ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ 
ದೇಶ

ಎಂಟು ಕಾಂಗ್ರೆಸ್ ಶಾಸಕರು ಯಾವುದೇ ಷರತ್ತುಗಳಿಲ್ಲದೆ ಬಿಜೆಪಿ ಸೇರಿದ್ದಾರೆ: ಗೋವಾ ಸಿಎಂ ಪ್ರಮೋದ್ ಸಾವಂತ್

ಕಾಂಗ್ರೆಸ್‌ನ ಎಂಟು ಶಾಸಕರು ಬೇಷರತ್ತಾಗಿ ಆಡಳಿತಾರೂಢ ಭಾರತೀಯ ಜನತಾ ಪಕ್ಷಕ್ಕೆ(ಬಿಜೆಪಿ) ಸೇರಿದ್ದಾರೆ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ಬುಧವಾರ ಹೇಳಿದ್ದಾರೆ.

ಪಣಜಿ: ಕಾಂಗ್ರೆಸ್‌ನ ಎಂಟು ಶಾಸಕರು ಬೇಷರತ್ತಾಗಿ ಆಡಳಿತಾರೂಢ ಭಾರತೀಯ ಜನತಾ ಪಕ್ಷಕ್ಕೆ(ಬಿಜೆಪಿ) ಸೇರಿದ್ದಾರೆ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ಬುಧವಾರ ಹೇಳಿದ್ದಾರೆ.

ರಾಜ್ಯ ಬಿಜೆಪಿ ಮುಖ್ಯಸ್ಥ ಸದಾನಂದ ಶೇಟ್ ತನವಡೆ ಅವರೊಂದಿಗೆ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಾವಂತ್, 40 ಸದಸ್ಯ ಬಲದ ವಿಧಾನಸಭೆಯಲ್ಲಿ ಎಂಟು ಹೊಸ ಸದಸ್ಯರೊಂದಿಗೆ ಬಿಜೆಪಿಯ ಬಲ 28ಕ್ಕೆ ಏರಿದೆ ಎಂದು ತಿಳಿಸಿದರು.

ಮಾಜಿ ಮುಖ್ಯಮಂತ್ರಿ ದಿಗಂಬರ್ ಕಾಮತ್ ಸೇರಿದಂತೆ ಕಾಂಗ್ರೆಸ್‌ನ 11 ಶಾಸಕರ ಪೈಕಿ ಎಂಟು ಶಾಸಕರು ಇಂದು ಬಿಜೆಪಿ ಸೇರಿದ್ದಾರೆ ಎಂದು ಸಾವಂತ್ ಹೇಳಿದ್ದಾರೆ.

"ಇಂದಿನ ಬೆಳವಣಿಗೆಯೊಂದಿಗೆ, ಬಿಜೆಪಿ ಈಗ 33 ಶಾಸಕರ ಬೆಂಬಲವನ್ನು ಹೊಂದಿದೆ.(ಮಹಾರಾಷ್ಟ್ರವಾದಿ ಗೋಮಾಂತಕ್ ಪಕ್ಷದ ಇಬ್ಬರು ಮತ್ತು ಮೂವರು ಪಕ್ಷೇತರರು ಸೇರಿದಂತೆ) ಈ 8 ಕಾಂಗ್ರೆಸ್ ಶಾಸಕರು ಬೇಷರತ್ತಾಗಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ" ಎಂದು ಸಾವಂತ್ ತಿಳಿಸಿದರು.

ಗೋವಾದಿಂದ 'ಕಾಂಗ್ರೆಸ್ ಛೋಡೋ ಯಾತ್ರೆ' ಆರಂಭವಾಗಿದೆ ಎಂದು ಹೇಳಿರುವ ಸಾವಂತ್, ಮುಂದಿನ ಚುನಾವಣೆಯಲ್ಲಿ ಗೋವಾದಲ್ಲಿ ಮತ್ತೊಂದು ಲೋಕಸಭಾ ಸ್ಥಾನವನ್ನು ಬಿಜೆಪಿ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾದಿಂದ ತೈಲ ಆಮದು: ಭಾರತದ ಮೇಲೆ ಶೇ.100 ರಷ್ಟು ಸುಂಕ ವಿಧಿಸಲು ಅಮೆರಿಕ ಸಂಸದರ ಪ್ರಸ್ತಾಪ!

'ತೀವ್ರ ಧ್ರುವೀಕರಣಗೊಂಡ ಜಗತ್ತು, ಪಶ್ಚಿಮ ಏಷ್ಯಾ ಸಂಘರ್ಷದ ನಡುವೆಯೂ ಬ್ರಿಕ್ಸ್ ಶೃಂಗಸಭೆ ಯಶಸ್ವಿ-ಎಸ್ ಜೈಶಂಕರ್

ಶೇ. 20ರಷ್ಟು ಅಲ್ಪ ಸಂಖ್ಯಾತರು ಸಸ್ಯಾಹಾರಿಗಳು: ಬ್ರಿಕ್ಸ್ ಸಸ್ಯಾಹಾರಿ ಮೆನು ಸಂಬಂದ ಓವೈಸಿ ಪ್ರತಿಕ್ರಿಯೆ

ಸಮುದ್ರ ಅಡ್ಡವಿರದಿದ್ದರೆ ನೆಹರೂ- ಗಾಂಧಿ ಕುಟುಂಬ ಅರಬ್‌ ದೇಶಗಳಲ್ಲೂ ಚುನಾವಣೆಗೆ ನಿಲ್ತಿತ್ತು: ಮಧ್ಯಪ್ರದೇಶ ಸಿಎಂ ಮೋಹನ್ ಯಾದವ್!

ಇನ್ಸ್ ಪೆಕ್ಟರ್ ಧನಂಜಯ್ ಧಮ್ಕಿಗೆ ಸೆಡ್ಡು: ಪೊಲೀಸ್ ಠಾಣೆಯ 200 ಮೀಟರ್ ಅಂತರದಲ್ಲೇ ಮಹಾಗಣಪತಿ ಪ್ರತಿಷ್ಠಾಪನೆ! ಶೋಭಾಯಾತ್ರೆಗೆ ಸಜ್ಜು