ದೆಹಲಿ ಸಿಎಂ ಕೇಜ್ರಿವಾಲ್ 
ದೇಶ

ಸಿಬಿಐ, ಇ.ಡಿ ಅನಾವಶ್ಯಕವಾಗಿ ಎಲ್ಲರಿಗೂ ತೊಂದರೆ ನೀಡುತ್ತಿವೆ, ಅಬಕಾರಿ ಹಗರಣ ಏನೆಂದು ಅರ್ಥವಾಗುತ್ತಿಲ್ಲ: ಕೇಜ್ರಿವಾಲ್

ಕೇಂದ್ರೀಯ ತನಿಖಾ ದಳ ಮತ್ತು ಜಾರಿ ನಿರ್ದೇಶನಾಲಯ ಅನಗತ್ಯವಾಗಿ ಎಲ್ಲರಿಗೂ ತೊಂದರೆ ನೀಡುತ್ತಿವೆ ಎಂದು ಆರೋಪಿಸಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಈ ರೀತಿಯಿಂದ ದೇಶ ಪ್ರಗತಿ ಸಾಧಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ನವದೆಹಲಿ: ಕೇಂದ್ರೀಯ ತನಿಖಾ ದಳ ಮತ್ತು ಜಾರಿ ನಿರ್ದೇಶನಾಲಯ ಅನಗತ್ಯವಾಗಿ ಎಲ್ಲರಿಗೂ ತೊಂದರೆ ನೀಡುತ್ತಿವೆ ಎಂದು ಆರೋಪಿಸಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಈ ರೀತಿಯಿಂದ ದೇಶ ಪ್ರಗತಿ ಸಾಧಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಲೆಫ್ಟಿನೆಂಟ್ ಗವರ್ನರ್, ಸಿಬಿಐ ಮತ್ತು ಬಿಜೆಪಿ ಆಪಾದಿತ ಅಬಕಾರಿ ಹಗರಣದಲ್ಲಿ ವಿವಿಧ ಪ್ರಮಾಣದ ಹಣವನ್ನು ಉಲ್ಲೇಖಿಸಿವೆ. ಆದರೆ, ಅಬಕಾರಿ ಹಗರಣ ಎಂದರೆ ಏನೆಂಬುದು ನಿಜವಾಗಿಯೂ ನನಗೆ ಅರ್ಥವಾಗುತ್ತಿಲ್ಲ ಎಂದಿದ್ದಾರೆ.

ದೆಹಲಿ ಸರ್ಕಾರದ ಅಬಕಾರಿ ನೀತಿಯಲ್ಲಿ ಅಕ್ರಮ ನಡೆದಿದೆ ಎನ್ನಲಾದ ಆರೋಪಗಳ ಬಗ್ಗೆ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯ ಶುಕ್ರವಾರ ದೇಶಾದ್ಯಂತ ಸುಮಾರು 40 ಸ್ಥಳಗಳಲ್ಲಿ ಹೊಸದಾಗಿ ದಾಳಿ ನಡೆಸಿದೆ.

'ಅವರ (ಬಿಜೆಪಿ) ನಾಯಕರೊಬ್ಬರು 8,000 ಕೋಟಿ ರೂಪಾಯಿ ಹಗರಣ ಎಂದು ಹೇಳುತ್ತಾರೆ, ಎಲ್‌ಜಿ 144 ಕೋಟಿ ರೂಪಾಯಿ ಹಗರಣ ಎಂದು ಹೇಳುತ್ತಾರೆ ಮತ್ತು ಸಿಬಿಐ ಎಫ್‌ಐಆರ್‌ನಲ್ಲಿ 1 ಕೋಟಿ ರೂಪಾಯಿ ಹಗರಣವಿದೆ ಎಂದು ಹೇಳುತ್ತದೆ. ಅಬಕಾರಿ ಹಗರಣ ಏನೆಂಬುದು ನನಗೆ ಅರ್ಥವಾಗುತ್ತಿಲ್ಲ' ಎಂದು ಕೇಜ್ರಿವಾಲ್ ಹೇಳಿದ್ದಾರೆ.

ಈ ರೀತಿ ಮುಂದುವರಿದರೆ ದೇಶವು ಪ್ರಗತಿ ಸಾಧಿಸಲು ಸಾಧ್ಯವಿಲ್ಲ. ಅವರು ಅನಗತ್ಯವಾಗಿ ಎಲ್ಲರಿಗೂ ತೊಂದರೆ ಕೊಡುತ್ತಿದ್ದಾರೆ ಎಂದು ದೂರಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods|ಮೃತರ ಸಂಖ್ಯೆ 165ಕ್ಕೆ ಏರಿಕೆ; ನಾಪತ್ತೆಯಾದವರಲ್ಲಿ 133 ಮಂದಿ ಭಾರತೀಯರು

Iran ಸರ್ವೋಚ್ಚ ನಾಯಕ Mojtaba Khamenei ಸತ್ತಿಲ್ಲ, ಗಂಭೀರವಾಗಿ ಗಾಯಗೊಂಡಿದ್ದಾರೆ: ಹಳೇ Vidoe ಬಿಡುಗಡೆ ಬೆನ್ನಲ್ಲೇ ಅಸಲಿಯತ್ತು ಬಿಚ್ಚಿಟ್ಟ Donald Trump..!

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ