ಸರಬ್ಜಿತ್ ಸಿಂಗ್ ಅವರ ಪತ್ನಿ ಸುಖಪ್ರೀತ್ ಕೌರ್ 
ದೇಶ

2013ರಲ್ಲಿ ಪಾಕ್ ಜೈಲಿನಲ್ಲಿ ಮೃತಪಟ್ಟಿದ್ದ ಸರಬ್ಜಿತ್ ಸಿಂಗ್ ಅವರ ಪತ್ನಿ ರಸ್ತೆ ಅಪಘಾತದಲ್ಲಿ ಸಾವು

ಗೂಢಚಾರಿಕೆ ಆರೋಪದ ಹಿನ್ನೆಲೆಯಲ್ಲಿ ಬಂಧನಕ್ಕೊಳಗಾಗಿ ಪಾಕಿಸ್ತಾನದ ಕೋರ್ಟ್ ನಿಂದ ಮರಣದಂಡನೆಗೆ ಗುರಿಯಾಗಿ 2013ರಲ್ಲಿ ಲಾಹೋರ್ ಜೈಲಿನಲ್ಲಿ ನಿಧನರಾಗಿದ್ದ ಸರಬ್ಜಿತ್ ಸಿಂಗ್ ಅವರ ಪತ್ನಿ ಸೋಮವಾರ ಮೃತಪಟ್ಟಿದ್ದಾರೆ.

ಅಮೃತಸರ: ಗೂಢಚಾರಿಕೆ ಆರೋಪದ ಹಿನ್ನೆಲೆಯಲ್ಲಿ ಬಂಧನಕ್ಕೊಳಗಾಗಿ ಪಾಕಿಸ್ತಾನದ ಕೋರ್ಟ್ ನಿಂದ ಮರಣದಂಡನೆಗೆ ಗುರಿಯಾಗಿ 2013ರಲ್ಲಿ ಲಾಹೋರ್ ಜೈಲಿನಲ್ಲಿ ನಿಧನರಾಗಿದ್ದ ಸರಬ್ಜಿತ್ ಸಿಂಗ್ ಅವರ ಪತ್ನಿ ಸೋಮವಾರ ಮೃತಪಟ್ಟಿದ್ದಾರೆ.

ದ್ವಿಚಕ್ರ ವಾಹನದ ಹಿಂಬದಿಯಲ್ಲಿ ಕುಳಿತಿದ್ದ ಸಿಂಗ್ ಅವರ ಪತ್ನಿ ಸುಖಪ್ರೀತ್ ಕೌರ್ ಅವರು, ಇಲ್ಲಿನ ಫತೇಪುರ್ ಬಳಿ ಆಕಸ್ಮಿಕವಾಗಿ ಬಿದ್ದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೂಡಲೇ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಅಷ್ಟೊತ್ತಿಗಾಗಲೇ ಅವರು ಮೃತಪಟ್ಟಿದ್ದರು. ಕೌರ್ ಅವರ ಅಂತ್ಯಕ್ರಿಯೆ ಮಂಗಳವಾರ ತರ್ನ್ ತರಣ್‌ ಪ್ರಾಂತ್ಯದ ಅವರ ಊರಾದ ಭಿಖಿವಿಂಡ್‌ನಲ್ಲಿ ನಡೆಯಲಿದೆ  ಎಂದು ತಿಳಿಸಿದ್ದಾರೆ.

ಸರಬ್ಜಿತ್ ಸಿಂಗ್ ಮತ್ತು ಸುಖಪ್ರೀತ್ ಕೌರ್ ದಂಪತಿಗೆ ಪೂನಂ ಮತ್ತು ಸ್ವಪಂದೀಪ್ ಕೌರ್ ಎಂಬ ಇಬ್ಬರು ಪುತ್ರಿಯರು ಇದ್ದರು.

ಜೂನ್‌ನಲ್ಲಿ, ತನ್ನ ಸಹೋದರನನ್ನು ಪಾಕ್ ಜೈಲಿನಿಂದ ಬಿಡುಗಡೆ ಮಾಡುವ ಪ್ರಯತ್ನದಲ್ಲಿ ಸುದೀರ್ಘ ಹೋರಾಟ ನಡೆಸಿದ್ದ ಸರಬ್ಜಿತ್ ಸಿಂಗ್ ಅವರ ಸಹೋದರಿ ದಲ್ಬೀರ್ ಕೌರ್ ಅವರು ಎದೆನೋವಿನಿಂದ ಮೃತಪಟ್ಟಿದ್ದರು.

22 ವರ್ಷಗಳ ಕಾಲ ಲಾಹೋರ್ ಜೈಲಿನಲ್ಲಿದ್ದ 49 ವರ್ಷದ ಸರಬ್ಜಿತ್ ಸಿಂಗ್ ಮೇಲೆ 2013ರ ಏಪ್ರಿಲ್‌ನಲ್ಲಿ ಕೈದಿಗಳು ಹಲ್ಲೆ ನಡೆಸಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ಸೇರಿಸಲಾಯಿತಾದರೂ ತಲೆಗೆ ತೀವ್ರ ಪೆಟ್ಟು ಬಿದ್ದಿದ್ದರಿಂದ ಅವರು ಮೃತಪಟ್ಟಿದ್ದರು.

ಆಪಾದಿತನ ವಿರುದ್ಧ ಭಯೋತ್ಪಾದನೆ ಮತ್ತು ಬೇಹುಗಾರಿಕೆ ಆರೋಪದಲ್ಲಿ ಪಾಕಿಸ್ತಾನದ ನ್ಯಾಯಾಲಯವು 1991 ರಲ್ಲಿ ಮರಣದಂಡನೆ ಶಿಕ್ಷೆ ನೀಡಿತು. ಆದಾಗ್ಯೂ, ಸರ್ಕಾರವು 2008 ರಲ್ಲಿ ಅನಿರ್ದಿಷ್ಟ ಅವಧಿಗೆ ಅವರ ಮರಣದಂಡನೆಯನ್ನು ತಡೆಹಿಡಿಯಿತು.

ಬಳಿಕ ಅವರ ಮರಣದ ನಂತರ, ಸರಬ್ಜಿತ್ ಅವರ ದೇಹವನ್ನು ಲಾಹೋರ್‌ನಿಂದ ಅಮೃತಸರಕ್ಕೆ ತರಲಾಯಿತು. ಅಲ್ಲಿ ಅವರ ಅಂತಿಮ ವಿಧಿವಿಧಾನಗಳನ್ನು ನಡೆಸಲಾಯಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT