ಅಮಾನತುಲ್ಲಾ ಖಾನ್ 
ದೇಶ

ದೆಹಲಿ ವಕ್ಫ್ ಬೋರ್ಡ್ ನೇಮಕಾತಿ ಅಕ್ರಮ: ಎಎಪಿ ಶಾಸಕ ಅಮಾನತುಲ್ಲಾ ಖಾನ್ 4 ದಿನ ಎಸಿಬಿ ವಶಕ್ಕೆ

ದೆಹಲಿ ವಕ್ಫ್‌ ಬೋರ್ಡ್‌ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಎಎಪಿ ಶಾಸಕ ಅಮಾನತುಲ್ಲಾ ಖಾನ್‌ ಅವರನ್ನು ನಾಲ್ಕು ದಿನಗಳ ಕಾಲ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ದ ವಶಕ್ಕೆ ನೀಡಿ ದೆಹಲಿ ಕೋರ್ಟ್...

ನವದೆಹಲಿ: ದೆಹಲಿ ವಕ್ಫ್‌ ಬೋರ್ಡ್‌ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಎಎಪಿ ಶಾಸಕ ಅಮಾನತುಲ್ಲಾ ಖಾನ್‌ ಅವರನ್ನು ನಾಲ್ಕು ದಿನಗಳ ಕಾಲ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ದ ವಶಕ್ಕೆ ನೀಡಿ ದೆಹಲಿ ಕೋರ್ಟ್ ಶನಿವಾರ ಆದೇಶಿಸಿದೆ.

ವಿಶೇಷ ನ್ಯಾಯಾಧೀಶ ವಿಕಾಸ್ ಧುಲ್ ಅವರು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಸಲ್ಲಿಸಿದ ಮನವಿಯ ಮೇರೆಗೆ ಆರೋಪಿ ಶಾಸಕರನ್ನು ನಾಲ್ಕು ದಿನ ಎಸಿಬಿ ವಶಕ್ಕೆ ನೀಡಿ ಆದೇಶಿಸಿದ್ದಾರೆ.

ನೇಮಕಾತಿ ವೇಳೆ ಖಾನ್ ಅವರ ಐದು ಸಂಬಂಧಿಕರನ್ನು ಮಂಡಳಿಯಲ್ಲಿ ಅಕ್ರಮವಾಗಿ ನೇಮಕ ಮಾಡಿಕೊಳ್ಳಲಾಗಿದೆ ಮತ್ತು 22 ಜನರನ್ನು ಅವರು ಪ್ರತಿನಿಧಿಸುವ ಓಖ್ಲಾ ಕ್ಷೇತ್ರದಿಂದ ನೇಮಕ ಮಾಡಲಾಗಿದೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಲು ಖಾನ್ ಅವರನ್ನು 14 ದಿನಗಳ ಕಾಲ ನಮ್ಮ ವಶಕ್ಕೆ ನೀಡುವಂತೆ ಎಸಿಬಿ ಮನವಿ ಮಾಡಿತ್ತು. ಆದರೆ ಕೋರ್ಟ್ ಆರೋಪಿಯನ್ನು ನಾಲ್ಕು ದಿನ ಮಾತ್ರ ಎಸಿಬಿ ವಶಕ್ಕೆ ನೀಡಿದೆ.

2020ರಲ್ಲಿ ಭ್ರಷ್ಟಾಚಾರ ತಡೆ ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಬೆಳಗ್ಗೆ ಓಖ್ಲಾ ಶಾಸಕ ಅಮಾನತುಲ್ಲಾ ಖಾನ್ ರನ್ನು ವಿಚಾರಣೆಗೆ ಕರೆಯಲಾಗಿತ್ತು. ವಿಚಾರಣೆ ಬೆನ್ನಲ್ಲೇ ಖಾನ್ ಅವರ ನಿವಾಸ ಹಾಗೂ ಕಚೇರಿಗಳ ಮೇಲೆ ಎಸಿಬಿ ದಾಳಿ ನಡೆಸಿದ್ದು, ದಾಳಿ ವೇಳೆ 12 ಲಕ್ಷ ರೂ. ನಗದು ಮತ್ತು ಪರವಾನಗಿ ಇಲ್ಲದ ಗನ್, ಕೆಲವು ಕಾಟ್ರಿಡ್ಜ್‌ಗಳನ್ನು ಜಪ್ತಿ ಮಾಡಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT