ಜಸ್ಟಿನ್ ಬೀಬರ್ 
ದೇಶ

ಖ್ಯಾತ ಗಾಯಕ  ಜಸ್ಟಿನ್ ಬೀಬರ್‌ 'ಇಂಡಿಯಾ ಶೋ' ರದ್ದು

ಖ್ಯಾತ ಪಾಪ್ ಗಾಯಕ ಜಸ್ಟಿನ್ ಬೀಬರ್ ತನ್ನ ಅನಾರೋಗ್ಯದ ಕಾರಣದಿಂದ ಭಾರತ ಭೇಟಿಯನ್ನು ರದ್ದುಗೊಳಿಸಿದ್ದಾರೆ ಎಂದು ಪ್ರವರ್ತಕರಾದ ಬುಕ್‌ ಮೈಶೋ ಗುರುವಾರ ತಿಳಿಸಿದೆ. ತನ್ನ ಮುಖಕ್ಕೆ ಪಾರ್ಶ್ವವಾಯು ಹೊಡೆದಿದೆ ಎಂದು ಬೀಬರ್‌ ಹೇಳಿಕೊಂಡ ಮೂರು ತಿಂಗಳ ನಂತರ ಈ ಬೆಳವಣಿಗೆ ನಡೆದಿದೆ. 

ನವದೆಹಲಿ: ಖ್ಯಾತ ಪಾಪ್ ಗಾಯಕ ಜಸ್ಟಿನ್ ಬೀಬರ್ ತನ್ನ ಅನಾರೋಗ್ಯದ ಕಾರಣದಿಂದ ಭಾರತ ಭೇಟಿಯನ್ನು ರದ್ದುಗೊಳಿಸಿದ್ದಾರೆ ಎಂದು ಪ್ರವರ್ತಕರಾದ ಬುಕ್‌ ಮೈಶೋ ಗುರುವಾರ ತಿಳಿಸಿದೆ. ತನ್ನ ಮುಖಕ್ಕೆ ಪಾರ್ಶ್ವವಾಯು ಹೊಡೆದಿದೆ ಎಂದು ಬೀಬರ್‌ ಹೇಳಿಕೊಂಡ ಮೂರು ತಿಂಗಳ ನಂತರ ಈ ಬೆಳವಣಿಗೆ ನಡೆದಿದೆ. 

'ಜಸ್ಟೀಸ್ ವರ್ಲ್ಡ್ ಟೂರ್' ಭಾಗವಾಗಿ ಅಕ್ಟೋಬರ್ 18 ರಂದು ನವದೆಹಲಿಯಲ್ಲಿ ಪ್ರದರ್ಶನ ನೀಡಲು ಸಜ್ಜಾಗಿದ್ದ 28 ವರ್ಷದ ಗ್ರ್ಯಾಮಿ ವಿಜೇತ, ಜೂನ್ 15 ರಂದು ಅನಾರೋಗ್ಯದ ಕಾರಣ ತಮ್ಮ ವಿಶ್ವ ಪ್ರವಾಸಕ್ಕೆ ವಿರಾಮ ನೀಡುತ್ತಿರುವುದಾಗಿ ಹೇಳಿದ್ದರು.

"ಆರೋಗ್ಯದ ಕಾಳಜಿಯಿಂದಾಗಿ, ದುರದೃಷ್ಟವಶಾತ್ ಅವರು ಮುಂದಿನ ತಿಂಗಳು ಜವಹರ್ ಲಾಲ್ ನೆಹರು ಮೈದಾನದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಮಾಹಿತಿ ನೀಡಲಾಗಿದೆ ಎಂದು ವಕ್ತಾರರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಜಸ್ಟಿನ್ ಬೀಬರ್ ಅವರ ಭಾರತ ಪ್ರವಾಸ ರದ್ದುಗೊಂಡಿರುವುದರಿಂದ ಕಂಪನಿಯು ಟಿಕೆಟ್ ಮೊತ್ತವನ್ನು ಜನರಿಗೆ ಮರುಪಾವತಿಸಲಿದೆ ಎಂದು ವಕ್ತಾರರು ತಿಳಿಸಿದ್ದಾರೆ. ಬುಕ್ ಮೈ ಶೋ ಈಗಾಗಲೇ ಪ್ರದರ್ಶನಕ್ಕಾಗಿ ಟಿಕೆಟ್‌ಗಳನ್ನು ಖರೀದಿಸಿದ ಎಲ್ಲಾ ಗ್ರಾಹಕರಿಗೆ  ಮರುಪಾವತಿಯನ್ನು ಪ್ರಾರಂಭಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT