ಯೋಗಿ ಆದಿತ್ಯನಾಥ್ ಮೂರ್ತಿ 
ದೇಶ

ಈ ಊರಲ್ಲಿ ಯುಪಿ ಸಿಎಂ ಯೋಗಿ ಆದಿತ್ಯನಾಥರಿಗೆ ದೇವಾಲಯ, ದಿನವೂ ನಡೆಯಲಿದೆ ಪೂಜೆ, ಮಂಗಳಾರತಿ!

ಉತ್ತರ ಪ್ರದೇಶದ ಅಯೋಧ್ಯ ಸಮೀಪವಿರುವ ಸ್ಥಳವೊಂದರಲ್ಲಿ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ದೇವರಂತೆ ಪೂಜಿಸುತ್ತಾರೆ. ಅವರ ರೂಪದ ಮೂರ್ತಿ ನಿರ್ಮಾಣ ಮಾಡಿ ಪ್ರತಿದಿನ ಪೂಜೆ, ಮಂಗಳಾರತಿ ಸೇರಿದಂತೆ ದೇವರಿಗೆ ಕೈಗೊಳ್ಳುವಂತೆ ಪೂಜೆ ಪುನಸ್ಕಾರಗಳನ್ನು ಮಾಡುತ್ತಾರೆ. ಹೌದು ಆ ಊರೇ ಭರತಕುಂಡ್.

ಅಯೋಧ್ಯೆ: ಉತ್ತರ ಪ್ರದೇಶದ ಅಯೋಧ್ಯ ಸಮೀಪವಿರುವ ಸ್ಥಳವೊಂದರಲ್ಲಿ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ದೇವರಂತೆ ಪೂಜಿಸುತ್ತಾರೆ. ಅವರ ರೂಪದ ಮೂರ್ತಿ ನಿರ್ಮಾಣ ಮಾಡಿ ಪ್ರತಿದಿನ ಪೂಜೆ, ಮಂಗಳಾರತಿ ಸೇರಿದಂತೆ ಸ್ವತಃ ದೇವರಿಗೆ ಕೈಗೊಳ್ಳುವ ಪೂಜೆ ಪುನಸ್ಕಾರಗಳನ್ನು ಮಾಡುತ್ತಾರೆ. ಹೌದು ಆ ಊರೇ ಭರತಕುಂಡ್.

ಆರತಿ ಸಮಯದಲ್ಲಿ ಮುಖ್ಯಮಂತ್ರಿಯನ್ನು ಹೊಗಳುವ ಭಜನೆಗಳನ್ನು ಹಾಡಲಾಗುತ್ತದೆ. ಈ ಭಜನೆಗಳನ್ನು ದೇವಾಲಯವನ್ನು ನಿರ್ಮಿಸಿದ ವ್ಯಕ್ತಿ ಪ್ರಭಾಕರ ಮೌರ್ಯ ಅವರೇ ಬರೆದಿದ್ದಾರೆ. ಇವರು 2014ರಿಂದಲೂ ಯೋಗಿ ಪ್ರಚಾರಕರಾಗಿದ್ದಾರೆ.

ಸ್ಥಳ ಪ್ರಚಾರ ಮಾಡಲು ಭಜನೆಗಳ ಆಡಿಯೋ ಮತ್ತು ವಿಡಿಯೋ ಕ್ಯಾಸೆಟ್‌ಗಳನ್ನು ಸಿದ್ಧಪಡಿಸಲಾಗುತ್ತಿದೆ.

ಯುಪಿ ನಗರದಲ್ಲಿ ಬಹುಕಾಲದ ಭರವಸೆಯ ರಾಮಮಂದಿರ ನಿರ್ಮಾಣದ ಹಂತದಲ್ಲಿರುವುದರಿಂದ ಈ ದೇವಾಲಯವನ್ನು ನಿರ್ಮಿಸಲಾಗಿದೆ.  ಪ್ರಭಾಕರ ಮೌರ್ಯ ಅಯೋಧ್ಯೆಯಿಂದ ಕೇವಲ 15 ಕಿಮೀ ದೂರದಲ್ಲಿ ಈ ದೇವಾಲಯವನ್ನು ನಿರ್ಮಿಸಿದ್ದಾರೆ. ಅಯೋಧ್ಯೆ-ಗೋರಖ್‌ಪುರ ಹೆದ್ದಾರಿಯಲ್ಲಿರುವ ಭರತ್‌ಕುಂಡ್ ಬಳಿ ಇರುವ ಈ ದೇವಾಲಯದ ಜಾಗದಲ್ಲಿ ರಾಮನ ಸಹೋದರ ಭರತನು ತನ್ನ ಮರದ ಚಪ್ಪಲಿಯನ್ನು ಸಿಂಹಾಸನದ ಮೇಲೆ ಇರಿಸುವ ಮೂಲಕ 14 ವರ್ಷಗಳ ಕಾಲ ಅಯೋಧ್ಯೆಯ ಆಳ್ವಿಕೆಯನ್ನು ವಹಿಸಿಕೊಂಡನೆಂದು ನಂಬಲಾಗಿದೆ. 

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾದರೆ ಯೋಗಿ ಆದಿತ್ಯನಾಥರ ದೇವಾಲಯ ನಿರ್ಮಿಸುವುದಾಗಿ ಮೌರ್ಯ ಸಂಕಲ್ಪ ಮಾಡಿದ್ದ. ಅದೇ ರೀತಿಯಲ್ಲಿ ಈಗ ಭವ್ಯವಾದ ರಾಮ ಮಂದಿರನ್ನು ನಿರ್ಮಿಸಲಾಗುತ್ತಿದೆ. ಅದರಲ್ಲಿ ಯೋಗಿ ಆದಿತ್ಯನಾಥ್ ದೊಡ್ಡ ಪಾತ್ರವನ್ನು ವಹಿಸಿದ್ದಾರೆ. ತಮ್ಮ ಸಂಕಲ್ಪ ಈಡೇರಿದ ಹಿನ್ನೆಲೆಯಲ್ಲಿ ಯೋಗಿ ದೇವಾಲಯ ನಿರ್ಮಿಸಿರುವುದಾಗಿ ಮೌರ್ಯ ಹೇಳಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಕರ್ನಾಟಕದ ಅಂಧ ಕ್ರಿಕೆಟ್ ಆಟಗಾರ್ತಿಯರಿಗೆ ತಲಾ 10 ಲಕ್ಷ ರೂ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ನಾಯಕತ್ವ ಬದಲಾವಣೆ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲು ಸಾಧ್ಯವಿಲ್ಲ: ಮಲ್ಲಿಕಾರ್ಜುನ ಖರ್ಗೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಅಯೋಧ್ಯ ಧ್ವಜಾರೋಹಣ ನೆರವೇರಿಸಿದ್ದು ಹೇಗೆ?: ಸ್ವಿಚ್ ಅಥವಾ ಹಗ್ಗ ಬಳಸದ ಪ್ರಧಾನಿ; ಈ ಅದ್ಭುತ Video ನೋಡಿ..

SCROLL FOR NEXT