ ವಶಕ್ಕೆ 
ದೇಶ

ಬಿಜೆಪಿಯಿಂದ ‘ನಬನ್ನಾ’ ಮುತ್ತಿಗೆ ಯತ್ನ: ಸುವೇಂದು ಅಧಿಕಾರಿ ಸೇರಿ ಹಲವು ನಾಯಕರು ಪೊಲೀಸ್ ವಶಕ್ಕೆ

ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿ ಬೃಹತ್ ಪ್ರತಿಭಟನೆ ನಡೆಸುತ್ತಿದ್ದ ಪಶ್ಚಿಮ ಬಂಗಾಳದ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಸೇರಿದಂತೆ ಹಲವು ಬಿಜೆಪಿ ನಾಯಕರನ್ನು...

ಕೊಲ್ಕತ್ತಾ: ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿ ಬೃಹತ್ ಪ್ರತಿಭಟನೆ ನಡೆಸುತ್ತಿದ್ದ ಪಶ್ಚಿಮ ಬಂಗಾಳದ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಸೇರಿದಂತೆ ಹಲವು ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪ್ರತಿಭಟನಾ ಮೆರವಣಿಗೆ ಮೂಲಕ ಕೊಲ್ಕತ್ತಾದ ರಾಜ್ಯ ಕಾರ್ಯಾಲಯ ‘ನಬನ್ನಾ’ಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸುವೇಂದು ಅಧಿಕಾರಿ, ಬಿಜೆಪಿ ಸಂಸದ ಲಾಕೆಟ್ ಚಟರ್ಜಿ ಮತ್ತು ರಾಹುಲ್ ಸಿನ್ಹಾ ಸೇರಿದಂತೆ ಪಕ್ಷದ ಇತರ ನಾಯಕರನ್ನು ಸೆಕ್ರೆಟರಿಯೇಟ್ ಬಳಿಯ ಎರಡನೇ ಹೂಗ್ಲಿ ಸೇತುವೆಯ ಬಳಿಗೆ ಬರುತ್ತಿದ್ದಂತೆ ಪೊಲೀಸರು ತಡೆದು ಜೈಲು ವ್ಯಾನ್‌ನಲ್ಲಿ ಕರೆದೊಯ್ದರು.

ಬಂಧನಕ್ಕೂ ಮುನ್ನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪಶ್ಚಿಮ ಬಂಗಾಳವನ್ನು ಉತ್ತರ ಕೊರಿಯಾವನ್ನಾಗಿ ಮಾಡಿದ್ದಾರೆ ಎಂದು ಸುವೇಂದು ಅಧಿಕಾರಿ ವಾಗ್ದಾಳಿ ನಡೆಸಿದ್ದರು.

“ಮುಖ್ಯಮಂತ್ರಿ ಮಮತಾ ಅವರಿಗೆ ಜನರ ಬೆಂಬಲವಿಲ್ಲ ಮತ್ತು ಅವರು ಬಂಗಾಳದಲ್ಲಿ ಉತ್ತರ ಕೊರಿಯಾದಂತೆಯೇ ಸರ್ವಾಧಿಕಾರವನ್ನು ಜಾರಿಗೊಳಿಸುತ್ತಿದ್ದಾರೆ. ಸರ್ಕಾರ ಹೇಳಿದಂತೆ ನಡೆದುಕೊಳ್ಳುತ್ತಿರುವ ಪೊಲೀಸರು ಬೆಲೆ ತೆರಬೇಕಾಗುತ್ತದೆ. ಮುಂದೆ ಬಿಜೆಪಿ ಅಧಿಕಾರಕ್ಕೆ ಬರುತ್ತಿದೆ” ಎಂದು ಅವರು ಹೇಳಿದ್ದಾರೆ.

ಪಶ್ಚಿಮ ಬಂಗಾಳದ ನೂರಾರು ಬಿಜೆಪಿ ಬೆಂಬಲಿಗರು ಇಂದು ಬೆಳಗ್ಗೆ ಕೋಲ್ಕತ್ತಾ ಮತ್ತು ನೆರೆಯ ಹೌರಾಕ್ಕೆ ‘ನಬನ್ನಾ ಅಭಿಯಾನ್’ ಅಥವಾ ಸೆಕ್ರೆಟರಿಯೇಟ್‌ಗೆ ಮೆರವಣಿಗೆಯಲ್ಲಿ ಭಾಗವಹಿಸಲು ಆಗಮಿಸಿದರು. 

ಸುವೇಂದು ಅಧಿಕಾರಿ ಸಂತ್ರಗಚಿ ಪ್ರದೇಶದಿಂದ ಮೆರವಣಿಗೆಯನ್ನು ಮುನ್ನಡೆಸುತ್ತಿದ್ದರೆ, ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ದಿಲೀಪ್ ಘೋಷ್ ಉತ್ತರ ಕೋಲ್ಕತ್ತಾದಿಂದ ಪ್ರತಿಭಟನೆಯನ್ನು ಮುನ್ನಡೆಸುವ ನಿರೀಕ್ಷೆಯಿದೆ. ಬಿಜೆಪಿಯ ಬೃಹತ್ ಪ್ರತಿಭಟನೆಯನ್ನು ತಡೆಯಲು ಪೊಲೀಸರು ನಗರದ ಹಲವು ಪ್ರಮುಖ ಪ್ರದೇಶಗಳಲ್ಲಿ ಬ್ಯಾರಿಕೇಡ್‌ಗಳನ್ನು ಹಾಕಿದ್ದಾರೆ.

“ಟಿಎಂಸಿ ಸರ್ಕಾರವು ಸಾರ್ವಜನಿಕ ದಂಗೆಗೆ ಹೆದರುತ್ತಿದೆ. ಅವರು ನಮ್ಮ ಪ್ರತಿಭಟನಾ ಮೆರವಣಿಗೆಯನ್ನು ನಿಲ್ಲಿಸಲು ಪ್ರಯತ್ನಿಸಿದರೂ, ನಾವು ಶಾಂತಿಯುತವಾಗಿ ವಿರೋಧಿಸುತ್ತೇವೆ. ಯಾವುದೇ ಅಹಿತಕರ ಬೆಳವಣಿಗೆಗೆ ರಾಜ್ಯ ಆಡಳಿತವು ಜವಾಬ್ದಾರಿಯಾಗಿರುತ್ತದೆ” ಎಂದು ದಿಲೀಪ್ ಘೋಷ್ ಇಂದು ಬೆಳಗ್ಗೆ ಹೇಳಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT