ಪ್ರಾತಿನಿಧಿಕ ಚಿತ್ರ 
ದೇಶ

ಮದುವೆಯಾಗುವ ನೆಪವೊಡ್ಡಿ ತೆಲುಗು ನಟಿಯ ಮೇಲೆ ಅತ್ಯಾಚಾರವೆಸಗಿದ ಮುಂಬೈ ಬಿಲ್ಡರ್ ಬಂಧನ!

ಕಪೂರ್ ತನ್ನ ಕಫ್ ಪರೇಡ್ ಪ್ರದೇಶದಲ್ಲಿನ ತನ್ನ ನಿವಾಸದಲ್ಲಿ ಮತ್ತು ಗೋವಾದಲ್ಲಿ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ದೂರುದಾರರು ಹೇಳಿದ್ದಾರೆ.

ಮುಂಬೈ: ಮದುವೆಯಾಗುವ ನೆಪವೊಡ್ಡಿ ತೆಲುಗು ನಟಿಯೊಬ್ಬರ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಬಿಲ್ಡರ್‌ನನ್ನು ಮುಂಬೈ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆರೋಪಿ ಆದಿತ್ಯ ಅಜಯ್ ಕಪೂರ್, ಕೆಲವು ತೆಲುಗು ಸಿನಿಮಾಗಳಲ್ಲಿ ಕೆಲಸ ಮಾಡಿದ್ದ 24 ವರ್ಷದ ನಟಿಯನ್ನು ಉಪನಗರ ಬಾಂದ್ರಾದಲ್ಲಿರುವ ಸ್ನೇಹಿತನ ನಿವಾಸದಲ್ಲಿ ಭೇಟಿಯಾಗಿದ್ದ. ಈ ವೇಳೆ ದೂರವಾಣಿ ಸಂಖ್ಯೆಗಳನ್ನು ವಿನಿಮಯ ಮಾಡಿಕೊಂಡು, ಸಂಪರ್ಕದಲ್ಲಿದ್ದರು. ದಿನಗಳು ಕಳೆದಂತೆ ಅವರಿಬ್ಬರು ಪರಸ್ಪರ ಹತ್ತಿರವಾಗಿದ್ದರು ಎಂದು ಅಧಿಕಾರಿ ಹೇಳಿದ್ದಾರೆ.

'ಮಹಿಳೆಯನ್ನು ಮದುವೆಯಾಗುವುದಾಗಿ ಭರವಸೆ ನೀಡುವ ಮೂಲಕ ಕಪೂರ್ ಆಕೆಯೊಂದಿಗೆ ದೈಹಿಕ ಸಂಪರ್ಕ ಹೊಂದಿದ್ದರು' ಎಂದು ಪ್ರಥಮ ಮಾಹಿತಿ ವರದಿಯನ್ನು (ಎಫ್‌ಐಆರ್) ಉಲ್ಲೇಖಿಸಿ ಅಧಿಕಾರಿ ತಿಳಿಸಿದ್ದಾರೆ.

ಕಪೂರ್ ತನ್ನ ಕಫ್ ಪರೇಡ್ ಪ್ರದೇಶದಲ್ಲಿನ ತನ್ನ ನಿವಾಸದಲ್ಲಿ ಮತ್ತು ಗೋವಾದಲ್ಲಿ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ದೂರುದಾರರು ಹೇಳಿದ್ದಾರೆ.

'ತನ್ನನ್ನು ಮದುವೆಯಾಗುವಂತೆ ಕೇಳಿದಾಗ ಆತ ತನ್ನೊಂದಿಗೆ ದೈಹಿಕ ಸಂಬಂಧವನ್ನು ಮುಂದುವರಿಸುವಂತೆ ಒತ್ತಾಯಿಸಿದ. ಆಕೆ ಅದಕ್ಕೆ ನಿರಾಕರಿಸಿದಾಗ ನಿಂದಿಸಿ ಹಲ್ಲೆಗೆ ಮುಂದಾದ. ಬಳಿತ ಸಂತ್ರಸ್ತೆಯ ಪೋಷಕರ ಫೋನ್ ನಂಬರ್‌ಗೆ ಅಶ್ಲೀಲ ಸಂದೇಶಗಳನ್ನು ಕಳುಹಿಸಿ ಕೊಲೆ ಬೆದರಿಕೆ ಹಾಕಿದ್ದಾನೆ. ಕಿರುಕುಳದಿಂದ ಬೇಸತ್ತು ಮಹಿಳೆ ಪೊಲೀಸರನ್ನು ಸಂಪರ್ಕಿಸಿದ್ದಾಳೆ' ಎಂದು ಅವರು ಹೇಳಿದರು.

ಆರಂಭದಲ್ಲಿ ಅತ್ಯಾಚಾರದ ಆರೋಪದ ಮೇಲೆ ಎನ್‌ಎಂ ಜೋಶಿ ಮಾರ್ಗ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು, ನಂತರ ಅಪರಾಧವು ಅವರ ವ್ಯಾಪ್ತಿಯಲ್ಲಿ ನಡೆದಿದ್ದರಿಂದ ಕಫ್ ಪರೇಡ್ ಪೊಲೀಸ್ ಠಾಣೆಗೆ ವರ್ಗಾಯಿಸಲಾಯಿತು.

ಅತ್ಯಾಚಾರ, ಮಾಹಿತಿ ತಂತ್ರಜ್ಞಾನ ಕಾಯ್ದೆ ಸೇರಿದಂತೆ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಕಪೂರ್ ಅವರನ್ನು ಬಂಧಿಸಲಾಗಿದೆ. ಸದ್ಯ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT