ಅಮಿತ್ ಶಾ ಮತ್ತು ಪ್ರಧಾನಿ ಮೋದಿಯವರ ಸಂಗ್ರಹ ಚಿತ್ರ 
ದೇಶ

ಸೆಪ್ಟೆಂಬರ್ 14 ಹಿಂದಿ ದಿವಸ್ ಆಚರಣೆ: ಹಿಂದಿ ಭಾಷೆ ಭಾರತಕ್ಕೆ ವಿಶೇಷ ಗೌರವ ತಂದಿದೆ ಎಂದ ಪ್ರಧಾನಿ ಮೋದಿ

ದೇಶಾದ್ಯಂತ ಇಂದು ಬುಧವಾರ ಸೆಪ್ಟೆಂಬರ್ 14ರಂದು ಹಿಂದಿ ದಿವಸ ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಹಿಂದಿ ದಿನದ ಪ್ರಾಮುಖ್ಯತೆ, ಹಿಂದಿ ಭಾಷೆ, ಕೇಂದ್ರ ಸರ್ಕಾರ ಹಿಂದಿ ಭಾಷೆಗೆ ಒತ್ತು ನೀಡುತ್ತಿರುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಬರೆದುಕೊಂಡಿದ್ದಾರೆ.

ನವದೆಹಲಿ: ದೇಶಾದ್ಯಂತ ಇಂದು ಬುಧವಾರ ಸೆಪ್ಟೆಂಬರ್ 14ರಂದು ಹಿಂದಿ ದಿವಸ ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಹಿಂದಿ ದಿನದ ಪ್ರಾಮುಖ್ಯತೆ, ಹಿಂದಿ ಭಾಷೆ, ಕೇಂದ್ರ ಸರ್ಕಾರ ಹಿಂದಿ ಭಾಷೆಗೆ ಒತ್ತು ನೀಡುತ್ತಿರುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಬರೆದುಕೊಂಡಿದ್ದಾರೆ.

ಪ್ರಧಾನಿ ಮೋದಿ ಟ್ವೀಟ್ ಮಾಡಿ, ಪ್ರಪಂಚದಾದ್ಯಂತ ಹಿಂದಿ ಭಾಷೆ, ಭಾರತಕ್ಕೆ ವಿಶೇಷ ಗೌರವವನ್ನು ತಂದಿದೆ. ಅದರ ಸರಳತೆ, ಸ್ವಾಭಾವಿಕತೆ ಮತ್ತು ಸೂಕ್ಷ್ಮತೆಯು ಯಾವಾಗಲೂ ಆಕರ್ಷಿಸುತ್ತದೆ. ಹಿಂದಿ ದಿವಸವಾದ ಇಂದು, ಅದನ್ನು ಸಮೃದ್ಧವಾಗಿ ಮತ್ತು ಸಬಲೀಕರಣಗೊಳಿಸಲು ದಣಿವರಿಯಿಲ್ಲದೆ ಕೊಡುಗೆ ನೀಡಿದ ಎಲ್ಲರಿಗೂ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸುತ್ತೇನೆ ಎಂದಿದ್ದಾರೆ. 

ಹಿಂದಿ ಭಾಷೆ ಭಾರತದ ಎಲ್ಲಾ ಭಾಷೆಗಳ ಸ್ನೇಹಿಯಾಗಿದ್ದು ಅಧಿಕೃತ ಭಾಷೆಯಾಗಿ ಐಕ್ಯತೆಯ ನೂಲಿನಲ್ಲಿ ಇಡೀ ದೇಶವನ್ನು ಒಗ್ಗೂಡಿಸುತ್ತದೆ ಎಂದು ಹೇಳಿದ್ದಾರೆ. 

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಹಿಂದಿಯ ಜೊತೆಗೆ ಎಲ್ಲಾ ಸ್ಥಳೀಯ ಭಾಷೆಗಳು ಸಮನಾಗಿ ಬೆಳವಣಿಗೆಯಾಗಬೇಕು ಎಂದಿದ್ದಾರೆ. 

ಪ್ರತಿ ವರ್ಷ ಸೆಪ್ಟೆಂಬರ್ 14ನ್ನು ಹಿಂದಿ ದಿನವನ್ನಾಗಿ ಆಚರಿಸಲಾಗುತ್ತದೆ. ಭಾರತ ಒಕ್ಕೂಟ ವ್ಯವಸ್ಥೆಯಲ್ಲಿ ಅಧಿಕೃತ ಭಾಷೆ ಎಂದು ಹಿಂದಿಯನ್ನು ಘೋಷಿಸಿದ ನಂತರ ಇಂದಿನ ದಿನವನ್ನು ಹಿಂದಿ ಭಾಷಾ ದಿನ ಎಂದು ಅರ್ಪಿಸಲಾಗಿದೆ. ಭಾರತದ ಮೊದಲ ಪ್ರಧಾನಿ ಜವಹರಲಾಲ್ ನೆಹರೂ ಅವರು ಸೆಪ್ಟೆಂಬರ್ 14ನ್ನು ಹಿಂದಿ ದಿನ ಎಂದು ಘೋಷಿಸಿದರು. 

ದೇವನಗರಿ ಲಿಪಿಯಲ್ಲಿ ಬರೆದಿರುವ ಹಿಂದಿಯನ್ನು ಸಂಯುಕ್ತ ಭಾರತದ ಅಧಿಕೃತ ಭಾಷೆಯೆಂದು ಸೆಪ್ಟೆಂಬರ್ 14, 1949ರಲ್ಲಿ ಘೋಷಿಸಿ ಇಂಗ್ಲಿಷ್ ಭಾಷೆಯನ್ನು ಎರಡನೇ ಅಧಿಕೃತ ಭಾಷೆಯೆಂದು ಘೋಷಿಸಲಾಯಿತು. 

ಹಿಂದಿ ಭಾಷೆಯನ್ನು ಅಧಿಕೃತ ಭಾಷೆಯೆಂದು ಭಾರತದಲ್ಲಿ ಸಂವಿಧಾನ 1950, ಜನವರಿ 26ರಂದು ಕಾನೂನುಬದ್ಧಗೊಳಿಸಿತು. ಬಹುಭಾಷೀಯ ದೇಶವಾದ ಭಾರತದಲ್ಲಿ ಸರ್ಕಾರದ ಕೆಲಸ ಕಾರ್ಯಗಳಲ್ಲಿ ಹಿಂದಿಯನ್ನು ಅಧಿಕೃತ ಭಾಷೆಯಾಗಿ ಬಳಸಲಾಗುತ್ತಿದೆ. 

258 ಮಿಲಿಯನ್ ಜನರು ಮಾತನಾಡುತ್ತಿರುವ ಭಾಷೆಯಾದ ಹಿಂದಿ ಪ್ರಪಂಚದಲ್ಲಿ ಅತಿಹೆಚ್ಚು ಜನರು ಮಾತನಾಡುತ್ತಿರುವ ನಾಲ್ಕನೇ ಭಾಷೆ ಎಂದು ಗುರುತಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

ನಟ ದೇವರಾಜ್ 2ನೇ ಪುತ್ರ ನಟ ಪ್ರಣಮ್ ನಿಶ್ಚಿತಾರ್ಥ

Nepal Floods: ನೇಪಾಳದ ವಿನಾಶಕಾರಿ ಪ್ರವಾಹಕ್ಕೆ ಇದೇನಾ ಕಾರಣ? ಉಪಗ್ರಹ ಚಿತ್ರಗಳಲ್ಲಿ ಸ್ಫೋಟಕ ಸುಳಿವು!

'Chhatron Ki Goonj' ಕಾರ್ಯಕ್ರಮದ ವೇಳೆ Rahul Gandhi ಮಾಡಿದ 29 ತಪ್ಪುಗಳ ದಾಖಲೆ ನೀಡಿದ ಜೂಟ್ ಕಿ ಗೂಂಜ್ ವೆಬ್​ಸೈಟ್!