ಸಾಂದರ್ಭಿಕ ಚಿತ್ರ 
ದೇಶ

ಪತಿ, ಅವನಲ್ಲ ಅವಳು, ಮದುವೆಯಾಗಿ 8 ವರ್ಷಗಳ ಬಳಿಕ ಬಹಿರಂಗವಾದ ಸತ್ಯ!

ಮದುವೆಯಾಗಿ 8 ವರ್ಷ ಕಳೆದ ನಂತರ ತನ್ನ ಪತಿ ಮೊದಲು ಮಹಿಳೆಯಾಗಿದ್ದಳು ಎಂಬ ಸತ್ಯ ತಿಳಿದುಬಂದಿದ್ದು, ಗುಜರಾತ್‍ನ ವಡೋದರಾದಲ್ಲಿ ಮಹಿಳೆಯೊಬ್ಬರು ಶಾಕ್ ಆಗಿದ್ದಾಳೆ.

ನವದೆಹಲಿ: ಮದುವೆಯಾಗಿ 8 ವರ್ಷ ಕಳೆದ ನಂತರ ತನ್ನ ಪತಿ ಮೊದಲು ಮಹಿಳೆಯಾಗಿದ್ದಳು ಎಂಬ ಸತ್ಯ ತಿಳಿದುಬಂದಿದ್ದು, ಗುಜರಾತ್‍ನ ವಡೋದರಾದಲ್ಲಿ ಮಹಿಳೆಯೊಬ್ಬರು ಶಾಕ್ ಆಗಿದ್ದಾಳೆ.

40 ವರ್ಷದ ಮಹಿಳೆಯೊಬ್ಬರು 2014ರಲ್ಲಿ ಮದುವೆಯಾದ ವ್ಯಕ್ತಿ ಪುರುಷನಾಗಲು ಲಿಂಗ ಬದಲಾವಣೆಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಈ ವಿಚಾರವನ್ನು ತನ್ನಿಂದ ಮುಚ್ಚಿಟ್ಟಿರುವುದು ತಿಳಿದು ಕಂಗಲಾಗಿದ್ದಾಳೆ.

ಈ ಸಂಬಂಧ ಮಹಿಳೆ ಬುಧವಾರ ಗೋತ್ರಿ ಪೊಲೀಸ್‍ನಲ್ಲಿ ದೂರು ದಾಖಲಿಸಿದ್ದು, ತನ್ನ ಪತಿ ವಿರಾಜ್ ವರ್ಧನ್ ವಂಚನೆ ಮತ್ತು ಅಸ್ವಾಭಾವಿಕ ಲೈಂಗಿಕತೆಗೆ ನಡೆಸಿರುವುದಾಗಿ ಆರೋಪಿಸಿದ್ದಾರೆ. ಎಫ್‍ಐಆರ್‌ನಲ್ಲಿ ಅವರ ಕುಟುಂಬಸ್ಥರ ಹೆಸರನ್ನು ಉಲ್ಲೇಖಿಸಿದ್ದಾಳೆ.

ಶೀತಲ್​ ಮೊದಲ​ ಪತಿ ರಸ್ತೆ ಅಪಘಾತದಲ್ಲಿ ನಿಧನರಾದರು. ಆಗ ಅವರಿಗೆ ಹದಿನಾಲ್ಕು ವರ್ಷದ ಮಗಳಿದ್ದಳು. ಎರಡನೇ ಮದುವೆಯ ಬಗ್ಗೆ ಅವರಿಗೆ ಆಲೋಚನೆ ಬಂದಿತು. ನಂತರ ಮ್ಯಾಟ್ರಿಮೋನಿಯಲ್ ವೆಬ್‌ಸೈಟ್ ಒಂದನ್ನು ಸಂಪರ್ಕಿಸಿದರು. ಆಗ ವಿರಾಜ್ ವರ್ಧನ್ ಎನ್ನುವವರ ಪರಿಚಯವಾಯಿತು. 2014ರಲ್ಲಿ ಕುಟುಂಬ ಸದಸ್ಯರ ಸಮ್ಮುಖದಲ್ಲಿ ವಿರಾಜ್ ವರ್ಧನ್​ ಅವರೊಂದಿಗೆ ಶಾಸ್ತ್ರೋಕ್ತವಾಗಿ ಶೀತಲ್​ ಮದುವೆಯಾದರು.

ಫೆಬ್ರವರಿ  2014 ರಲ್ಲಿ ಕುಟುಂಬಸ್ಥರ ಸಮ್ಮುಖದಲ್ಲಿ ವಿರಾಜ್ ವರ್ಧನ್ ಮಹಿಳೆ ಮದುವೆಯಾಗಿದ್ದು, ನಂತರ ಹನಿಮೂನ್‍ಗಾಗಿ ಕಾಶ್ಮೀರಕ್ಕೆ ತೆರಳಿದ್ದರು. ಆದರೆ ವ್ಯಕ್ತಿ ಈ ವೇಳೆ ವಿಚಿತ್ರವಾಗಿ ವರ್ತಿಸುತ್ತಿದ್ದರು. ಸದಾ ಮುನಿಸಿಕೊಳ್ಳುವ ಮೂಲಕ ನನ್ನಿಂದ ದೂರ ಉಳಿದಿದ್ದರು. ನಂತರ ಮಹಿಳೆ ಆತನ ಮೇಲೆ ಒತ್ತಡ ಹೇರಿದಾಗ, ಕೆಲವು ವರ್ಷಗಳ ಹಿಂದೆ ರಷ್ಯಾದಲ್ಲಿ ಸಂಭವಿಸಿದ ಅಪಘಾತದಿಂದ ತಾನು ಲೈಂಗಿಕ ಕ್ರಿಯೆ ಹೊಂದಲು ಅಸಮರ್ಥನಾಗಿದ್ದೇನೆ ಎಂದು ವ್ಯಕ್ತಿ ಪತ್ನಿ ಬಳಿ ಹೇಳಿಕೊಂಡಿದ್ದು, ಸಣ್ಣ ಶಸ್ತ್ರ ಚಿಕಿತ್ಸೆ ಮಾಡಿಸಿದರೆ ಸರಿಯಾಗಲಿದೆ ಎಂದು ಆರೋಪಿ ಹೇಳಿ ನಂಬಿಸಿದ್ದನು.

ಆದರೆ ಜನವರಿ 2020ರಲ್ಲಿ, ಸ್ಥೂಲಕಾಯಕ್ಕೆ ಸಂಬಂಧಿಸಿದ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಬೇಕೆಂದು ಸುಳ್ಳು ಹೇಳಿದ ವಿರಾಜ್, ಲಿಂಗ ಪರಿವರ್ತನೆ ಶಸ್ತ್ರಚಿಕಿತ್ಸೆಗೆ ಒಳಗಾದರು. ನಂತರ ಈ ವಿಷಯವನ್ನು ಶೀತಲ್​ ಅವರಿಗೆ ಈ ವಿಷಯ ತಿಳಿದು ಆಕೆ ಆಘಾತಕ್ಕೆ ಒಳಗಾದರು. ಅಷ್ಟಕ್ಕೆ ಸುಮ್ಮನಾಗದ ವಿರಾಜ್ ಅಸಹಜ ಲೈಂಗಿಕ ಕ್ರಿಯೆಯಲ್ಲಿ ಒಳಗೊಳ್ಳಲು ಒತ್ತಾಯಿಸಲಾರಂಭಿಸಿದರು. ಈ ವಿಷಯವನ್ನು ಬಹಿರಂಗಪಡಿಸಿದರೆ ಭಯಂಕರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದೂ ಬೆದರಿಸಿದ್ದಾಗಿ ಮಹಿಳೆ ಪೊಲೀಸರಿಗೆ ಹೇಳಿದ್ದಾಳೆ.

ಉಪಾಯಗಾಣದ ಶೀತಲ್​ ಪೊಲೀಸರಿಗೆ ಈ ವಿಷಯ ತಿಳಿಸಿ ಪ್ರಕರಣ ದಾಖಲಿಸಿದರು. ದೆಹಲಿ ನಿವಾಸಿಯಾಗಿರುವ ಆರೋಪಿ ವಿರಾಜ್​ ಇದೀಗ ವಡೋದರಾ ಪೊಲೀಸರ ಬಂಧನದಲ್ಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT