ಸುಬ್ಬುಲಕ್ಷ್ಮಿ - ಎಂ.ಕೆ.ಸ್ಟಾಲಿನ್ 
ದೇಶ

ಡಿಎಂಕೆ ಉಪ ಪ್ರಧಾನ ಕಾರ್ಯದರ್ಶಿ ಸುಬ್ಬುಲಕ್ಷ್ಮಿ ರಾಜೀನಾಮೆ, ರಾಜಕೀಯದಿಂದಲೂ ನಿವೃತ್ತಿ

ಮಾಜಿ ಕೇಂದ್ರ ಸಚಿವೆ ಹಾಗೂ ಡಿಎಂಕೆ ಉಪ ಪ್ರಧಾನ ಕಾರ್ಯದರ್ಶಿ ಸುಬ್ಬುಲಕ್ಷ್ಮಿ ಜಗದೀಶನ್ ಅವರು ಮಂಗಳವಾರ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರಿಗೆ ರಾಜೀನಾಮೆ ಸಲ್ಲಿಸಿದ್ದು, ಸಕ್ರಿಯ ರಾಜಕೀಯದಿಂದ ನಿವೃತ್ತಿ...

ಚೆನ್ನೈ: ಮಾಜಿ ಕೇಂದ್ರ ಸಚಿವೆ ಹಾಗೂ ಡಿಎಂಕೆ ಉಪ ಪ್ರಧಾನ ಕಾರ್ಯದರ್ಶಿ ಸುಬ್ಬುಲಕ್ಷ್ಮಿ ಜಗದೀಶನ್ ಅವರು ಮಂಗಳವಾರ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರಿಗೆ ರಾಜೀನಾಮೆ ಸಲ್ಲಿಸಿದ್ದು, ಸಕ್ರಿಯ ರಾಜಕೀಯದಿಂದ ನಿವೃತ್ತಿ ಹೊಂದುವುದಾಗಿ ಘೋಷಿಸಿದ್ದಾರೆ.

14ನೇ ಲೋಕಸಭೆಯ ಸದಸ್ಯೆ, ಜಗದೀಶನ್ ದ್ರಾವಿಡ ಮುನ್ನೇತ್ರ ಕಳಗಂ(DMK) ಸದಸ್ಯೆಯಾಗಿ ತಮಿಳುನಾಡಿನ ತಿರುಚೆಂಗೋಡ್ ಕ್ಷೇತ್ರವನ್ನು ಪ್ರತಿನಿಧಿಸಿದ್ದರು. ಅವರು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದಲ್ಲಿ ಕೇಂದ್ರ ರಾಜ್ಯ ಸಚಿವೆಯಾಗಿ ಕಾರ್ಯನಿರ್ವಹಿಸಿದ್ದರು.

ಜಗದೀಶನ್ ಅವರು 1977 ರಿಂದ 1980 ರ ಅವಧಿಯಲ್ಲಿ ತಮಿಳುನಾಡಿನ ಜವಳಿ, ಖಾದಿ, ಕೈಮಗ್ಗ, ಸಣ್ಣ-ಪ್ರಮಾಣದ ಕೈಗಾರಿಕೆಗಳು ಮತ್ತು ಅಬಕಾರಿ ಸಚಿವೆಯಾಗಿಯೂ ಕೆಲಸ ಮಾಡಿದ್ದರು.

1989 ರಿಂದ 1991 ರವರೆಗೆ ಅವರು ತಮಿಳುನಾಡಿನ ಸಮಾಜ ಕಲ್ಯಾಣ ಸಚಿವೆಯಾಗಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT